Home namma chikmagalur chikamagalur ಕಾಫಿನಾಡಿನಲ್ಲಿ ಲಾಂಗು – ಮಚ್ಚುಗದ್ದೆ ಸುದ್ದಿ
chikamagalurHomeLatest Newsnamma chikmagalur

ಕಾಫಿನಾಡಿನಲ್ಲಿ ಲಾಂಗು – ಮಚ್ಚುಗದ್ದೆ ಸುದ್ದಿ

Share
Share

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಲಾಂಗು ಮತ್ತು ಮಚ್ಚುಗಳಂತಹ ಮಾರಕಾಸ್ತ್ರಗಳು ಬಳಕೆ ತೀರಾ ಸಾಮಾನ್ಯ ಎಂಬಂತಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಕೇಕ್ ಕತ್ತರಿಸುವ ಸಂಭ್ರಮಾಚರಣೆ ಇರಲಿ ಅಥವಾ ರಾಜಕೀಯ ನಾಯಕರ ನಡುವಿನ ಜಗಳವೇ ಇರಲಿ, ಎಲ್ಲದಕ್ಕೂ ಮಾರಕಾಸ್ತ್ರಗಳನ್ನು ಬಳಸುವ ಕೆಟ್ಟ ಸಂಸ್ಕೃತಿ ಹೆಚ್ಚಾಗುತ್ತಿದೆ. ಸೌಹಾರ್ದತೆಯಿಂದ ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳುವ ಬದಲು, ಸಣ್ಣಪುಟ್ಟ ವಿಷಯಗಳಿಗೂ ಕೈಗೆ ಲಾಂಗು-ಮಚ್ಚುಗಳನ್ನು ತೆಗೆದುಕೊಳ್ಳುವ ಪ್ರವೃತ್ತಿ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ.

ಇದಕ್ಕೆ ಮತ್ತೊಂದು ಆಘಾತಕಾರಿ ಸೇರ್ಪಡೆ ಎಂಬಂತೆ, ಮೂಡಿಗೆರೆ ತಾಲೂಕಿನ ಜೇನುಬೈಲು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಲಾಂಗ್ ಹಿಡಿದು ಜಗಳವಾಡಿರುವ ಘಟನೆ ನಡೆದಿದೆ. ಗ್ರಾಮದಲ್ಲಿ ತಲೆ ಎತ್ತಿದ್ದ ಅಕ್ರಮ ಕಟ್ಟಡವೊಂದರ ಬಗ್ಗೆ ತಾರೇಶ್ ಎಂಬುವವರು ಪ್ರಶ್ನೆ ಮಾಡಿದ್ದೇ ಈ ಘಟನೆಗೆ ಮುಖ್ಯ ಕಾರಣವಾಗಿದೆ.

ಇದರಿಂದ ತೀವ್ರ ಕೋಪಗೊಂಡ ಉದಯ್ ತಾರೇಶ್ ಅವರ ಮೇಲೆ ನೇರವಾಗಿ ಮಚ್ಚು ಹಿಡಿದು ಹಲ್ಲೆ ನಡೆಸಲು ಮುಂದಾಗಿದ್ದಾನೆ. ಘಟನೆಯ ತೀವ್ರತೆಯನ್ನು ಅರಿತ ಸ್ಥಳೀಯರು ತಕ್ಷಣವೇ ಮಧ್ಯಪ್ರವೇಶಿಸಿ ಇಬ್ಬರ ನಡುವಿನ ಜಗಳವನ್ನು ಬಿಡಿಸಿ ಕಳುಹಿಸುವ ಮೂಲಕ ಗಲಾಟೆಯನ್ನು ತಪ್ಪಿಸಿದ್ದಾರೆ. ನಡು ರಸ್ತೆಯಲ್ಲಿ ಲಾಂಗ್ ಹಿಡಿದ ವಿಡಿಯೋ ವೈರಲ್ ಆಗಿದ್ದು ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

The news of the long-awaited arrival of the coffee tree in the country of coffee

Share

Leave a comment

Leave a Reply

Your email address will not be published. Required fields are marked *

Don't Miss

ಅನಧಿಕೃತ ಜೀಪ್‌ಗಳ ಹಾವಳಿ ತಪ್ಪಿಸಲು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ

ಚಿಕ್ಕಮಗಳೂರು:  ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಅನಧಿಕೃತ ಮತ್ತು ಅಕ್ರಮ ಜೀಪ್ ಗಳ ಹಾವಳಿ ತಡೆಗಟ್ಟಿ ಪ್ರವಾಸಿಗರ ಸುರಕ್ಷತೆ ಕಾಪಾಡಬೇಕು ಎಂದು ಆಗ್ರಹಿಸಿ ಜಿಲ್ಲೆಯ ಸ್ಥಳೀಯ ನಾಗರೀ ಕರು ಸೋಮವಾರ ಅಪರ ಜಿಲ್ಲಾಧಿಕಾರಿ...

ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಮಾಫಿಯಾ ದಂದೆಗಳು ?

ಚಿಕ್ಕಮಗಳೂರು: ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಅಗ್ರಸ್ಥಾನವಿದೆ.ನಿಜವಾದ ಪ್ರವಾಸಿಗರು ಜಿಲ್ಲೆಯ ಪ್ರಕೃತಿ ಸೌಂದರ್ಯದ ಜೊತೆಗೆ ಧಾರ್ಮಿಕ ಸ್ಥಳಗಳು, ಝರಿಗಳ ಜೊತೆಗೆ ಬೋರ್ಗರಿಯುವ ನದಿಗಳು, ಉಪ ನದಿಗಳು,ಅರಣ್ಯದ ಜೊತೆಗೆ ಕಾಡು ಪ್ರಾಣಿಗಳು...

Related Articles

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ...

ಅಂಚೆ ನಾಗಭೂಷಣ್ ಗೆ’ಪತ್ರಿಕಾ ರತ್ನ’ ಪ್ರಶಸ್ತಿ ಪ್ರಧಾನ

ತರೀಕೆರೆ : ಪಟ್ಟಣದ ಹಿರಿಯ ಪತ್ರಕರ್ತರು, ಜಿಲ್ಲಾ ಕನ್ನಡ ವಾರಪತ್ರಿಕೆ ಅಂಚೆವಾರ್ತೆ ಸಂಪಾದಕರು ಆದ ಅಂಚೆ...

ಇಂದು ಆರ್‌ಟಿಒ ರಾಕೇಶ್ ಕುಮಾರ್ ವಿರುದ್ಧ ವಿಚಾರಣೆ

ಚಿಕ್ಕಮಗಳೂರು: ಇಲ್ಲಿನ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಭ್ರಷ್ಟಾಚಾರ ಹಾಗೂ ಹಣಕಾಸು ಅಕ್ರಮಗಳ ಆರೋಪ ಕೇಳಿಬಂದಿರುವ ಬೆನ್ನಲ್ಲೇ...

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು...