Home namma chikmagalur chikamagalur ಭಾರಿ ಮಳೆಯ ಆರ್ಭಟಕ್ಕೆ ಮೆಸ್ಕಾಂಗೆ 3.21 ಕೋಟಿ ಹಾನಿ
chikamagalurHomeLatest Newsnamma chikmagalur

ಭಾರಿ ಮಳೆಯ ಆರ್ಭಟಕ್ಕೆ ಮೆಸ್ಕಾಂಗೆ 3.21 ಕೋಟಿ ಹಾನಿ

Share
Share

ಚಿಕ್ಕಮಗಳೂರು: ಮುಂಗಾರುಪೂರ್ವ ಮಳೆ ಮತ್ತು ಭಾರಿ ಗಾಳಿಯ ಆರ್ಭಟಕ್ಕೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮೆಸ್ಕಾಂ ವ್ಯಾಪ್ತಿಯಲ್ಲಿ ಭಾರಿ ಪ್ರಮಾಣದ ಆಸ್ತಿಪಾಸ್ತಿ ಹಾನಿ ಸಂಭವಿಸಿದೆ.

ಏಪ್ರಿಲ್ ಒಂದರಿಂದ ಜೂನ್ ಒಂದರವರೆಗೆ ಮೆಸ್ಕಾಂ ಅಂಕಿ ಅಂಶಗಳ ಪ್ರಕಾರ ಪ್ರಕೃತಿಯ ವಿಕೋಪಕ್ಕೆ ಜಿಲ್ಲೆಯಲ್ಲಿ ಬರೋಬ್ಬರಿ 3.21 ಕೋಟಿ ರೂಪಾಯಿಗಳಿಗೂ ಅಧಿಕ ನಷ್ಟ ಉಂಟಾಗಿದ್ದು ದೊಡ್ಡ ಹೊಡೆತ ಬಿದ್ದಿದೆ. ಜಿಲ್ಲೆಯಾದ್ಯಂತ ಬೀಸಿದ ಬಿರುಗಾಳಿಗೆ ಸಿಲುಕಿ ಒಟ್ಟು 1881 ವಿದ್ಯುತ್ ಕಂಬಗಳು ಧರೆಗುರುಳಿವೆ.

ಕಂಬಗಳು ನೆಲಕಚ್ಚಿದ್ದಲ್ಲದೆ, ಜಿಲ್ಲೆಯ ಒಟ್ಟು 37.62 ಕಿಲೋಮೀಟರ್ ಉದ್ದದ ವಿದ್ಯುತ್ ಮಾರ್ಗಗಳು ಸಂಪೂರ್ಣವಾಗಿ ಹಾನಿಗೀಡಾಗಿದೆ ಇದರಿಂದಾಗಿ ಜಿಲ್ಲೆಯ ಹಲವು ಭಾಗಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡು ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿತ್ತು. ಆದರೆ ಮೆಸ್ಕಾಂ ಸಿಬ್ಬಂದಿ ತಕ್ಷಣವೇ ಕಾರ್ಯಪ್ರವೃತ್ತರಾಗಿ ಯುದ್ಧೋಪಾದಿಯಲ್ಲಿ ದುರಸ್ತಿ ಕಾರ್ಯ ಕೈಗೊಂಡಿದ್ದಾರೆ.

ಹಾನಿಗೊಳಗಾಗಿದ್ದ ಎಲ್ಲಾ 37.62 ಕಿಲೋಮೀಟರ್ ವಿದ್ಯುತ್ ಮಾರ್ಗಗಳನ್ನು ಸರಿಪಡಿಸಲಾಗಿದ್ದು, ಬಿದ್ದಿದ್ದ ಕಂಬಗಳ ಜಾಗದಲ್ಲಿ ಹೊಸ ಕಂಬಗಳನ್ನು ಅಳವಡಿಸುವ ಮೂಲಕ ಬಹುತೇಕ ಕಡೆಗಳಲ್ಲಿ ವಿದ್ಯುತ್ ಸಮಸ್ಯೆಯನ್ನು ಯಶಸ್ವಿಯಾಗಿ ಬಗೆಹರಿಸಲಾಗಿದೆ.

MESCOM suffers Rs 3.21 crore damage due to heavy rains

Share

Leave a comment

Leave a Reply

Your email address will not be published. Required fields are marked *

Don't Miss

ನೀಟ್ ವಿದ್ಯಾರ್ಥಿಗಳ ಹಲ್ಲೆ ಖಂಡಿಸಿ ಸಿಪಿಐನಿಂದ ಪ್ರತಿಭಟನೆ

ಚಿಕ್ಕಮಗಳೂರು:  ನೀಟ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ ಸಿಪಿಐ ತಾಲ್ಲೂಕು ಘಟಕದಿಂದ ಗುರುವಾರ ನಗರದ ಆಜಾದ್‌ಪಾರ್ಕ್ ವೃತ್ತ ದಲ್ಲಿ ಮುಖಂಡರುಗಳು ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ...

ಮಳೆಗಾಗಿ ಅಯ್ಯನಕೆರೆ, ಮದಗದಕೆರೆ ತಪ್ಪಲಿನಲ್ಲಿ ವಿಶೇಷ ಪೂಜೆ

ಚಿಕ್ಕಮಗಳೂರು: ಮಳೆ ಕೊರತೆಯಿಂದ ಆತಂಕಗೊಂಡಿರುವ ಕಡೂರು ತಾಲೂಕಿನ ಅಯ್ಯನಕೆರೆ ಹಾಗೂ ಮದಗದಕೆರೆ ತಪ್ಪಲಿನ ಗ್ರಾಮಸ್ಥರು ಉತ್ತಮ ಮಳೆಯಾಗಿ ಕೆರೆಗಳು ತುಂಬಲಿ ಎಂಬ ಆಶಯದೊಂದಿಗೆ ವಿಶೇಷ ಪೂಜೆ ನೆರವೇರಿಸಿದರು. ಸುಮಾರು 1,300 ಹೆಕ್ಟೇರ್...

Related Articles

ಸಮ ಸಮಾಜ ನಿರ್ಮಿಸಲು ಒಂದಾಗಿ ಹೋರಾಟ ನಡೆಸುವುದು ಇಂದಿನ ಅಗತ್ಯ

ಚಿಕ್ಕಮಗಳೂರು: ಸಮಾನತೆಯ ಆಶಯ ದೊಂದಿಗೆ ಸಮ ಸಮಾಜ ನಿರ್ಮಿಸಲು ಒಂದಾಗಿ ಹೋರಾಟ ನಡೆಸುವುದು ಇಂದಿನ ಅಗತ್ಯ...

ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವು

ಶೃಂಗೇರಿ : ತಾಲೂಕಿನ ನೆಮ್ಮಾರ್ ಸರ್ಕಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ...

ಶಂಕರ ಭಾರತಿ ಗೋಶಾಲೆಗೆ ₹10 ಲಕ್ಷ ವೆಚ್ಚದ ನೂತನ ಗೋಶೆಡ್ ನಿರ್ಮಾಣ

ಚಿಕ್ಕಮಗಳೂರು: ರಾಜ್ಯ ಸರ್ಕಾರದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸ್ಟೇಟ್...

ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ನಗರದಲ್ಲಿ...