Home namma chikmagalur chikamagalur ಲೈಂಗಿಕ ದೌರ್ಜನ್ಯ ಎಸಗಿದ ಇಬ್ಬರು ಶಿಕ್ಷಕರ ಮೇಲೆ ಪೋಕೋ ಪ್ರಕರಣ
chikamagalurCrime NewsHomeLatest Newsnamma chikmagalur

ಲೈಂಗಿಕ ದೌರ್ಜನ್ಯ ಎಸಗಿದ ಇಬ್ಬರು ಶಿಕ್ಷಕರ ಮೇಲೆ ಪೋಕೋ ಪ್ರಕರಣ

Share
Share

ಕಡೂರು: ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಕಾಮುಕ ಸಹ ಶಿಕ್ಷಕ ಹಾಗೂ ಆತನಿಗೆ ಸಾಥ್ ನೀಡಿದ ಮುಖ್ಯಶಿಕ್ಷಕನ ವಿರುದ್ಧ ಕಠಿಣ ಕಾಯ್ದೆಗಳ ಅಡಿಯಲ್ಲಿ ಮೊಕದ್ದಮೆ ದಾಖಲಾಗಿದೆ.

ಕಳೆದ ಕೆಲವು ದಿನಗಳಿಂದ ಶಾಲೆಯ ಸಹ ಶಿಕ್ಷಕನೊಬ್ಬ ಅಪ್ರಾಪ್ತ ವಿದ್ಯಾರ್ಥಿನಿಯರೊಂದಿಗೆ ನಿರಂತರವಾಗಿ ಅಸಭ್ಯವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ. ಆರೋಪಿ ಶಿಕ್ಷಕನು ವಿದ್ಯಾರ್ಥಿನಿಯೊಬ್ಬಳಿಗೆ ಮೊಬೈಲ್ ತರುವಂತೆ ಒತ್ತಾಯಿಸಿ, ಆಕೆಯ ಸಂಖ್ಯೆಗೆ ಅಶ್ಲೀಲ ವೀಡಿಯೊ ಹಾಗೂ ಸಂದೇಶಗಳನ್ನು ಕಳುಹಿಸಿದ್ದಲ್ಲದೆ, ಒಳ ಉಡುಪು ಧರಿಸಿದ್ದಾಳೆಯೇ ಎಂದು ಪರೀಕ್ಷಿಸುವ ನೆಪದಲ್ಲಿ ವಿಕೃತವಾಗಿ ವರ್ತಿಸಿದ್ದಾನೆ.

ಈ ದೌರ್ಜನ್ಯದಿಂದ ಭಯಭೀತಳಾದ ಬಾಲಕಿ ಶಾಲೆಗೆ ಹೋಗಲು ನಿರಾಕರಿಸಿದಾಗ ಹೆತ್ತವರು ವಿಚಾರಿಸಿದ್ದು, ಈ ವೇಳೆ ಶಿಕ್ಷಕನ ಅಸಭ್ಯ ವರ್ತನೆ ಹಾಗೂ ದೇವರ ಮೇಲೆ ಆಣೆ ಮಾಡಿಸಿ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ ವಿಚಾರ ಬೆಳಕಿಗೆ ಬಂದಿದೆ. ಇದೇ ರೀತಿ ಶಾಲೆಯ ಇತರ ಇಬ್ಬರು ವಿದ್ಯಾರ್ಥಿನಿಯರಿಗೂ ಈತ ಕಿರುಕುಳ ನೀಡಿರುವುದು ಪೋಷಕರ ಗಮನಕ್ಕೆ ಬಂದಿದೆ.

