Home Crime News ಗೂಡ್ಸ್‌ ವಾಹನ ಡಿಕ್ಕಿಗೆ ಯುವಕ ಸಾವು
Crime NewsHomeKadurLatest Newsnamma chikmagalur

ಗೂಡ್ಸ್‌ ವಾಹನ ಡಿಕ್ಕಿಗೆ ಯುವಕ ಸಾವು

Share
Share

ಕಡೂರು: ಸಖರಾಯಪಟ್ಟಣ ಸಮೀಪದ ಹಿರೇಗೌಜ ಗೇಟ್ ಬಳಿ ನಡೆದ ರಸ್ತೆ ಅಪ ಘಾತದಲ್ಲಿ ಗೂಡ್ಸ್ ವಾಹನ ಡಿಕ್ಕಿಯಾಗಿ ಗಾಯಗೊಂಡಿದ್ದ ಯುವಕ ಮೃತಪಟ್ಟಿದ್ದಾರೆ.

ಹಾಸನ ಮೂಲದ ಯಶವಂತ್ (26) ಮೃತಪಟ್ಟವರು. ಇವರು ಬೆಂಗಳೂರಿನಲ್ಲಿ ಕಾರು ಚಾಲಕರಾಗಿ ಕೆಲಸ ಮಾಡುತ್ತಿದ್ದರು.

ಶುಕ್ರವಾರ ರಾತ್ರಿ ಅಜ್ಜಂಪುರಕ್ಕೆ ತೆರಳಿದ್ದ ಯಶವಂತ್, ಬಳಿಕ ಚಿಕ್ಕಮಗಳೂರಿನತ್ತ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿರೇಗೌಜ ಗೇಟ್ ಸಮೀಪದ ಪೆಟ್ರೋಲ್ ಬಂಕ್ ಬಳಿ ಅಪಘಾತ ಸಂಭವಿಸಿದೆ. ಕಡೂರಿನಿಂದ ಚಿಕ್ಕಮಗಳೂರಿನತ್ತ ತೆರಳುತ್ತಿದ್ದ ಸರಕು ಸಾಗಣೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಯಶವಂತ್ ಅವರ ಕಾಲು ಮತ್ತು ಸೊಂಟಕ್ಕೆ ತೀವ್ರ ಗಾಯಗಳಾಗಿದ್ದವು.

ಸ್ಥಳೀಯರ ನೆರವಿನಿಂದ ಆಂಬುಲೆನ್ಸ್ ಮೂಲಕ ಅವರನ್ನು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಮೃತಪಟ್ಟರು.

ಮೃತ ಯುವಕ ಶುಕ್ರವಾರ ರಾತ್ರಿ ತನ್ನ ತಾಯಿಗೆ ಕರೆ ಮಾಡಿ, ತಾನು ನೀಡಿದ್ದ ಕಾರಿನ ಸಾಲದ ವಿಚಾರವಾಗಿ ಅಜ್ಜಂಪುರಕ್ಕೆ ತೆರಳುತ್ತಿರುವುದಾಗಿ ತಿಳಿಸಿದ್ದ ಎಂದು ಕುಟುಂಬದವರು ಹೇಳಿದ್ದಾರೆ. ಯುವಕನ ತಾಯಿ ನೀಡಿದ ದೂರಿನ ಮೇರೆಗೆ ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Youth dies in goods vehicle collision

Share

Leave a comment

Leave a Reply

Your email address will not be published. Required fields are marked *

Don't Miss

ಅಪಘಾತದಲ್ಲಿ ಸಾವು: ಚಾಲಕನಿಗೆ 9 ತಿಂಗಳು ಸಜೆ

ಚಿಕ್ಕಮಗಳೂರು: ಅತೀ ವೇಗ ಮತ್ತು ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು ಇನ್ನಿಬ್ಬರು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಚಾಲಕನಿಗೆ ನಗರದ ಒಂದನೇ ಅಧಿಕ ಹಿರಿಯ ಸಿ.ಜೆ....

ದ್ವಿಚಕ್ರ ವಾಹನ ಡಿಕ್ಕಿ-ಪಾದಚಾರಿ ಯುವಕ ಸಾವು

ಚಿಕ್ಕಮಗಳೂರು: ತಾಲೂಕಿನ ಕುರುಬರಹಳ್ಳಿ ಗ್ರಾಮದ ಸಮೀಪ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಯುವಕ ಮೃತಪಟ್ಟಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮಾಚೇನಹಳ್ಳಿ ಗ್ರಾಮದ...

Related Articles

100 ಅಡಿ ಪ್ರಪಾತಕ್ಕೆ ಉರುಳಿದ 10 ಚಕ್ರದ ಲಾರಿ

ಚಿಕ್ಕಮಗಳೂರು: ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ೧೦ ಚಕ್ರದ ಲಾರಿಯೊಂದು ರಸ್ತೆ ಪಕ್ಕದ...

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ...

ಕನಿಷ್ಟ ವೇತನ ಜಾರಿಗೆ ಆಗ್ರಹಿಸಿ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ

ಚಿಕ್ಕಮಗಳೂರು:  ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌ ಕರರಿಗೆ ಕಾರ್ಮಿಕ ಆಯುಕ್ತರ ಆದೇಶದಂತೆ ಕನಿಷ್ಟ ವೇತನ...