Home namma chikmagalur chikamagalur ಮುದುಗುಂಡಿ ಗ್ರಾಮದಲ್ಲಿ ಹೆಣ್ಣು ಚಿರತೆ ಸೆರೆ
chikamagalurHomeLatest Newsnamma chikmagalur

ಮುದುಗುಂಡಿ ಗ್ರಾಮದಲ್ಲಿ ಹೆಣ್ಣು ಚಿರತೆ ಸೆರೆ

Share
Share

ತರೀಕೆರೆ: ತಾಲ್ಲೂಕಿನ ಮುದುಗುಂಡಿ ಗ್ರಾಮದಲ್ಲಿ ಸುಮಾರು 3 ವರ್ಷ ವಯಸ್ಸಿನ ಹೆಣ್ಣು ಚಿರತೆಯನ್ನು ಅರಣ್ಯ ಇಲಾಖೆ ಶನಿವಾರ ಸೆರೆಹಿಡಿದಿದೆ.

ಮುದುಗುಂಡಿ ಗ್ರಾಮದಲ್ಲಿ ಬಳಕೆ ಮಾಡದ ಶೌಚಾಲಯದಲ್ಲಿದ್ದ ನಾಯಿಗಳನ್ನು ಹಿಡಿಯಲು ಶನಿವಾರ ಬೆಳಿಗ್ಗೆ ಚಿರತೆ ಶೌಚಾಲಯದ ಒಳಗೆ ನುಗ್ಗಿದೆ. ಶೌಚಾಲಯದ ಒಳಗೆ ಹೋದ ನಂತರ ಶೌಚಾಲಯದ ಬಾಗಿಲು ಮುಚ್ಚಿದ ಕಾರಣ ಚಿರತೆಗೆ ಶೌಚಾಲಯದಿಂದ ಹೊರ ಬರಲು ಸಾಧ್ಯವಾಗದೆ ಬಂಧಿಯಾಗಿತ್ತು.

ಶೌಚಾಲಯದಲ್ಲಿ ಶಬ್ದ ಆಗುತ್ತಿರುವುದನ್ನು ಕೇಳಿಸಿಕೊಂಡ ಸ್ಥಳೀಯರು ಅರಣ್ಯ ಇಲಾಖೆಗೆ ವಿಷಯ ಮುಟ್ಟಿಸಿದ್ದಾರೆ. ವಿಷಯ ತಿಳಿದು ಭದ್ರಾವತಿಯ ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರಕುಮಾರ್ ನಿರ್ದೇಶನದಂತೆ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಬಲೆ ಮತ್ತು ಬೋನಿನೊಂದಿಗೆ ಚಿರತೆ ಸೆರೆಹಿಡಿ ಯುವ ಕಾರ್ಯಾಚರಣೆ ಆರಂಭಿಸಿದ್ದರು.

ಚಿರತೆಯನ್ನು ಸುರಕ್ಷಿತವಾಗಿ ಸೆರೆಹಿಡಿಯುವ ಸಲುವಾಗಿ ಮುದುಗುಂಡಿ ಗ್ರಾಮಕ್ಕೆ ಬಂದ ಶಿವಮೊಗ್ಗ ತ್ಯಾವರೆಕೊಪ್ಪದ ಪಶುವೈದ್ಯ ಡಾ.ಶ್ರವಣಸಿಂಗ್ ರಾಥೋಡ್ ತಂಡವು ಶೌಚಾಲಯದ ಮೇಲ್ಬಾಗದಿಂದ ಅರಿವಳಿಕೆ ಲಸಿಕೆ ನೀಡಿದ್ದಾರೆ.

