Home namma chikmagalur chikamagalur ಕೊಪ್ಪದಲ್ಲಿ ಸಿನಿಮಾ ಶೈಲಿಯಲ್ಲಿ ಯುವತಿ ನಾಪತ್ತೆ
chikamagalurHomeLatest Newsnamma chikmagalur

ಕೊಪ್ಪದಲ್ಲಿ ಸಿನಿಮಾ ಶೈಲಿಯಲ್ಲಿ ಯುವತಿ ನಾಪತ್ತೆ

Share
Share

ಕೊಪ್ಪ: ಪಿಯುಸಿ ಮುಗಿಸಿ ಕಂಪ್ಯೂಟರ್ ಕ್ಲಾಸಿಗೆ ಹೋಗುತ್ತಿದ್ದ ಯುವತಿಯೊಬ್ಬಳು ಸಿನಿಮಾ ಶೈಲಿಯಲ್ಲಿ ನಾಪತ್ತೆಯಾಗಿರುವ ಘಟನೆ ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಮೆಸ್ಕಾಂನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಯೊಬ್ಬರ ಪುತ್ರಿ ಈ ರೀತಿ ವಿಚಿತ್ರವಾಗಿ ನಾಪತ್ತೆಯಾದ ಯುವತಿ. ಭಾನುವಾರ ಬೆಳಿಗ್ಗೆ ಈ ಘಟನೆ ಬೆಳಕಿಗೆ ಬಂದಿದೆ.

ಜೂನ್ 13 ರ ಶನಿವಾರದಂದು ತಂದೆ-ಮಗಳು ಇಬ್ಬರೂ ಶೃಂಗೇರಿ ದೇವಸ್ಥಾನಕ್ಕೆ ಹೋಗಿ ದರ್ಶನ ಮುಗಿಸಿ ರಾತ್ರಿ ಮನೆಗೆ ಮರಳಿ ಒಟ್ಟಿಗೆ ಊಟ ಮಾಡಿ ಮಲಗಿದ್ದರು. ಮರುದಿನ ಬೆಳಿಗ್ಗೆ 7:30 ಆದರೂ ಮಗಳು ರೂಮ್‌ನಿಂದ ಹೊರಬರದಿದ್ದಾಗ ತಂದೆ ಮಗಳ ಕೋಣೆಗೆ ಹೋಗಿ ನೋಡಿದ್ದಾರೆ. ಆಗ ಮಗಳು ಬೆಡ್ ಶೀಟ್ ಹೊದ್ದು ಮಲಗಿರುವಂತೆ ಕಾಣಿಸಿದೆ.

ಆದರೆ, ಎಷ್ಟು ಕರೆದರೂ ಓಗೊಡದಿದ್ದಾಗ ಅನುಮಾನಗೊಂಡು ತಂದೆ ಬೆಡ್ ಶೀಟ್ ತೆಗೆದು ನೋಡಿದ್ದಾರೆ. ಅಲ್ಲಿ ಮಗಳ ಬದಲಿಗೆ ಒಂದು ದೊಡ್ಡ ಗೊಂಬೆಯನ್ನು ಮಲಗಿಸಿ, ಅದರ ಮೇಲೆ ಬೆಡ್ ಶೀಟ್ ಹೊದಿಸಿ ನಾಪತ್ತೆಯಾಗಿರುವ ಆಘಾತಕಾರಿ ದೃಶ್ಯ ಕಂಡುಬಂದಿದೆ.

ಮನೆಯಿಂದ ಹೊರಡುವಾಗ ತಂದೆಗೆ ಅನುಮಾನ ಬಾರದಿರಲಿ ಎಂದು ಯುವತಿ ಈ ಚಾಣಾಕ್ಷ ಪ್ಲಾನ್ ಮಾಡಿದ್ದಾಳೆ ಎನ್ನಲಾಗಿದೆ. ಎಂಟು ವರ್ಷಗಳ ಹಿಂದೆಯೇ ತಾಯಿಯನ್ನು ಕಳೆದುಕೊಂಡಿದ್ದ ಮಗಳನ್ನು ತಂದೆ ಅತ್ಯಂತ ಮುದ್ದಾಗಿ ಸಾಕಿದ್ದರು. ಆಕೆಗೆ ಪೋಷಕರು ಮೊಬೈಲ್ ಕೊಡಿಸಿರಲಿಲ್ಲ. ಆದರೆ, ಇತ್ತೀಚೆಗೆ ಆಕೆಯ ಬಳಿ ಒಂದು ರಹಸ್ಯ ಮೊಬೈಲ್ ಫೋನ್ ಇರುವುದು ತಂದೆಯ ಗಮನಕ್ಕೆ ಬಂದಿತ್ತು.

