ಕಡೂರು: ಹಗಲು ಹೊತ್ತಿನಲ್ಲೇ ಬೀಗ ಹಾಕಿದ್ದ ಮನೆಯ ಬಾಗಿಲು ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಮತ್ತು ನಗದನ್ನು ದೋಚಿರುವ ಘಟನೆ ಕಡೂರು ತಾಲೂಕಿನ ಕಸವನಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ವ್ಯಾಪಾರಸ್ಥರಾದ ಚೇತನ್ ಬಿ ಎಂಬುವವರ ಪತ್ನಿ ಲತಾ ಅವರು ಮಧ್ಯಾಹ್ನ ಮನೆಗೆ ಬೀಗ ಹಾಕಿ ಪಕ್ಕದ ಮನೆಗೆ ಹೋಗಿದ್ದ ಕೇವಲ ಒಂದು ಗಂಟೆಯ ಅವಧಿಯಲ್ಲಿ ಈ ಕಳ್ಳತನ ನಡೆದಿದೆ. ಕಳ್ಳರು ಯಾವುದೋ ಆಯುಧದಿಂದ ಮುಂಭಾಗದ ಬಾಗಿಲಿನ ಚಿಲಕ ಮುರಿದು ಒಳನುಗ್ಗಿದ್ದಾರೆ.
ರೂಮಿನಲ್ಲಿದ್ದ ಬೀರುವಿನ ಇಂಟರ್ ಲಾಕ್ ಒಡೆದು ಬಟ್ಟೆಗಳ ನಡುವೆ ಇದ್ದ 11 ಗ್ರಾಂ ತೂಕದ ಚಿನ್ನದ ಕಿವಿಯೋಲೆ ಹಾಗೂ ಉಂಗುರ (ಮೌಲ್ಯ ₹77,000), 70 ಗ್ರಾಂ ತೂಕದ ಬೆಳ್ಳಿಯ ಕೊರಳು ಮತ್ತು ಕಾಲು ಸರಗಳು (ಮೌಲ್ಯ ₹6,300) ಹಾಗೂ 11,700 ರೂಪಾಯಿ ನಗದು ಹಣ ಸೇರಿ ಒಟ್ಟು 95,000 ರೂಪಾಯಿ ಮೌಲ್ಯದ ಸ್ವತ್ತನ್ನು ಕಳವು ಮಾಡಿದ್ದಾರೆ.
ಈ ಕುರಿತು ಸಿಂಗಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Gold jewellery worth lakhs of rupees stolen after breaking down house door
Leave a comment