Home namma chikmagalur chikamagalur ಅತ್ಯಾಚಾರ ಆರೋಪಿಗೆ 20 ವರ್ಷ ಕಠಿಣ ಸಜೆ-ದಂಡ
chikamagalurHomeLatest Newsnamma chikmagalur

ಅತ್ಯಾಚಾರ ಆರೋಪಿಗೆ 20 ವರ್ಷ ಕಠಿಣ ಸಜೆ-ದಂಡ

Share
Share

ಚಿಕ್ಕಮಗಳೂರು: ಅಪ್ರಾಪ್ತೆಯೊಬ್ಬಳು ಗರ್ಭಿಣಿಯಾಗಲು ಕಾರಣನಾದ ಆರೋಪಿಗೆ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ಎಫ್.ಟಿ.ಎಸ್.ಈ-೧ರ ಪೋಕ್ಸೋ ನ್ಯಾಯಾಲಯವು ೨೦ ವರ್ಷಗಳ ಕಠಿಣ ಶಿಕ್ಷೆ ಹಾಗೂ ೨೫ ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

ಕಳಸ ತಾಲ್ಲೂಕು ಬಾಳೆಹೊಳೆ ಇಡಿಕಿಣಿ ಗ್ರಾಮದ ಬಾಳೆಹೊಳೆ ಎಸ್ಟೇಟ್‌ನ ಕೂಲಿ ಲೈನ್‌ನಲ್ಲಿ ವಾಸವಾಗಿದ್ದ ಅನಿಲ್ ಪೂಜಾರಿ ಎಂಬಾತನೇ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಈತ ಬಾಳೆಹೊಳೆ ಎಸ್ಟೇಟ್‌ಗೆ ೨೦೨೪ ರಲ್ಲಿ ಕೂಲಿ ಕೆಲಸಕ್ಕೆ ಬರುತ್ತಿದ್ದ ಅಪ್ರಾಪ್ತೆಯನ್ನು ಪರಿಚಯಿಸಿಕೊಂಡು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆಕೆಯೊಂದಿಗೆ ನಿರಂತರವಾಗಿ ಮೊಬೈಲ್ ಸಂಪರ್ಕದಲ್ಲಿದ್ದ ಆತ, ಆಕೆಯನ್ನು ಹೆಮ್ಮಕ್ಕಿ ಗ್ರಾಮದ ಬಿಳಗೂರಿನಲ್ಲಿರುವ ತನ್ನ ಮನೆಗೆ ಕರೆಸಿಕೊಂಡು ಬಲವಂತವಾಗಿ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ. ಒಂದು ವೇಳೆ ಆಕೆ ಗರ್ಭಿಣಿಯಾದಲ್ಲಿ ತಾನೇ ಮದುವೆಯಾಗುವುದಾಗಿ ಭರವಸೆಯನ್ನೂ ನೀಡಿದ್ದ ಎನ್ನಲಾಗಿದೆ.

ಈ ನಡುವೆ ಆನಾರೋಗ್ಯಕ್ಕೆ ಒಳಗಾದ ಆಕೆಯನ್ನು ಕೊಪ್ಪ ಆಸ್ಪತ್ರೆಗೆ ಕರೆದೊಯ್ದು ತಪಾಸಣೆಗೆ ಒಳಗಾದಾಗ ಆಕೆ ನಾಲ್ಕು ತಿಂಗಳ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಕಳಸ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