ಅದರ ಬಗ್ಗೆ ವಿಚಾರಿಸಿದಾಗ ಆಕೆ ಯಾರ ಫೋನ್ ಎಂದು ಹೇಳುತ್ತಿರಲಿಲ್ಲ ಹಾಗೂ ನಂಬರ್ ಕೂಡ ನೀಡದೆ ಮುಚ್ಚಿಟ್ಟಿದ್ದಳು ಎನ್ನಲಾಗಿದೆ. ಇದೀಗ ಆಕೆ ಅದೇ ಮೊಬೈಲ್ ಮೂಲಕ ಯಾರನ್ನೋ ಸಂಪರ್ಕಿಸಿ, ಮುಂಚಿತವಾಗಿಯೇ ಸ್ಕೆಚ್ ಹಾಕಿ ಮನೆಯಿಂದ ಹೊರಟು ಹೋಗಿದ್ದಾಳೆ ಎಂಬ ಅನುಮಾನ ವ್ಯಕ್ತವಾಗಿದೆ. ಬೆಂಗಳೂರಿನಲ್ಲಿದ್ದ ಮಗ ಊರಿಗೆ ಬಂದ ನಂತರ, ತಂದೆ ಹರಿಹರಪುರ ಪೊಲೀಸ್ ಠಾಣೆಗೆ ಹಾಜರಾಗಿ ದೂರು ನೀಡಿದ್ದು, ಪೊಲೀಸರು ಯುವತಿಯ ಪತ್ತೆಗಾಗಿ ತನಿಖೆ ಚುರುಕುಗೊಳಿಸಿದ್ದಾರೆ.

Young woman goes missing in Koppa in a cinema-style setting

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ

ಕೊಟ್ಟಿಗೆಹಾರ : ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಮಳೆಗಾಲದ ಹಿನ್ನೆಲೆ ಮತ್ತು ಕಡಿಮೆಯಾದ ದೃಶ್ಯತೆಯಿಂದ ಪ್ರವಾಸಿಗರಿಗೆ ಹೆಚ್ಚಿನ ಅಪಾಯ ಸಾಧ್ಯತೆ ಇರುವ ಕುರಿತು ಆತಂಕ...

ತೀವ್ರಗೊಂಡ ಉದ್ಯಮಿ ಪತ್ನಿಯ ಆತ್ಮಹತ್ಯೆ ಪ್ರಕರಣ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಬೆಚ್ಚಿಬೀಳಿಸುವಂತಹ ಘಟನೆಯೊಂದು ನಡೆದಿದ್ದು ನಗರದ ಉದ್ಯಮಿ ರಾಜೇಶ್ ಅವರ ಪತ್ನಿ ಸುಮ (55) ಆಲೇನಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಅವರು...

Related Articles

ಅತ್ಯಾಚಾರ ಆರೋಪಿಗೆ 20 ವರ್ಷ ಕಠಿಣ ಸಜೆ-ದಂಡ

ಚಿಕ್ಕಮಗಳೂರು: ಅಪ್ರಾಪ್ತೆಯೊಬ್ಬಳು ಗರ್ಭಿಣಿಯಾಗಲು ಕಾರಣನಾದ ಆರೋಪಿಗೆ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ಎಫ್.ಟಿ.ಎಸ್.ಈ-೧ರ...

ನರೇಂದ್ರ ಮೋದಿ ಭಾರತದ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಿ

ಚಿಕ್ಕಮಗಳೂರು : ಸಾರ್ವತ್ರಿಕ ಚುನಾವಣೆಗಳ ಮೂಲಕ ಭಾರತದ ಅತಿ ಹೆಚ್ಚುಕಾಲ ಚುನಾಯಿತ ಪ್ರಧಾನಿಯಾಗಿ ಸೇವೆ ಸಲ್ಲಿಸಿರುವ...

ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು

  ಚಿಕ್ಕಮಗಳೂರು : ಕೆಪಿಸಿಸಿ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಕೆ.ಹರಿಪ್ರಸಾದ್ ಅವರ ಅಧಿಕಾರ ಸ್ವೀಕಾರ ಸಮಾರಂಭ...

ವಿದ್ಯುತ್ ಕ್ಷೇತ್ರ ಖಾಸಗಿಕರಣಕ್ಕೆ ರೈತ ಸಂಘ ವಿರೋಧ

ಚಿಕ್ಕಮಗಳೂರು : ವಿದ್ಯುತ್ ಕ್ಷೇತ್ರವನ್ನು ಟಾಟಾ ಪವರ್ ಕಂಪನಿಗೆ ನೀಡುವ ಮೂಲಕ ಖಾಸಗಿಕರಣಗೊಳಿಸುವ ನಿರ್ಧಾರವನ್ನು ಖಂಡಿಸುವುದಾಗಿ...