Home namma chikmagalur chikamagalur ಲಾಂಗ್ ಬಳಸಿ ಹುಟ್ಟುಹಬ್ಬ ಕೇಕ್‌ ನಿಂದ ಕತ್ತರಿಸಿದ ಯುವಕ
chikamagalurHomeLatest Newsnamma chikmagalur

ಲಾಂಗ್ ಬಳಸಿ ಹುಟ್ಟುಹಬ್ಬ ಕೇಕ್‌ ನಿಂದ ಕತ್ತರಿಸಿದ ಯುವಕ

Share
Share

ಚಿಕ್ಕಮಗಳೂರು: ಕಾನೂನು ಉಲ್ಲಂಘಿಸಿ, ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುವ ರೀತಿಯಲ್ಲಿ ಹುಟ್ಟುಹಬ್ಬ ಆಚರಿಸಿದ ಘಟನೆ ಚಿಕ್ಕಮಗಳೂರು ಹೊರ ವಲಯದ ವಾಜಪೇಯಿ ಲೇಔಟ್‌ನಲ್ಲಿ ಕಳೆದ ರಾತ್ರಿ ಬೆಳಕಿಗೆ ನಡೆದಿದೆ.

20 ವರ್ಷದ ಮಹಮ್ಮದ್ ಸಮೀರ್ ಎಂಬ ಯುವಕ ಹತ್ತಕ್ಕೂ ಹೆಚ್ಚು ಸ್ನೇಹಿತರೊಂದಿಗೆ ಸೇರಿ ಈ ಕೃತ್ಯ ಎಸಗಿದ್ದಾನೆ. ಕಾರಿನಲ್ಲಿ ರೌಡಿ ಸ್ಟೈಲ್‌ನಲ್ಲಿ ಬಂದು ಕಾರಿನ ಬಾನೆಟ್ ಮೇಲೆ 5 ಕೆಜಿ ಕೇಕ್ ಇಟ್ಟು, ಸಾರ್ವಜನಿಕ ರಸ್ತೆಯಲ್ಲೇ ಸುಮಾರು ಎರಡೂವರೆ ಅಡಿ ಉದ್ದದ ತಲ್ವಾರ್ (ಲಾಂಗ್) ಬಳಸಿ ಅದನ್ನು ಕತ್ತರಿಸಿದ್ದಾನೆ.

ಈ ಹುಟ್ಟುಹಬ್ಬದ ಆಚರಣೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಡುರಸ್ತೆಯಲ್ಲಿ ಮಾರಕಾಸ್ತ್ರ ಪ್ರದರ್ಶಿಸಿ ಜನರಲ್ಲಿ ಭಯದ ವಾತಾವರಣ ನಿರ್ಮಿಸಿದ ಹಾಗೂ ಕಾನೂನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಆರೋಪಿ ಮಹಮ್ಮದ್ ಸಮೀರ್ ವಿರುದ್ಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Cut out a birthday cake using a long knife.

Share

Leave a comment

Leave a Reply

Your email address will not be published. Required fields are marked *

Don't Miss

ಅನಧಿಕೃತ ಜೀಪ್‌ಗಳ ಹಾವಳಿ ತಪ್ಪಿಸಲು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ

ಚಿಕ್ಕಮಗಳೂರು:  ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಅನಧಿಕೃತ ಮತ್ತು ಅಕ್ರಮ ಜೀಪ್ ಗಳ ಹಾವಳಿ ತಡೆಗಟ್ಟಿ ಪ್ರವಾಸಿಗರ ಸುರಕ್ಷತೆ ಕಾಪಾಡಬೇಕು ಎಂದು ಆಗ್ರಹಿಸಿ ಜಿಲ್ಲೆಯ ಸ್ಥಳೀಯ ನಾಗರೀ ಕರು ಸೋಮವಾರ ಅಪರ ಜಿಲ್ಲಾಧಿಕಾರಿ...

ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಮಾಫಿಯಾ ದಂದೆಗಳು ?

ಚಿಕ್ಕಮಗಳೂರು: ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಅಗ್ರಸ್ಥಾನವಿದೆ.ನಿಜವಾದ ಪ್ರವಾಸಿಗರು ಜಿಲ್ಲೆಯ ಪ್ರಕೃತಿ ಸೌಂದರ್ಯದ ಜೊತೆಗೆ ಧಾರ್ಮಿಕ ಸ್ಥಳಗಳು, ಝರಿಗಳ ಜೊತೆಗೆ ಬೋರ್ಗರಿಯುವ ನದಿಗಳು, ಉಪ ನದಿಗಳು,ಅರಣ್ಯದ ಜೊತೆಗೆ ಕಾಡು ಪ್ರಾಣಿಗಳು...

Related Articles

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ...

ಅಂಚೆ ನಾಗಭೂಷಣ್ ಗೆ’ಪತ್ರಿಕಾ ರತ್ನ’ ಪ್ರಶಸ್ತಿ ಪ್ರಧಾನ

ತರೀಕೆರೆ : ಪಟ್ಟಣದ ಹಿರಿಯ ಪತ್ರಕರ್ತರು, ಜಿಲ್ಲಾ ಕನ್ನಡ ವಾರಪತ್ರಿಕೆ ಅಂಚೆವಾರ್ತೆ ಸಂಪಾದಕರು ಆದ ಅಂಚೆ...

ಇಂದು ಆರ್‌ಟಿಒ ರಾಕೇಶ್ ಕುಮಾರ್ ವಿರುದ್ಧ ವಿಚಾರಣೆ

ಚಿಕ್ಕಮಗಳೂರು: ಇಲ್ಲಿನ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಭ್ರಷ್ಟಾಚಾರ ಹಾಗೂ ಹಣಕಾಸು ಅಕ್ರಮಗಳ ಆರೋಪ ಕೇಳಿಬಂದಿರುವ ಬೆನ್ನಲ್ಲೇ...

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು...