Home namma chikmagalur chikamagalur ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು
chikamagalurCrime NewsHomeLatest Newsnamma chikmagalur

ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

Share
Share

ಚಿಕ್ಕಮಗಳೂರು: ತರಾತುರಿಯಲ್ಲಿ ಮನೆಗೆ ಬೀಗ ಹಾಕದೆ ಹೊರಟ ದಂಪತಿಯ ನಿರ್ಲಕ್ಷ್ಯವನ್ನು ಬಂಡವಾಳ ಮಾಡಿಕೊಂಡ ಕಳ್ಳರು, ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿರುವ ಘಟನೆ ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಂತವೇರಿಯಲ್ಲಿ ನಡೆದಿದೆ.

ಸಂತವೇರಿ ನಿವಾಸಿ ಚಂದ್ರಪ್ಪ ಹಾಗೂ ಅವರ ಹೆಂಡತಿ ಇತ್ತೀಚೆಗಷ್ಟೇ ಚಿಕ್ಕಮಗಳೂರಿನ ಆಭರಣ ಜ್ಯುವೆಲರ್ಸ್‌ನಲ್ಲಿ 6,35,344 ರೂಪಾಯಿ ಮೌಲ್ಯದ 27.090 ಗ್ರಾಂ ತೂಕದ ಒಂದು ಚಿನ್ನದ ನೆಕ್ಲಿಸ್ ಹಾಗೂ 10.24 ಗ್ರಾಂ ತೂಕದ ಚಿನ್ನದ ಕಿವಿ ಓಲೆಯನ್ನು ಖರೀದಿಸಿದ್ದರು. ಆ ಒಡವೆಗಳನ್ನು ಮನೆಯ ನಡುಬಟ್ಟೆಯ ಟೀಪಾಯಿ ಮೇಲಿದ್ದ ಬಟ್ಟೆಯೊಂದರ ಅಡಿಯಲ್ಲಿ ಬಚ್ಚಿಟ್ಟಿದ್ದರು.

ಮಗನನ್ನು ಶಾಲೆಗೆ ಸೇರಿಸಲು ದಂಪತಿ ಬೈಕ್‌ನಲ್ಲಿ ದೇವರಹಳ್ಳಿಗೆ ಹೊರಟಾಗ, ಅವರ ಹೆಂಡತಿ ಅವಸರದಲ್ಲಿ ಮನೆಗೆ ಬೀಗ ಹಾಕಲು ಮರೆತಿದ್ದಾರೆ. ಹೊಸಗಂಗೂರು ಘಾಟಿಯಲ್ಲಿ ಹೋಗುವಾಗ ಈ ವಿಷಯ ನೆನಪಿಗೆ ಬಂದು, ಎದುರು ಮನೆಯ ಕಾಂಚನ ಎಂಬುವರಿಗೆ ಫೋನ್ ಮಾಡಿ ಬೀಗ ಹಾಕಲು ತಿಳಿಸಿದ್ದಾರೆ.

ಕಾಂಚನ ಅವರು ಮನೆಗೆ ಹೋಗಿ ನೋಡಿದಾಗ ಒಳಗಿನ ಬಟ್ಟೆ ಮತ್ತು ಬ್ಯಾಗ್‌ಗಳು ಚಲ್ಲಾಪಿಲ್ಲಿಯಾಗಿ ಬಿದ್ದಿರುವುದು ಕಂಡುಬಂದಿದೆ. ಅನುಮಾನಗೊಂಡು ಒಡವೆ ಇಟ್ಟಿದ್ದ ಜಾಗವನ್ನು ಪರಿಶೀಲಿಸಿದಾಗ ಚಿನ್ನದ ನೆಕ್ಲಿಸ್ ಹಾಗೂ ಕಿವಿ ಓಲೆ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಚಂದ್ರಪ್ಪ ಅವರು ಲಿಂಗದಹಳ್ಳಿ ಠಾಣೆಗೆ ದೂರು ನೀಡಿದ್ದು, ಪೊಲೀಸರು ಕಳ್ಳರ ಪತ್ತೆಗೆ ಜಾಲ ಬೀಸಿದ್ದಾರೆ.

