Home namma chikmagalur chikamagalur ತೀವ್ರಗೊಂಡ ಉದ್ಯಮಿ ಪತ್ನಿಯ ಆತ್ಮಹತ್ಯೆ ಪ್ರಕರಣ
chikamagalurCrime NewsHomeLatest Newsnamma chikmagalur

ತೀವ್ರಗೊಂಡ ಉದ್ಯಮಿ ಪತ್ನಿಯ ಆತ್ಮಹತ್ಯೆ ಪ್ರಕರಣ

Share
Share

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಬೆಚ್ಚಿಬೀಳಿಸುವಂತಹ ಘಟನೆಯೊಂದು ನಡೆದಿದ್ದು ನಗರದ ಉದ್ಯಮಿ ರಾಜೇಶ್ ಅವರ ಪತ್ನಿ ಸುಮ (55) ಆಲೇನಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಶ್ರೀಮಂತ ಕುಟುಂಬದ ಗೃಹಿಣಿಯ ಈ ದಿಢೀರ್ ಸಾವು ತೀವ್ರ ಆಘಾತ ಮತ್ತು ಸಾರ್ವಜನಿಕ ವಲಯದಲ್ಲಿ ಹಲವು ಅನುಮಾನಗಳನ್ನು ಮೂಡಿಸಿದೆ.

ಘಟನಾ ಸ್ಥಳದಲ್ಲಿ ಸುಮ ಅವರು ಬರೆದಿದ್ದಾರೆನ್ನಲಾದ ಡೆತ್‌ನೋಟ್ ಪತ್ತೆಯಾಗಿದ್ದು, ಸಾವಿನ ಹಿಂದಿರುವ ನಿಖರ ಕಾರಣವನ್ನು ಪತ್ತೆಹಚ್ಚಲು ಪೊಲೀಸರಿಗೆ ಇದು ಪ್ರಮುಖ ಸಾಕ್ಷಿಯಾಗಿದೆ. ಆದರೆ, ಆ ಪತ್ರದಲ್ಲಿರುವ ಅಂಶಗಳನ್ನು ಪೊಲೀಸರು ಸದ್ಯಕ್ಕೆ ಗೌಪ್ಯವಾಗಿಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಬಸವನಹಳ್ಳಿ ಠಾಣೆಯ ಪೊಲೀಸರು, ಸೋಕೋ (SOCO) ತಂಡ ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ರಿವಾಲ್ವ‌ರ್ ಮತ್ತು ಡೆತ್‌ ನೋಟ್ ಸೇರಿದಂತೆ ಪ್ರಮುಖ ಸಾಕ್ಷ್ಯಾಧಾರಗಳನ್ನು ವಶಕ್ಕೆ ಪಡೆದಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಮೃತರ ಪುತ್ರ ಬಸವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಚಿಕ್ಕಮಗಳೂರು ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೇಲ್ನೋಟಕ್ಕೆ ಇದು ಪಿಸ್ತೂಲಿನಿಂದ ಮಾಡಿಕೊಂಡ ಆತ್ಮಹತ್ಯೆಯಂತೆ ಕಂಡುಬರುತ್ತಿದೆ ಎಂದು ತಿಳಿಸಿದ್ದು ತನಿಖೆಯ ನಂತರವಷ್ಟೇ ಈ ನಿಗೂಢ ಸಾವಿನ ಹಿಂದಿನ ನಿಜವಾದ ಸತ್ಯಾಂಶ ಹೊರಬರಬೇಕಿದೆ.

Suicide case of businessman’s wife escalated

Share

Leave a comment

Leave a Reply

Your email address will not be published. Required fields are marked *

Don't Miss

5.50 ಕೋಟಿಯ ಟಿಂಬರ್ ವ್ಯವಹಾರದಲ್ಲಿ ವಂಚನೆ

ಚಿಕ್ಕಮಗಳೂರು: ಕೋಟ್ಯಂತರ ರೂಪಾಯಿ ಮೌಲ್ಯದ ಟಿಂಬರ್ ವ್ಯವಹಾರಕ್ಕೆ ಸಂಬಂಧಿಸಿದಂತೆ ದೊಡ್ಡ ಮಟ್ಟದ ವಂಚನೆ, ಜಗಳ ಹಾಗೂ ಕೊಲೆ ಬೆದರಿಕೆ ಪ್ರಕರಣವೊಂದು ಆಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಗೋಣಿಕೊಪ್ಪ...

ಡಿ.ಕೆ.ಗೆ ಪ್ರಾರಂಭದಲ್ಲಿ ಡಿಚ್ಚಿ ! ಹರಿ ಬ್ರೇಕ್, ಸಿದ್ದು ಸ್ಟೀರಿಂಗ್ ಯಾವ ಕಡೆ ತಿರುಗುತ್ತದೆ

ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಯಾರನ್ನು ನಂಬಿದ್ದರು ಅವರೇ ಕೈ ಕೊಡುವ ಸೂಚನೆ ಅರಿತು ರಾಹುಲ್ ಮಾತು ಕೇಳಿದ ಮೇಲೆ ರಾಜೀನಾಮೆ ಕೊಟ್ಟಿದ್ದು ,ಯಾವ ಕಿತ್ತಾಟವೂ ನಡೆಯಲಿಲ್ಲಾ ಅಷ್ಟೊಂದು ತಣ್ಣಗೆ ಪ್ರತಿಕ್ರಿಯೆ...

Related Articles

ಬೆಲೆಏರಿಕೆ ಖಂಡಿಸಿ ನಗರದಲ್ಲಿ ಬ್ಲಾಕ್‌ಕಾಂಗ್ರೆಸ್ ವಿನೂತನ ಪ್ರತಿಭಟನೆ

ಚಿಕ್ಕಮಗಳೂರು : ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಚಿಕ್ಕಮಗಳೂರು ಹಾಗೂ ಸಖರಾಯಪಟ್ಟಣ ಬ್ಲಾಕ್ ಕಾಂಗ್ರೆಸ್...

ಮೆಡಿಕಲ್ ಕಾಲೇಜಿನ ಹುಡುಗಿಯರ ಹಾಸ್ಟೆಲ್‌ಗೆ ನುಗ್ಗಿದ ಯುವಕ ಬಂಧನ

ಚಿಕ್ಕಮಗಳೂರು: ಸರ್ಕಾರಿ ಮೆಡಿಕಲ್ ಕಾಲೇಜಿನ ಹುಡುಗಿಯರ ಹಾಸ್ಟೆಲ್‌ಗೆ ಮಧ್ಯರಾತ್ರಿ ನುಗ್ಗಿ ಯುವಕಮೋರ್ವ ಓಡಾಟ ನಡೆಸಿರುವ ಘಟನೆ...

ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ

ಕೊಟ್ಟಿಗೆಹಾರ : ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಮಳೆಗಾಲದ...

ಮನೆಯ ಬಾಗಿಲು ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

ಕಡೂರು: ಹಗಲು ಹೊತ್ತಿನಲ್ಲೇ ಬೀಗ ಹಾಕಿದ್ದ ಮನೆಯ ಬಾಗಿಲು ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ,...