ಈ ಗಂಭೀರ ವಿಷಯದ ಬಗ್ಗೆ ಪೋಷಕರು ಶಾಲೆಯ ಮುಖ್ಯ ಶಿಕ್ಷಕನಿಗೆ ದೂರು ನೀಡಿದ್ದರೂ, ಅವರು ಮೇಲಾಧಿಕಾರಿಗಳಿಗೆ ಮಾಹಿತಿ ನೀಡದೆ ಹಾಗೂ ಯಾವುದೇ ತುರ್ತು ಕ್ರಮ ಕೈಗೊಳ್ಳದೆ ಕರ್ತವ್ಯ ಲೋಪ ಎಸಗಿದ್ದಾರೆ. ವಿಷಯ ತಿಳಿದು ಕ್ಷೇತ್ರ ಶಿಕ್ಷಣಾಧಿಕಾರಿಗಳು (BEO) ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ಹಾಗೂ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಭೆ ನಡೆಸಿದ್ದಾರೆ. ಪೋಷಕರ ಆತಂಕ ಮತ್ತು ಅಧಿಕಾರಿಗಳ ತನಿಖಾ ವರದಿಯ ಆಧಾರದ ಮೇಲೆ ಬಿಇಒ ಅವರು ನೀಡಿದ ಅಧಿಕೃತ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿ ಸಹ ಶಿಕ್ಷಕನ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS), ಪೋಕೋ ಕಾಯ್ದೆ, ಐಟಿ ಕಾಯ್ದೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ (SC/ST Act) ಮೊಕದ್ದಮೆ ಹೂಡಲಾಗಿದ್ದು, ಘಟನೆಯನ್ನು ಮುಚ್ಚಿಡಲು ಯತ್ನಿಸಿದ ಮುಖ್ಯ ಶಿಕ್ಷಕನನ್ನೂ ಆರೋಪಿಯನ್ನಾಗಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

POCSO case against two teachers for sexual assault

Share

Leave a comment

Leave a Reply

Your email address will not be published. Required fields are marked *

Don't Miss

ಅನಧಿಕೃತ ಜೀಪ್‌ಗಳ ಹಾವಳಿ ತಪ್ಪಿಸಲು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ

ಚಿಕ್ಕಮಗಳೂರು:  ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಅನಧಿಕೃತ ಮತ್ತು ಅಕ್ರಮ ಜೀಪ್ ಗಳ ಹಾವಳಿ ತಡೆಗಟ್ಟಿ ಪ್ರವಾಸಿಗರ ಸುರಕ್ಷತೆ ಕಾಪಾಡಬೇಕು ಎಂದು ಆಗ್ರಹಿಸಿ ಜಿಲ್ಲೆಯ ಸ್ಥಳೀಯ ನಾಗರೀ ಕರು ಸೋಮವಾರ ಅಪರ ಜಿಲ್ಲಾಧಿಕಾರಿ...

ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಮಾಫಿಯಾ ದಂದೆಗಳು ?

ಚಿಕ್ಕಮಗಳೂರು: ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಅಗ್ರಸ್ಥಾನವಿದೆ.ನಿಜವಾದ ಪ್ರವಾಸಿಗರು ಜಿಲ್ಲೆಯ ಪ್ರಕೃತಿ ಸೌಂದರ್ಯದ ಜೊತೆಗೆ ಧಾರ್ಮಿಕ ಸ್ಥಳಗಳು, ಝರಿಗಳ ಜೊತೆಗೆ ಬೋರ್ಗರಿಯುವ ನದಿಗಳು, ಉಪ ನದಿಗಳು,ಅರಣ್ಯದ ಜೊತೆಗೆ ಕಾಡು ಪ್ರಾಣಿಗಳು...

Related Articles

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ...

ಅಂಚೆ ನಾಗಭೂಷಣ್ ಗೆ’ಪತ್ರಿಕಾ ರತ್ನ’ ಪ್ರಶಸ್ತಿ ಪ್ರಧಾನ

ತರೀಕೆರೆ : ಪಟ್ಟಣದ ಹಿರಿಯ ಪತ್ರಕರ್ತರು, ಜಿಲ್ಲಾ ಕನ್ನಡ ವಾರಪತ್ರಿಕೆ ಅಂಚೆವಾರ್ತೆ ಸಂಪಾದಕರು ಆದ ಅಂಚೆ...

ಇಂದು ಆರ್‌ಟಿಒ ರಾಕೇಶ್ ಕುಮಾರ್ ವಿರುದ್ಧ ವಿಚಾರಣೆ

ಚಿಕ್ಕಮಗಳೂರು: ಇಲ್ಲಿನ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಭ್ರಷ್ಟಾಚಾರ ಹಾಗೂ ಹಣಕಾಸು ಅಕ್ರಮಗಳ ಆರೋಪ ಕೇಳಿಬಂದಿರುವ ಬೆನ್ನಲ್ಲೇ...

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು...