Home namma chikmagalur chikamagalur ವಿಳಾಸ ಕೇಳುವ ನೆಪದಲ್ಲಿ ಎಂಟು ಲಕ್ಷ ರೂಪಾಯಿ ಹಣವಿದ್ದ ಬ್ಯಾಗ್‌ ಕಳವು
chikamagalurCrime NewsHomeLatest Newsnamma chikmagalur

ವಿಳಾಸ ಕೇಳುವ ನೆಪದಲ್ಲಿ ಎಂಟು ಲಕ್ಷ ರೂಪಾಯಿ ಹಣವಿದ್ದ ಬ್ಯಾಗ್‌ ಕಳವು

Share
Share

ಚಿಕ್ಕಮಗಳೂರು: ವಿಳಾಸ ಕೇಳುವ ನೆಪದಲ್ಲಿ ಗಮನ ಬೇರೆಡೆಗೆ ಸೆಳೆದು ಬರೋಬ್ಬರಿ ಎಂಟು ಲಕ್ಷ ರೂಪಾಯಿ ಹಣವಿದ್ದ ಬ್ಯಾಗ್‌ನ್ನು ಕಿತ್ತುಕೊಂಡು ಇನ್ನೋವಾ ಕಾರಿನಲ್ಲಿ ಪರಾರಿಯಾಗಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬ್ರಹ್ಮಾವರ ತಾಲೂಕಿನ ನಡೂರು ಗ್ರಾಮದ ನಿವಾಸಿ ರವಿಕುಮಾರ್ ಶೆಟ್ಟಿ ಹಾಗೂ ಅವರ ಸ್ನೇಹಿತರಾದ ನಾಗೇಶ್, ಹರ್ಷ ಶೆಟ್ಟಿ ಮತ್ತು ಸುಧಾಕರ್ ಚಾರ್ಯ ಅವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಚಿಕ್ಕಮಗಳೂರು ತಾಲೂಕಿನ ಕೈಮರ ಸರ್ಕಲ್ ಸಮೀಪ ಮೂತ್ರ ವಿಸರ್ಜನೆಗಾಗಿ ಗಾಡಿ ನಿಲ್ಲಿಸಿದಾಗ ಈ ಘಟನೆ ಸಂಭವಿಸಿದೆ.

ಈ ವೇಳೆ ಬಿಳಿ ಬಣ್ಣದ ಇನ್ನೋವಾ ಕ್ರಿಸ್ಟಾ ಕಾರಿನಲ್ಲಿ (ನಂಬರ್ KA56M7886) ಬಂದ ಅಪರಿಚಿತ ಚಾಲಕನು ವಿಳಾಸ ಕೇಳಿದ್ದಾನೆ. ಸುಧಾಕರ್ ಅವರು ವಿಳಾಸ ಹೇಳುತ್ತಿದ್ದಾಗ, ಚಾಲಕನು ತಕ್ಷಣವೇ ಅವರ ಬಳಿ ಇದ್ದ ಎಂಟು ಲಕ್ಷ ರೂಪಾಯಿ ನಗದನ್ನು ಒಳಗೊಂಡಿದ್ದ ಬ್ಯಾಗ್‌ನ್ನು ಬಲವಂತವಾಗಿ ಕಿತ್ತುಕೊಂಡು ಕಾರಿನೊಂದಿಗೆ ಸ್ಥಳದಿಂದ ವೇಗವಾಗಿ ಪರಾರಿಯಾಗಿದ್ದಾನೆ.

ಸಂತ್ರಸ್ತ ರವಿಕುಮಾರ್ ಶೆಟ್ಟಿ ಅವರು ನೀಡಿದ ದೂರಿನನ್ವಯ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Bag containing Rs 8 lakh stolen on pretext of asking for address

Share

Leave a comment

Leave a Reply

Your email address will not be published. Required fields are marked *

Don't Miss

ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ

ಚಿಕ್ಕಮಗಳೂರು: ರಾಜ್ಯದ ಅತ್ಯುನ್ನತ ಶಿಖರವಾದ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ ಹಾಗೂ ಮಣ್ಣು, ಅದಿರು ಸಾಗಾಣೆ ನಡೆಯುತ್ತಿರುವ ಆರೋಪ ಕೇಳಿಬಂದಿದ್ದು, ಪರಿಸರವಾದಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರಣ್ಯೇತರ...

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮಿನಿ ಪಲ್ಟಿ

ಚಿಕ್ಕಮಗಳೂರು : ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮಿನಿ ಕಾರೊಂದು ಚಾಲಕನ ನಿರ್ಲಕ್ಷ್ಯದಿಂದ ಪಲ್ಟಿಯಾದ ಘಟನೆ ಚಿಕ್ಕಮಗಳೂರು ತಾಲೂಕಿನ ದಿಣ್ಣೆಕೆರೆ ಗ್ರಾಮದ ಬಳಿ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಕೂದುವಳ್ಳಿಯ ಲಿಟಲ್...

Related Articles

A.C.F ಕೆ.ಎಸ್.ಮೋಹನ್ ನಿವಾಸದ ಮೇಲೆ ಲೋಕಾಯುಕ್ತಾ ದಾಳಿ

  ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಹಾಯಕ ಅರಣ್ಯ ಅಧಿಕಾರಿ ಕೆ.ಎಸ್.ನಿವಾಸ ಮತ್ತು ಸಂಭಂದಿಸಿದ ಹಲವು...

ಸಿ.ಟಿ.ರವಿಗೆ ಶೋಷಿತ ವರ್ಗದ ಅಪ್ಪಂದಿರಿಂದ ತಕ್ಕ ಪಾಠ

ಚಿಕ್ಕಮಗಳೂರು : ಆರ್‌ಎಸ್‌ಎಸ್ ನೊಂದಣಿ ಮಾಡಿಸಲು ಅವನಪ್ಪನಿಂದಲೂ ಆಗಲಿಲ್ಲ ಎಂದು ಪ್ರಿಯಾಂಕ ಖರ್ಗೆ ಬಗ್ಗೆ ಹೇಳಿರುವ...

ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ತರಾತುರಿಯಲ್ಲಿ ಮನೆಗೆ ಬೀಗ ಹಾಕದೆ ಹೊರಟ ದಂಪತಿಯ ನಿರ್ಲಕ್ಷ್ಯವನ್ನು ಬಂಡವಾಳ ಮಾಡಿಕೊಂಡ ಕಳ್ಳರು, ಮನೆಯಲ್ಲಿದ್ದ...

ಲೋನ್ ಬಾಕಿ ವಸೂಲಾತಿಗಾಗಿ ಹೋಗಿದ್ದ ಯುವಕ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಕಾರು ಲೋನ್ ಬಾಕಿ ವಸೂಲಾತಿಗಾಗಿ ಹೋಗಿದ್ದ ಬೆಂಗಳೂರಿನ ಕಾರ್ ಚಾಲಕ ಯಶ್ವಂತ್ ಎಂಬ ಯುವಕನು ಗೂಡ್ಸ್...