Home namma chikmagalur chikamagalur ಗಾಂಜಾ ಪೆಡ್ಲರ್ ಹೆಡೆಮುರಿ ಕಟ್ಟಿದ ನಗರ ಪೊಲೀಸರು
chikamagalurCrime NewsHomeLatest Newsnamma chikmagalur

ಗಾಂಜಾ ಪೆಡ್ಲರ್ ಹೆಡೆಮುರಿ ಕಟ್ಟಿದ ನಗರ ಪೊಲೀಸರು

Share
Share

ಚಿಕ್ಕಮಗಳೂರು: ವಿದ್ಯಾರ್ಥಿಗಳನ್ನು ಹಾಗೂ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ಗಾಂಜಾ ಪೆಡ್ಲರ್ ನನ್ನು ನಗರ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಎಐಟಿ ಕಾಲೇಜು ಮುಂಭಾಗದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಸಣ್ಣ ಸಣ್ಣ ಪ್ಯಾಕೆಟ್‌ಗಳಲ್ಲಿ ಅಕ್ರಮವಾಗಿ ಗಾಂಜಾ ತಂದು ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ತಕ್ಷಣ ಕಾರ್ಯಪ್ರವೃತ್ತರಾದ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ಧನರಾಜ್ ಟಿ.ಎಂ. ಅವರು ತಮ್ಮ ಸಿಬ್ಬಂದಿಯೊಂದಿಗೆ ವಿಶೇಷ ಕಾರ್ಯಾಚರಣೆ ಕೈಗೊಂಡು.

ಬಾತ್ಮಿದಾರರಿಂದ ಬಂದ ಖಚಿತ ಸುಳಿವಿನ ಮೇರೆಗೆ ಕಾಲೇಜು ಮುಂಭಾಗದ ನಿಗದಿತ ಸ್ಥಳಕ್ಕೆ ಧಾವಿಸಿದ ಪೊಲೀಸ್ ತಂಡ, ಗಾಂಜಾ ಮಾರಾಟದ ದಂಧೆಯಲ್ಲಿ ನಿರತನಾಗಿದ್ದ ಆಸಾಮಿಯನ್ನು ಸುತ್ತುವರಿದು ವಶಕ್ಕೆ ಪಡೆದಿದೆ. ಯುವ ಪೀಳಿಗೆಯನ್ನು ಮಾದಕ ವ್ಯಸನದ ಕೂಪಕ್ಕೆ ತಳ್ಳುತ್ತಿದ್ದ ಆರೋಪಿಯ ವಿರುದ್ಧ ಮಾದಕ ದ್ರವ್ಯ ನಿಯಂತ್ರಣ ಕಾಯ್ದೆಯಡಿ (NDPS) ನಗರ ಪೊಲೀಸ್ ಠಾಣೆಯಲ್ಲಿ ಗಂಭೀರ ಮೊಕದ್ದಮೆ ಹೂಡಲಾಗಿದ್ದು, ಜಾಲದ ಹಿಂದಿರುವ ಇತರೆ ಕಿಂಗ್‌ಪಿನ್‌ಗಳ ಪತ್ತೆಗೆ ತನಿಖೆ ಚುರುಕುಗೊಳಿಸಲಾಗಿದೆ.

City police arrest marijuana peddler

Share

Leave a comment

Leave a Reply

Your email address will not be published. Required fields are marked *

Don't Miss

ಪೊಲೀಸ್ ಕಾನ್‌ಸ್ಟೇಬಲ್ ಲಿಖಿತ ಪರೀಕ್ಷೆಗೆ 451 ಅಭ್ಯರ್ಥಿಗಳ ಗೈರು

ಚಿಕ್ಕಮಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ಭಾನುವಾರ ರಾಜ್ಯಾದ್ಯಂತ ನಡೆದ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆಯು ಚಿಕ್ಕಮಗಳೂರು ಜಿಲ್ಲೆಯ ೧೬ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಡೆತಡೆ ಇಲ್ಲದೆ...

ವಿಧಾನ ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಇಂದು ಪ್ರಮಾಣ ವಚನ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ನೂತನ ಸದಸ್ಯೆಯಾಗಿ ನೇಮಕಗೊಂಡಿರುವ ಶ್ರೀಮತಿ ಗಾಯತ್ರಿ ಶಾಂತೇಗೌಡ ಅವರು ಸೋಮವಾರ (ಆಗಸ್ಟ್ 3) ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ...

Related Articles

ದೇವಸ್ಥಾನ ಪ್ರವೇಶದ ವಿಚಾರಕ್ಕೆ ಬಾಲಕನ ಮೇಲೆ ಕತ್ತಿಯಿಂದ ಹಲ್ಲೆಗೆ ಯತ್ನ

ಚಿಕ್ಕಮಗಳೂರು: ದೇವಸ್ಥಾನ ಪ್ರವೇಶದ ವಿಚಾರಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿಗೆ ಸೇರಿದ 16 ವರ್ಷದ ಬಾಲಕನಿಗೆ ಅವಾಚ್ಯವಾಗಿ...

ಸ್ಕೂಟರ್ ಮರದ ಬಿಳಲಿಗೆ ಡಿಕ್ಕಿಗೆ ಮಹಿಳೆ ಸ್ಥಳದಲ್ಲೇ ಸಾವು

ಕಡೂರು: ಸ್ಕೂಟರ್ ನಿಯಂತ್ರಣ ತಪ್ಪಿ ಆಲದ ಮರದ ಬಿಳಲಿಗೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಕುಳಿತಿದ್ದ...

ಜಲಜೀವನ್ ಮಿಷನ್ ಕಾಮಗಾರಿ ಸ್ಥಳದಿಂದ ಜನರೇಟರ್, ಪೈಪ್ ಕಳವು

ಚಿಕ್ಕಮಗಳೂರು: ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿಗೆ ಬಳಸುತ್ತಿದ್ದ 10 ಕೆವಿಎ ಡೀಸೆಲ್...

ಬೀರೂರಿನ ಫೈನಾನ್ಸ್ ಕಂಪನಿಗೆ ₹9.91 ಲಕ್ಷ ವಂಚನೆ

ಬೀರೂರು: ಬೇರೊಬ್ಬ ವ್ಯಕ್ತಿಯಂತೆ ನಟಿಸಿ ಫೈನಾನ್ಸ್‌ನಲ್ಲಿ ಗಿರವಿ ಇಟ್ಟಿರುವ ಚಿನ್ನ ಬಿಡಿಸಿಕೊಡುವುದಾಗಿ ನಂಬಿಸಿ ನವರತ್ನ ಗೋಲ್ಡ್...