Home namma chikmagalur chikamagalur ಮೂಡಿಗೆರೆಯಲ್ಲಿ ಲೋಕಾಯುಕ್ತ ದಾಳಿಗೆ ಎಡಿಎಲ್ಆರ್
chikamagalurHomeLatest Newsnamma chikmagalur

ಮೂಡಿಗೆರೆಯಲ್ಲಿ ಲೋಕಾಯುಕ್ತ ದಾಳಿಗೆ ಎಡಿಎಲ್ಆರ್

Share
Share

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಸರ್ಕಾರಿ ಸಿಬ್ಬಂದಿಯನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.

ಮಾಹಿತಿಯ ಪ್ರಕಾರ, ಎಡಿಎಲ್ಆರ್ (ADLR) ಮಂಜೇಶ್ ಹಾಗೂ ಕೇಸ್ ವರ್ಕರ್ ಸುಮಾ ಅವರು ರೈತ ಡಿ.ಡಿ. ಮಂಜುನಾಥ್ ಅವರ ಜಮೀನಿನ ಸ್ಕೆಚ್ ತಯಾರಿಸುವ ಕೆಲಸಕ್ಕಾಗಿ ₹20,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಕುರಿತು ರೈತರು ಲೋಕಾಯುಕ್ತರಿಗೆ ದೂರು ನೀಡಿದ್ದರು.

ದೂರಿನ ಅನ್ವಯ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಇಂದು ₹15,000 ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರನ್ನೂ ಬಲೆಗೆ ಬೀಳಿಸಿ ಬಂಧಿಸಿದ್ದಾರೆ.

ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಸಿಬ್ಬಂದಿ ವರ್ಗದವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಘಟನೆ ಸಂಬಂಧ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

ADLR attacks Lokayukta in Mudigere

Share

Leave a comment

Leave a Reply

Your email address will not be published. Required fields are marked *

Don't Miss

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ ಸಾಗುತ್ತಿದ್ದೇವೆ ಎನ್ನಿಸುತ್ತದೆ. ಮಠಗಳು ಮಿತಿ ದಾಟಿದರೆ ಸಂಘಟನೆಗಳು ಲಾಭಿ ಮಾಡುತ್ತಿರುವುದು “ಸೇವೆಗಾಗಿಯೋ” ಜಾತಿಗಾಗಿಯೋ ಆಥವಾ...

ಕಾಫಿ ಮೂಟೆ ಸಾಗಿಸುತ್ತಿದ್ದ ಲಾರಿ ಅಪಘಾತ

ಚಿಕ್ಕಮಗಳೂರು: ಕಾಫಿ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಿಕ್ಕಮಗಳೂರು ನಗರದ ಕೆ.ಎಂ. ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಲಾರಿ ಕಣಿವೆಯ...

Related Articles

ಮುದುಗುಂಡಿ ಗ್ರಾಮದಲ್ಲಿ ಹೆಣ್ಣು ಚಿರತೆ ಸೆರೆ

ತರೀಕೆರೆ: ತಾಲ್ಲೂಕಿನ ಮುದುಗುಂಡಿ ಗ್ರಾಮದಲ್ಲಿ ಸುಮಾರು 3 ವರ್ಷ ವಯಸ್ಸಿನ ಹೆಣ್ಣು ಚಿರತೆಯನ್ನು ಅರಣ್ಯ ಇಲಾಖೆ...

ಮಕ್ಕಳ ಲೈಂಗಿಕ ಶೋಷಣೆ ಚಿತ್ರ ದೃಶ್ಯ ಹಂಚಿಕೊಂಡ ನಗರದ ಮಹಿಳೆ

ಚಿಕ್ಕಮಗಳೂರು: ಮಕ್ಕಳ ಲೈಂಗಿಕ ಶೋಷಣೆ ಮತ್ತು ಆಕ್ಷೇಪಣಾರ್ಹ ಚಿತ್ರ ದೃಶ್ಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದ...

ನಂಜೇಶ್ ಬೆಣ್ಣೂರು ನವಮಾಧ್ಯಮದ ನವತಾರೆಯಾಗಿ ಬೆಳಗಲಿ…

ಚಿಕ್ಕಮಗಳೂರು:  ಜನಮುಖಿ ಮನಸ್ಸಿನ ನವಮಾಧ್ಯಮದ ಸಂವಹನಕಾರ ನಂಜೇಶ್ ಆರ್ ಬೆಣ್ಣೂರು ಈಗ ಭಾರತದ ಮಟ್ಟದಲ್ಲಿ ನವ...

ಕಾಫಿನಾಡಿನಲ್ಲಿ ಲಾಂಗು – ಮಚ್ಚುಗದ್ದೆ ಸುದ್ದಿ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಲಾಂಗು ಮತ್ತು ಮಚ್ಚುಗಳಂತಹ ಮಾರಕಾಸ್ತ್ರಗಳು ಬಳಕೆ ತೀರಾ ಸಾಮಾನ್ಯ...