ಈ ಬಗ್ಗೆ ಕೊಪ್ಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಬಾಲಾಜಿ ಸಿಂಗ್, ಪಿಎಸ್‌ಐ ಚಂದ್ರಶೇಖರ್, ಸಿಬ್ಬಂದಿಯಾದ ಸಾಧಿಕ್ ಭಾಷಾ, ಎ.ಬಿ.ಪರಮೇಶ, ಶಿವಕುಮಾರ್ ಮತ್ತು ವಿಶ್ವನಾಥ್ ಪಾಳೇಗಾರ ಅವರನ್ನು ಒಳಗೊಂಡ ತಂಡ ಈ ಸಂಬಂಧ ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ಎಫ್.ಟಿ.ಎಸ್.ಈ-೧ರ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ರಾಘವೇಂದ್ರ ಗುರುಪ್ರಸಾದ್ ಕುಲಕರ್ಣಿ ಅವರು, ಸೂಕ್ತ ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ಆರೋಪ ಸಾಬೀತಾಗಿದ್ದರಿಂದ ಆರೋಪಿಗೆ ೨೦ ವರ್ಷಗಳ ಕಠಿಣ ಸಜೆ ಹಾಗೂ ೨೫ ಸಾವಿರ ರೂ.ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ದಂಡ ತೆರಲು ತಪ್ಪಿದಲ್ಲಿ ಮತ್ತೆ ಆರು ತಿಂಗಳ ಸಾಧಾರಣ ಸಜೆ ಅನುಭವಿಸುವಂತೆ ತಿಳಿಸಿದ್ದಾರೆ. ನೊಂದ ಬಾಲಕಿಗೆ ಕರ್ನಾಟಕ ರಾಜ್ಯದ ಸಂತ್ರಸ್ತರ ಪರಿಹಾರ ನಿಧಿಯಿಂದ ೪ ಲಕ್ಷ ರೂ.ಗಳ ಪರಿಹಾರ ನೀಡುವಂತೆಯೂ ನ್ಯಾಯಾಧೀಶರು ತೀರ್ಪಿನಲ್ಲಿ ಹೇಳಿದ್ದಾರೆ. ಸರ್ಕಾರದ ಪರವಾಗಿ ಪೋಕ್ಸೋ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಭರತ್ ಕುಮಾರ್ ವಾದ ಮಂಡಿಸಿದ್ದರು.

Rape accused gets 20 years rigorous imprisonment

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ

ಕೊಟ್ಟಿಗೆಹಾರ : ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಮಳೆಗಾಲದ ಹಿನ್ನೆಲೆ ಮತ್ತು ಕಡಿಮೆಯಾದ ದೃಶ್ಯತೆಯಿಂದ ಪ್ರವಾಸಿಗರಿಗೆ ಹೆಚ್ಚಿನ ಅಪಾಯ ಸಾಧ್ಯತೆ ಇರುವ ಕುರಿತು ಆತಂಕ...

ತೀವ್ರಗೊಂಡ ಉದ್ಯಮಿ ಪತ್ನಿಯ ಆತ್ಮಹತ್ಯೆ ಪ್ರಕರಣ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಬೆಚ್ಚಿಬೀಳಿಸುವಂತಹ ಘಟನೆಯೊಂದು ನಡೆದಿದ್ದು ನಗರದ ಉದ್ಯಮಿ ರಾಜೇಶ್ ಅವರ ಪತ್ನಿ ಸುಮ (55) ಆಲೇನಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಅವರು...

Related Articles

ನರೇಂದ್ರ ಮೋದಿ ಭಾರತದ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಿ

ಚಿಕ್ಕಮಗಳೂರು : ಸಾರ್ವತ್ರಿಕ ಚುನಾವಣೆಗಳ ಮೂಲಕ ಭಾರತದ ಅತಿ ಹೆಚ್ಚುಕಾಲ ಚುನಾಯಿತ ಪ್ರಧಾನಿಯಾಗಿ ಸೇವೆ ಸಲ್ಲಿಸಿರುವ...

ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು

  ಚಿಕ್ಕಮಗಳೂರು : ಕೆಪಿಸಿಸಿ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಕೆ.ಹರಿಪ್ರಸಾದ್ ಅವರ ಅಧಿಕಾರ ಸ್ವೀಕಾರ ಸಮಾರಂಭ...

ವಿದ್ಯುತ್ ಕ್ಷೇತ್ರ ಖಾಸಗಿಕರಣಕ್ಕೆ ರೈತ ಸಂಘ ವಿರೋಧ

ಚಿಕ್ಕಮಗಳೂರು : ವಿದ್ಯುತ್ ಕ್ಷೇತ್ರವನ್ನು ಟಾಟಾ ಪವರ್ ಕಂಪನಿಗೆ ನೀಡುವ ಮೂಲಕ ಖಾಸಗಿಕರಣಗೊಳಿಸುವ ನಿರ್ಧಾರವನ್ನು ಖಂಡಿಸುವುದಾಗಿ...

ಹಣ ಸಿಗಲಿಲ್ಲ ಎಂಬ ಕಾರಣಕ್ಕೆ ಯುವಕ ಕೆರೆಗೆ ಹಾರಿ ಆತ್ಮಹತ್ಯೆ

ಚಿಕ್ಕಮಗಳೂರು: ಹಣ ಸಿಗಲಿಲ್ಲ ಎಂಬ ಕಾರಣಕ್ಕೆ ಮನನೊಂದ ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...