Jewellery worth lakhs of rupees stolen

Share

Leave a comment

Leave a Reply

Your email address will not be published. Required fields are marked *

Don't Miss

ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ

ಚಿಕ್ಕಮಗಳೂರು: ರಾಜ್ಯದ ಅತ್ಯುನ್ನತ ಶಿಖರವಾದ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ ಹಾಗೂ ಮಣ್ಣು, ಅದಿರು ಸಾಗಾಣೆ ನಡೆಯುತ್ತಿರುವ ಆರೋಪ ಕೇಳಿಬಂದಿದ್ದು, ಪರಿಸರವಾದಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರಣ್ಯೇತರ...

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮಿನಿ ಪಲ್ಟಿ

ಚಿಕ್ಕಮಗಳೂರು : ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮಿನಿ ಕಾರೊಂದು ಚಾಲಕನ ನಿರ್ಲಕ್ಷ್ಯದಿಂದ ಪಲ್ಟಿಯಾದ ಘಟನೆ ಚಿಕ್ಕಮಗಳೂರು ತಾಲೂಕಿನ ದಿಣ್ಣೆಕೆರೆ ಗ್ರಾಮದ ಬಳಿ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಕೂದುವಳ್ಳಿಯ ಲಿಟಲ್...

Related Articles

A.C.F ಕೆ.ಎಸ್.ಮೋಹನ್ ನಿವಾಸದ ಮೇಲೆ ಲೋಕಾಯುಕ್ತಾ ದಾಳಿ

  ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಹಾಯಕ ಅರಣ್ಯ ಅಧಿಕಾರಿ ಕೆ.ಎಸ್.ನಿವಾಸ ಮತ್ತು ಸಂಭಂದಿಸಿದ ಹಲವು...

ಸಿ.ಟಿ.ರವಿಗೆ ಶೋಷಿತ ವರ್ಗದ ಅಪ್ಪಂದಿರಿಂದ ತಕ್ಕ ಪಾಠ

ಚಿಕ್ಕಮಗಳೂರು : ಆರ್‌ಎಸ್‌ಎಸ್ ನೊಂದಣಿ ಮಾಡಿಸಲು ಅವನಪ್ಪನಿಂದಲೂ ಆಗಲಿಲ್ಲ ಎಂದು ಪ್ರಿಯಾಂಕ ಖರ್ಗೆ ಬಗ್ಗೆ ಹೇಳಿರುವ...

ವಿಳಾಸ ಕೇಳುವ ನೆಪದಲ್ಲಿ ಎಂಟು ಲಕ್ಷ ರೂಪಾಯಿ ಹಣವಿದ್ದ ಬ್ಯಾಗ್‌ ಕಳವು

ಚಿಕ್ಕಮಗಳೂರು: ವಿಳಾಸ ಕೇಳುವ ನೆಪದಲ್ಲಿ ಗಮನ ಬೇರೆಡೆಗೆ ಸೆಳೆದು ಬರೋಬ್ಬರಿ ಎಂಟು ಲಕ್ಷ ರೂಪಾಯಿ ಹಣವಿದ್ದ...

ಲೋನ್ ಬಾಕಿ ವಸೂಲಾತಿಗಾಗಿ ಹೋಗಿದ್ದ ಯುವಕ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಕಾರು ಲೋನ್ ಬಾಕಿ ವಸೂಲಾತಿಗಾಗಿ ಹೋಗಿದ್ದ ಬೆಂಗಳೂರಿನ ಕಾರ್ ಚಾಲಕ ಯಶ್ವಂತ್ ಎಂಬ ಯುವಕನು ಗೂಡ್ಸ್...