ಪ್ರಜ್ಞೆ ತಪ್ಪಿದ ನಂತರ ಚಿರತೆಯನ್ನು ಸೆರೆಹಿಡಿದು ಪಟ್ಟಣದ ಅರಣ್ಯ ಇಲಾಖೆ ಕಚೇರಿಗೆ ಸಾಗಿಸಲಾಗಿದೆ. ಚಿರತೆಯ ಆರೋಗ್ಯ ತಪಾಸಣಾ ಕಾರ್ಯ ಮುಗಿದ ನಂತರ ಚಿರತೆಯನ್ನು ಕಾಡಿಗೆ ಬಿಡಲಾಗುವುದು ಎಂದು ಎಸಿಎಫ್ ಉಮ್ಮರ್ ಬಾದ್‌ಷಾ ಪತ್ರಿಕೆಗೆ ತಿಳಿಸಿದರು.

ಈ ಸಂದರ್ಭದಲ್ಲಿ ಲಕ್ಕವಳ್ಳಿ ವಲಯ ಅರಣ್ಯಾಧಿಕಾರಿ ಇಂದು, ಡಿಆರ್‌ಎಫ್‌ಒ ಉಮೇಶ್ ಒಳಗೊಂಡು ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂಧಿ ಹಾಗೂ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.

A female leopard was caught in Mudugundi village

Share

Leave a comment

Leave a Reply

Your email address will not be published. Required fields are marked *

Don't Miss

ಅನಧಿಕೃತ ಜೀಪ್‌ಗಳ ಹಾವಳಿ ತಪ್ಪಿಸಲು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ

ಚಿಕ್ಕಮಗಳೂರು:  ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಅನಧಿಕೃತ ಮತ್ತು ಅಕ್ರಮ ಜೀಪ್ ಗಳ ಹಾವಳಿ ತಡೆಗಟ್ಟಿ ಪ್ರವಾಸಿಗರ ಸುರಕ್ಷತೆ ಕಾಪಾಡಬೇಕು ಎಂದು ಆಗ್ರಹಿಸಿ ಜಿಲ್ಲೆಯ ಸ್ಥಳೀಯ ನಾಗರೀ ಕರು ಸೋಮವಾರ ಅಪರ ಜಿಲ್ಲಾಧಿಕಾರಿ...

ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಮಾಫಿಯಾ ದಂದೆಗಳು ?

ಚಿಕ್ಕಮಗಳೂರು: ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಅಗ್ರಸ್ಥಾನವಿದೆ.ನಿಜವಾದ ಪ್ರವಾಸಿಗರು ಜಿಲ್ಲೆಯ ಪ್ರಕೃತಿ ಸೌಂದರ್ಯದ ಜೊತೆಗೆ ಧಾರ್ಮಿಕ ಸ್ಥಳಗಳು, ಝರಿಗಳ ಜೊತೆಗೆ ಬೋರ್ಗರಿಯುವ ನದಿಗಳು, ಉಪ ನದಿಗಳು,ಅರಣ್ಯದ ಜೊತೆಗೆ ಕಾಡು ಪ್ರಾಣಿಗಳು...

Related Articles

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ...

ಅಂಚೆ ನಾಗಭೂಷಣ್ ಗೆ’ಪತ್ರಿಕಾ ರತ್ನ’ ಪ್ರಶಸ್ತಿ ಪ್ರಧಾನ

ತರೀಕೆರೆ : ಪಟ್ಟಣದ ಹಿರಿಯ ಪತ್ರಕರ್ತರು, ಜಿಲ್ಲಾ ಕನ್ನಡ ವಾರಪತ್ರಿಕೆ ಅಂಚೆವಾರ್ತೆ ಸಂಪಾದಕರು ಆದ ಅಂಚೆ...

ಇಂದು ಆರ್‌ಟಿಒ ರಾಕೇಶ್ ಕುಮಾರ್ ವಿರುದ್ಧ ವಿಚಾರಣೆ

ಚಿಕ್ಕಮಗಳೂರು: ಇಲ್ಲಿನ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಭ್ರಷ್ಟಾಚಾರ ಹಾಗೂ ಹಣಕಾಸು ಅಕ್ರಮಗಳ ಆರೋಪ ಕೇಳಿಬಂದಿರುವ ಬೆನ್ನಲ್ಲೇ...

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು...