Home namma chikmagalur chikamagalur 200 ರೂ.ಸಾಲ ನೀಡಿಲ್ಲ ಎಂದು ಸುತ್ತಿಗೆಯಿಂದ ತಲೆ ಜಜ್ಜಿ ಕೊಲೆಗೆ ಯತ್ನ
chikamagalurCrime NewsHomeLatest Newsnamma chikmagalur

200 ರೂ.ಸಾಲ ನೀಡಿಲ್ಲ ಎಂದು ಸುತ್ತಿಗೆಯಿಂದ ತಲೆ ಜಜ್ಜಿ ಕೊಲೆಗೆ ಯತ್ನ

Share
Share

ತರೀಕೆರೆ: ಕೇವಲ ಇನ್ನೂರು ರೂಪಾಯಿ ಹಣ ನೀಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನ ತಲೆಯ ಹಿಂಭಾಗಕ್ಕೆ ಸುತ್ತಿಗೆಯಿಂದ ಜಜ್ಜಿ ಕೊಲೆಗೆ ಯತ್ನಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಜೋಡಿ ಗೋವಿಂದಪ್ಪ ಗ್ರಾಮದ ಅಡಿಕೆ ತೋಟದಲ್ಲಿ ಸಂಭವಿಸಿದೆ.

ವಾಸಪ್ಪ ಕಾಲೋನಿಯ ನಿವಾಸಿ ಮಂಜುನಾಥ್ ಟಿ.ಎಚ್. ಎಂಬುವವರೇ ಹಲ್ಲೆಯಿಂದ ರಕ್ತದ ಮಡುವಿನಲ್ಲಿ ಬಿದ್ದ ದುರ್ದೈವಿ. ಇವರು ಎಂದಿನಂತೆ ತಮ್ಮ ತೋಟದಲ್ಲಿ ಡ್ರಿಪ್ ಪೈಪ್‌ಲೈನ್ ಪರಿಶೀಲಿಸುತ್ತಿದ್ದಾಗ, ಅಲ್ಲಿಗೆ ಬಂದ ಅದೇ ಕಾಲೋನಿಯ ಗಣೇಶ ಎಂಬಾತ ₹200 ಸಾಲ ಕೇಳಿದ್ದಾನೆ.

ಮಂಜುನಾಥ್ ಹಣವಿಲ್ಲ ಎಂದಿದ್ದಕ್ಕೆ ಉದ್ರಿಕ್ತನಾದ ಗಣೇಶ ಸುತ್ತಿಗೆಯಿಂದ ಮಂಜುನಾಥ್ ಅವರ ತಲೆಗೆ ಬಲವಾಗಿ ಹೊಡೆದಿದ್ದಾನೆ. ತಲೆಯಿಂದ ರಕ್ತದ ಚಿಮ್ಮಿ ಕಿರುಚಾಡುತ್ತಿದ್ದ ಮಂಜುನಾಥ್ ಅವರನ್ನು ಪಕ್ಕದ ತೋಟದವರು ತಕ್ಷಣವೇ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದು, ತರಿಕೆರೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನದ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Attempted murder after smashing head with hammer for not repaying Rs. 200 loan

Share

Leave a comment

Leave a Reply

Your email address will not be published. Required fields are marked *

Don't Miss

ಅನಧಿಕೃತ ಜೀಪ್‌ಗಳ ಹಾವಳಿ ತಪ್ಪಿಸಲು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ

ಚಿಕ್ಕಮಗಳೂರು:  ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಅನಧಿಕೃತ ಮತ್ತು ಅಕ್ರಮ ಜೀಪ್ ಗಳ ಹಾವಳಿ ತಡೆಗಟ್ಟಿ ಪ್ರವಾಸಿಗರ ಸುರಕ್ಷತೆ ಕಾಪಾಡಬೇಕು ಎಂದು ಆಗ್ರಹಿಸಿ ಜಿಲ್ಲೆಯ ಸ್ಥಳೀಯ ನಾಗರೀ ಕರು ಸೋಮವಾರ ಅಪರ ಜಿಲ್ಲಾಧಿಕಾರಿ...

ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಮಾಫಿಯಾ ದಂದೆಗಳು ?

ಚಿಕ್ಕಮಗಳೂರು: ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಅಗ್ರಸ್ಥಾನವಿದೆ.ನಿಜವಾದ ಪ್ರವಾಸಿಗರು ಜಿಲ್ಲೆಯ ಪ್ರಕೃತಿ ಸೌಂದರ್ಯದ ಜೊತೆಗೆ ಧಾರ್ಮಿಕ ಸ್ಥಳಗಳು, ಝರಿಗಳ ಜೊತೆಗೆ ಬೋರ್ಗರಿಯುವ ನದಿಗಳು, ಉಪ ನದಿಗಳು,ಅರಣ್ಯದ ಜೊತೆಗೆ ಕಾಡು ಪ್ರಾಣಿಗಳು...

Related Articles

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ...

ಅಂಚೆ ನಾಗಭೂಷಣ್ ಗೆ’ಪತ್ರಿಕಾ ರತ್ನ’ ಪ್ರಶಸ್ತಿ ಪ್ರಧಾನ

ತರೀಕೆರೆ : ಪಟ್ಟಣದ ಹಿರಿಯ ಪತ್ರಕರ್ತರು, ಜಿಲ್ಲಾ ಕನ್ನಡ ವಾರಪತ್ರಿಕೆ ಅಂಚೆವಾರ್ತೆ ಸಂಪಾದಕರು ಆದ ಅಂಚೆ...

ಇಂದು ಆರ್‌ಟಿಒ ರಾಕೇಶ್ ಕುಮಾರ್ ವಿರುದ್ಧ ವಿಚಾರಣೆ

ಚಿಕ್ಕಮಗಳೂರು: ಇಲ್ಲಿನ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಭ್ರಷ್ಟಾಚಾರ ಹಾಗೂ ಹಣಕಾಸು ಅಕ್ರಮಗಳ ಆರೋಪ ಕೇಳಿಬಂದಿರುವ ಬೆನ್ನಲ್ಲೇ...

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು...