Home namma chikmagalur chikamagalur ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮಿನಿ ಪಲ್ಟಿ
chikamagalurCrime NewsHomeLatest Newsnamma chikmagalur

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮಿನಿ ಪಲ್ಟಿ

Share
Share

ಚಿಕ್ಕಮಗಳೂರು : ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮಿನಿ ಕಾರೊಂದು ಚಾಲಕನ ನಿರ್ಲಕ್ಷ್ಯದಿಂದ ಪಲ್ಟಿಯಾದ ಘಟನೆ ಚಿಕ್ಕಮಗಳೂರು ತಾಲೂಕಿನ ದಿಣ್ಣೆಕೆರೆ ಗ್ರಾಮದ ಬಳಿ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.

ಕೂದುವಳ್ಳಿಯ ಲಿಟಲ್ ಫ್ಲವರ್ ಪ್ಲೇ ಹೋಮ್ ಗೆ ಸೇರಿದ ಓಮಿನಿ ಕಾರಿನಲ್ಲಿ ಅಪಘಾತ ಸಂಭವಿಸಿದ ವೇಳೆ 12ಕ್ಕೂ ಹೆಚ್ಚು ಪುಟ್ಟ ಮಕ್ಕಳು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಪೋಷಕರು ಹಾಗೂ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ.

ಮಕ್ಕಳನ್ನು ಶಾಲೆಗೆ ಕರೆತರುವ ಮತ್ತು ಕರೆದೊಯ್ಯುವ ಉದ್ದೇಶಕ್ಕಾಗಿ ಕಮರ್ಷಿಯಲ್ ವಾಹನಗಳನ್ನೇ ಬಳಸಬೇಕು ಎಂಬ ನಿಯಮವಿದ್ದರೂ, ಕಳೆದ ಹಲವು ವರ್ಷಗಳಿಂದ ವೈಟ್‌ಬೋರ್ಡ್ (ಖಾಸಗಿ ಬಳಕೆಯ) ವಾಹನದಲ್ಲೇ ಮಕ್ಕಳನ್ನು ಸಾಗಿಸಲಾಗುತ್ತಿತ್ತು ಎಂಬ ಆರೋಪ ಕೇಳಿ ಬಂದಿದೆ. ಇದರಿಂದ ಮಕ್ಕಳ ಸುರಕ್ಷತೆ ವಿಚಾರದಲ್ಲಿ ಪ್ಲೇ ಹೋಮ್ ಆಡಳಿತ ಮಂಡಳಿಯ ನಿರ್ಲಕ್ಷ್ಯ ಬಯಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಇನ್ನೂ ಆತಂಕಕಾರಿ ಸಂಗತಿಯೆಂದರೆ, ವಾಹನ ಚಲಾಯಿಸುತ್ತಿದ್ದ ವ್ಯಕ್ತಿಗೆ ಮಾನ್ಯ ಚಾಲನಾ ಪರವಾನಗಿ (DL) ಇರಲಿಲ್ಲ ಎನ್ನಲಾಗಿದೆ. ಆತ ಕೇವಲ ಇತ್ತೀಚೆಗೆ ಲರ್ನಸ್್ರ ಲೈಸೆನ್ಸ್ (LLR) ಪಡೆದಿದ್ದನು ಎಂದು ತಿಳಿದುಬಂದಿದ್ದು, ಇಂತಹ ವ್ಯಕ್ತಿಗೆ ಮಕ್ಕಳಿದ್ದ ವಾಹನದ ಜವಾಬ್ದಾರಿ ನೀಡಿರುವುದು ಪ್ರಶ್ನೆಗೆ ಕಾರಣವಾಗಿದೆ.

ಅಲ್ಲದೆ, ಅಪಘಾತಕ್ಕೀಡಾದ ವಾಹನದ ವಿಮೆ (ಇನ್ಸೂರೆನ್ಸ್) ಅವಧಿಯೂ ಮುಕ್ತಾಯಗೊಂಡಿರುವ ಮಾಹಿತಿ ಹೊರಬಿದ್ದಿದೆ. ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೋಷಕರು ಪ್ಲೇ ಹೋಮ್ ಆಡಳಿತ ಮಂಡಳಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಕ್ಕಳ ಜೀವದೊಂದಿಗೆ ಚೆಲ್ಲಾಟವಾಡಿರುವವರ ವಿರುದ್ಧ ಸಂಬಂಧಪಟ್ಟ ಇಲಾಖೆಗಳು ಹಾಗೂ ಸಾರಿಗೆ ಅಧಿಕಾರಿಗಳು ಸಮಗ್ರ ತನಿಖೆ ನಡೆಸಿ, ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.

Omni carrying school children overturns

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...