Home namma chikmagalur chikamagalur ಗೋಲಿ ಆಟವಾಡಲು ಅವಕಾಶ ನೀಡದಕ್ಕೆ ಯುವಕ ಮೇಲೆ ಹಲ್ಲೆ
chikamagalurHomeLatest Newsnamma chikmagalur

ಗೋಲಿ ಆಟವಾಡಲು ಅವಕಾಶ ನೀಡದಕ್ಕೆ ಯುವಕ ಮೇಲೆ ಹಲ್ಲೆ

Share
Share

ಚಿಕ್ಕಮಗಳೂರು: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ನಗರದ ಆಶ್ರಯ ಬಡಾವಣೆಯ ಸಮುದಾಯ ಭವನದ ಮೈದಾನದಲ್ಲಿ ನಡೆದಿದೆ.

ಮೈದಾನದಲ್ಲಿ ಅರುಣ, ಮಣಿಕಂಠ ಹಾಗೂ ಯತೀಶ್ ಎಂಬುವವರು ಗೋಲಿ ಆಟವಾಡುತ್ತಿದ್ದು, ಅದನ್ನು ನೋಡಿದ ಸೋಮಶೇಖರ್ ಎಂಬ ಯುವಕ ತನಗೂ ಒಂದು ಆಟ ಆಡಲು ಅವಕಾಶ ನೀಡುವಂತೆ ಕೇಳಿದ್ದಾನೆ.

ಈ ಮಾತಿಗೆ ತೀವ್ರವಾಗಿ ಕೆರಳಿದ ಅರುಣ ಹಾಗೂ ಆತನ ಸ್ನೇಹಿತರು ಸೋಮಶೇಖರ್‌ನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಏಕಾಏಕಿ ಕುತ್ತಿಗೆ ಪಟ್ಟಿ ಹಿಡಿದು ಅಲ್ಲೇ ಇದ್ದ ಜಲ್ಲಿಕಲ್ಲಿನ ಮೇಲೆ ತಳ್ಳಿ ಹಾಕಿದ್ದಾರೆ.

ಅಷ್ಟಕ್ಕೇ ನಿಲ್ಲಿಸದೆ ಕೆಳಗೆ ಬಿದ್ದಿದ್ದ ಯುವಕನನ್ನು ಕಾಲಿನಿಂದ ಮನಬಂದಂತೆ ಒದ್ದು ತೀವ್ರವಾಗಿ ಗಾಯಗೊಳಿಸಿದ್ದಾರೆ.

ಗಲಾಟೆಯ ಸದ್ದು ಕೇಳಿ ಓಡಿಬಂದ ಸ್ಥಳೀಯರು ತಕ್ಷಣವೇ ಜಗಳವನ್ನು ಬಿಡಿಸಿದ್ದು, ಸದ್ಯ ಗಾಯಾಳು ಸೋಮಶೇಖ‌ರ್ ಸರ್ಕಾರಿ ಮಲ್ಲೇಗೌಡ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಲ್ಲೆ ನಡೆಸಿದ ಮೂವರ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Young man attacked for not allowing him to play goalie

Share

Leave a comment

Leave a Reply

Your email address will not be published. Required fields are marked *

Don't Miss

ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಮಲೆನಾಡಿಗರು ಆಕ್ರೋಶ

ಕಳಸ: ಸರ್ಕಾರದ ಬೇಜವಾಬ್ದಾರಿತನ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದ ವಿರುದ್ಧ ಮಲೆನಾಡಿಗರು ಆಕ್ರೋಶದ ತೊಡೆ ತಟ್ಟಿದ್ದಾರೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಳಕೋಡು ಕುಗ್ರಾಮದ ಜನರಿಗೆ ಮಾತ್ರ...

ಭಾರಿ ಮಳೆಯ ಆರ್ಭಟಕ್ಕೆ ಮೆಸ್ಕಾಂಗೆ 3.21 ಕೋಟಿ ಹಾನಿ

ಚಿಕ್ಕಮಗಳೂರು: ಮುಂಗಾರುಪೂರ್ವ ಮಳೆ ಮತ್ತು ಭಾರಿ ಗಾಳಿಯ ಆರ್ಭಟಕ್ಕೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮೆಸ್ಕಾಂ ವ್ಯಾಪ್ತಿಯಲ್ಲಿ ಭಾರಿ ಪ್ರಮಾಣದ ಆಸ್ತಿಪಾಸ್ತಿ ಹಾನಿ ಸಂಭವಿಸಿದೆ. ಏಪ್ರಿಲ್ ಒಂದರಿಂದ ಜೂನ್ ಒಂದರವರೆಗೆ ಮೆಸ್ಕಾಂ ಅಂಕಿ ಅಂಶಗಳ...

Related Articles

ಕಾಫಿ ಮೂಟೆ ಸಾಗಿಸುತ್ತಿದ್ದ ಲಾರಿ ಅಪಘಾತ

ಚಿಕ್ಕಮಗಳೂರು: ಕಾಫಿ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಿಕ್ಕಮಗಳೂರು ನಗರದ ಕೆ.ಎಂ. ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಚಾಲಕನ...

ಬೈಕ್ – ಕಾರೊಂದು ಮುಖಾಮುಖಿ ಡಿಕ್ಕಿ: ಚಾಲಕ ತೀವ್ರ ಗಾಯ

ಚಿಕ್ಕಮಗಳೂರು: ಪ್ರವಾಸಕ್ಕೆಂದು ಬಂದಿದ್ದ ಬೀದರ್ ಮೂಲದ ಬೈಕ್ ಸವಾರನಿಗೆ ಕಾರೊಂದು ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಚಿಕ್ಕಮಗಳೂರು...

ತಂತಿ ಉರುಳಿಗೆ ಸಿಲುಕಿ ತೀವ್ರವಾಗಿ ಗಾಯಗೊಂಡ ಹುಲಿ

ಚಿಕ್ಕಮಗಳೂರು: ಮುತ್ತೋಡಿ ವಲಯದ ಏಳುನೂರುಖಾನ್ ತೋಟದ ಬಳಿ ತಂತಿ ಉರುಳಿಗೆ ಸಿಲುಕಿ ತೀವ್ರವಾಗಿ ಗಾಯಗೊಂಡಿರುವ ಹುಲಿಯೊಂದು...

ಸಾರ್ವಜನಿಕ ರಸ್ತೆ ಬದಿಯಲ್ಲಿ ಮೂಟೆ ತುಂಬಿದ ಗೋಮಾಂಸ ಪತ್ತೆ

ಚಿಕ್ಕಮಗಳೂರು: ಸಾರ್ವಜನಿಕ ರಸ್ತೆ ಬದಿಯಲ್ಲಿ ಮೂಟೆ ತುಂಬಿದ ಗೋಮಾಂಸ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಪೊಲೀಸರು...