Home namma chikmagalur chikamagalur ಗಾಂಜಾ ಪೆಡ್ಲರ್ ಹೆಡೆಮುರಿ ಕಟ್ಟಿದ ನಗರ ಪೊಲೀಸರು
chikamagalurCrime NewsHomeLatest Newsnamma chikmagalur

ಗಾಂಜಾ ಪೆಡ್ಲರ್ ಹೆಡೆಮುರಿ ಕಟ್ಟಿದ ನಗರ ಪೊಲೀಸರು

Share
Share

ಚಿಕ್ಕಮಗಳೂರು: ವಿದ್ಯಾರ್ಥಿಗಳನ್ನು ಹಾಗೂ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ಗಾಂಜಾ ಪೆಡ್ಲರ್ ನನ್ನು ನಗರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಎಐಟಿ ಕಾಲೇಜು ಮುಂಭಾಗದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಸಣ್ಣ ಸಣ್ಣ ಪ್ಯಾಕೆಟ್‌ಗಳಲ್ಲಿ ಅಕ್ರಮವಾಗಿ ಗಾಂಜಾ ತಂದು ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ತಕ್ಷಣ ಕಾರ್ಯಪ್ರವೃತ್ತರಾದ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಧನರಾಜ್ ಟಿ.ಎಂ. ಅವರು ತಮ್ಮ ಸಿಬ್ಬಂದಿಯೊಂದಿಗೆ ವಿಶೇಷ ಕಾರ್ಯಾಚರಣೆ ಕೈಗೊಂಡು.

ಬಾತ್ಮಿದಾರರಿಂದ ಬಂದ ಖಚಿತ ಸುಳಿವಿನ ಮೇರೆಗೆ ಕಾಲೇಜು ಮುಂಭಾಗದ ನಿಗದಿತ ಸ್ಥಳಕ್ಕೆ ಧಾವಿಸಿದ ಪೊಲೀಸ್ ತಂಡ, ಗಾಂಜಾ ಮಾರಾಟದ ದಂಧೆಯಲ್ಲಿ ನಿರತನಾಗಿದ್ದ ಆಸಾಮಿಯನ್ನು ಸುತ್ತುವರಿದು ವಶಕ್ಕೆ ಪಡೆದಿದೆ. ಯುವ ಪೀಳಿಗೆಯನ್ನು ಮಾದಕ ವ್ಯಸನದ ಕೂಪಕ್ಕೆ ತಳ್ಳುತ್ತಿದ್ದ ಆರೋಪಿಯ ವಿರುದ್ಧ ಮಾದಕ ದ್ರವ್ಯ ನಿಯಂತ್ರಣ ಕಾಯ್ದೆಯಡಿ (NDPS) ನಗರ ಪೊಲೀಸ್ ಠಾಣೆಯಲ್ಲಿ ಗಂಭೀರ ಮೊಕದ್ದಮೆ ಹೂಡಲಾಗಿದ್ದು, ಜಾಲದ ಹಿಂದಿರುವ ಇತರೆ ಕಿಂಗ್‌ಪಿನ್‌ಗಳ ಪತ್ತೆಗೆ ತನಿಖೆ ಚುರುಕುಗೊಳಿಸಲಾಗಿದೆ.

City police arrest marijuana peddler

Share

Leave a comment

Leave a Reply

Your email address will not be published. Required fields are marked *

Don't Miss

ಹಣ ಸಿಗಲಿಲ್ಲ ಎಂಬ ಕಾರಣಕ್ಕೆ ಯುವಕ ಕೆರೆಗೆ ಹಾರಿ ಆತ್ಮಹತ್ಯೆ

ಚಿಕ್ಕಮಗಳೂರು: ಹಣ ಸಿಗಲಿಲ್ಲ ಎಂಬ ಕಾರಣಕ್ಕೆ ಮನನೊಂದ ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬನ್ನೂರು ಗ್ರಾಮದಲ್ಲಿ ನಡೆದಿದೆ. ಟಿಂಬರ್ ಸೇರಿದಂತೆ ಇನ್ನಿತರ ಕೆಲಸ ಮಾಡಿಕೊಂಡಿದ್ದ ಬನ್ನೂರಿನ...

ಕೊಪ್ಪದಲ್ಲಿ ಸಿನಿಮಾ ಶೈಲಿಯಲ್ಲಿ ಯುವತಿ ನಾಪತ್ತೆ

ಕೊಪ್ಪ: ಪಿಯುಸಿ ಮುಗಿಸಿ ಕಂಪ್ಯೂಟರ್ ಕ್ಲಾಸಿಗೆ ಹೋಗುತ್ತಿದ್ದ ಯುವತಿಯೊಬ್ಬಳು ಸಿನಿಮಾ ಶೈಲಿಯಲ್ಲಿ ನಾಪತ್ತೆಯಾಗಿರುವ ಘಟನೆ ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಮೆಸ್ಕಾಂನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಯೊಬ್ಬರ ಪುತ್ರಿ...

Related Articles

ಕಸವಿಂಗಡಣೆಗೆ ಶಾಸನ ಬದ್ದ ಜಾಗೃತಿ

ಚಿಕ್ಕಮಗಳೂರು:  ಸುಪ್ರಿಂ ಕೋರ್ಟ್ ನಿರ್ದೇಶನದ ಮೇರೆಗೆ ನಗರಸಭೆ ವತಿಯಿಂದ ನಾಲ್ಕು ಹಂತದಲ್ಲಿ ಕಸ ವಿಂಗಡಣೆ ಮಾಡಿ...

ಸಂಘಟನೆ ವಿರೋಧಿ ಚಟುವಟಿಕೆ ಮೂವರ ಸದಸ್ಯರ ಅಮಾನತು

ಚಿಕ್ಕಮಗಳೂರು : ಸಂಘಟನೆ ವಿರೋಧಿ ಚಟುವಟಿಕೆ ನಡೆಸಿದ ಆರೋಪದಡಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಪ್ರಾಥಮಿಕ...

ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ

ಚಿಕ್ಕಮಗಳೂರು:  ಬಾಲ ಕಾರ್ಮಿಕರನ್ನು ಯಾವುದೇ ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪ ರಾಧವಾಗಿದ್ದು, ಬಾಲ ಕಾರ್ಮಿಕರನ್ನು...

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಂಸದರ ಅಸಮಾಧಾನ

ಚಿಕ್ಕಮಗಳೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳ...