Home Crime News ಮೊಬೈಲ್ ಕದ್ದು ಬ್ಯಾಂಕ್ ಖಾತೆ ಖಾಲಿ ಮಾಡಿದ ಖದೀಮರು
Crime NewsHomeKadurLatest Newsnamma chikmagalur

ಮೊಬೈಲ್ ಕದ್ದು ಬ್ಯಾಂಕ್ ಖಾತೆ ಖಾಲಿ ಮಾಡಿದ ಖದೀಮರು

Share
Share

ಚಿಕ್ಕಮಗಳೂರು: ಕಡೂರು ಬಸ್ ನಿಲ್ದಾಣದಲ್ಲಿ ಮೆಸ್ಕಾಂ ನೌಕರರೋರ್ವ ಮೊಬೈಲ್ ಕಳ್ಳತನ ಮಾಡಿದ ಖದೀಮರು ಆ ಮೊಬೈಲ್ ಬಳಸಿಕೊಂಡು ಖಾತೆಯಲ್ಲಿದ್ದ ಹಣವನ್ನು ಖಾಲಿ ಮಾಡಿರುವ ಘಟನೆ ನಡೆದಿದೆ.

ಆಲ್ದೂರು ಮೂಲದ ಮೆಸ್ಕಾಂ ನೌಕರ ಪ್ರದೀಪ್ ಎಂಬುವರು ಕಡೂರು ಬಸ್ ನಿಲ್ದಾಣದಲ್ಲಿ ಬಸ್ ಹತ್ತುವಾಗ ಅವರ ಮೊಬೈಲ್ ಕಳ್ಳತನವಾಗಿತ್ತು. ಕೂಡಲೇ ಆಲ್ದೂರಿಗೆ ಆಗಮಿಸಿದ ಅವರು ಪೊಲೀಸರ ಮಾರ್ಗದರ್ಶನದಂತೆ ಲಾಸ್ಟ್ ರಿಪೋರ್ಟ್ ಎಂಬ ಪೋರ್ಟಲ್ ನಲ್ಲಿ ಮೊಬೈಲ್ ನ ಎಲ್ಲಾ ದಾಖಲೆಯ ವರದಿಯನ್ನು ಸಲ್ಲಿಕೆ ಮಾಡಿ ಮೊಬೈಲ್ ಬ್ಲಾಕ್ ಮಾಡಿಸಿದ್ದರು.

ಬಳಿಕ ಕಳೆದುಹೋದ ಸಿಮ್ ಕಾರ್ಡ್ ಬದಲಾಗಿ ಹೊಸ ಸಿಮ್ ಕಾರ್ಡ್ ಖರೀದಿಸಿ ಅಂದೆ ಸಿಮ್ ಆಕ್ಟಿವೇಶನ್ ಮಾಡಿಸಿಕೊಂಡಿದ್ದರು. ಬಳಿಕ ಹೊಸತಾಗಿ ಮತ್ತೊಂದು ಮೊಬೈಲನ್ನು ಆನ್ಲೈನ್ ಮೂಲಕ ಆರ್ಡರ್ ಮಾಡಲು ಹೋದಾಗ ತಮ್ಮ ಖಾತೆಯಲ್ಲಿ ಹಣ ಇಲ್ಲದಿರುವುದು ಅರಿವಿಗೆ ಬಂದಿದೆ.

ಕೂಡಲೇ ಬ್ಯಾಂಕ್ ನಲ್ಲಿ ತಮ್ಮ ಖಾತೆ ಬಗ್ಗೆ ವಿಚಾರ ಮಾಡಿದಾಗ1,03,923 ರೂ. ಇದ್ದ ಬ್ಯಾಲೆನ್ಸ್ ಮೊಬೈಲ್ ಕಳೆದು ಹೋದ ಬಳಿಕ 9,873 ರೂ. ಆಗಿರುವುದು ತಿಳಿದು ಬಂದಿದೆ. ಕೂಡಲೇ ಬ್ಯಾಂಕ್ ನ ಎಲ್ಲಾ ಸೇವೆಗಳನ್ನು ತಾತ್ಕಾಲಿಕವಾಗಿ ಬ್ಲಾಕ್ ಮಾಡಿಸಿ ಆಲ್ದೂರು ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

ತಮ್ಮ ಖಾತೆಯಿಂದ ಅಕ್ರಮವಾಗಿ 94,050 ರೂ. ವರ್ಗಾವಣೆ ಮಾಡಿದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವ ಜೊತೆಗೆ ತಮ್ಮ ಹಣ ವಾಪಸ್ ಕೊಡಿಸುವಂತೆ ದೂರಿನಲ್ಲಿ ತಿಳಿಸಿದ್ದಾರೆ. ಇದೀಗ ಪ್ರಕರಣ ಚಿಕ್ಕಮಗಳೂರು ಸಿಇಎನ್ ಠಾಣೆಗೆ ವರ್ಗಾವಣೆಯಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

The thieves stole the mobile phone and emptied the bank account.

Share

Leave a comment

Leave a Reply

Your email address will not be published. Required fields are marked *

Don't Miss

ಪೊಲೀಸ್ ಕಾನ್‌ಸ್ಟೇಬಲ್ ಲಿಖಿತ ಪರೀಕ್ಷೆಗೆ 451 ಅಭ್ಯರ್ಥಿಗಳ ಗೈರು

ಚಿಕ್ಕಮಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ಭಾನುವಾರ ರಾಜ್ಯಾದ್ಯಂತ ನಡೆದ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆಯು ಚಿಕ್ಕಮಗಳೂರು ಜಿಲ್ಲೆಯ ೧೬ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಡೆತಡೆ ಇಲ್ಲದೆ...

ವಿಧಾನ ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಇಂದು ಪ್ರಮಾಣ ವಚನ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ನೂತನ ಸದಸ್ಯೆಯಾಗಿ ನೇಮಕಗೊಂಡಿರುವ ಶ್ರೀಮತಿ ಗಾಯತ್ರಿ ಶಾಂತೇಗೌಡ ಅವರು ಸೋಮವಾರ (ಆಗಸ್ಟ್ 3) ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ...

Related Articles

ದೇವಸ್ಥಾನ ಪ್ರವೇಶದ ವಿಚಾರಕ್ಕೆ ಬಾಲಕನ ಮೇಲೆ ಕತ್ತಿಯಿಂದ ಹಲ್ಲೆಗೆ ಯತ್ನ

ಚಿಕ್ಕಮಗಳೂರು: ದೇವಸ್ಥಾನ ಪ್ರವೇಶದ ವಿಚಾರಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿಗೆ ಸೇರಿದ 16 ವರ್ಷದ ಬಾಲಕನಿಗೆ ಅವಾಚ್ಯವಾಗಿ...

ಸ್ಕೂಟರ್ ಮರದ ಬಿಳಲಿಗೆ ಡಿಕ್ಕಿಗೆ ಮಹಿಳೆ ಸ್ಥಳದಲ್ಲೇ ಸಾವು

ಕಡೂರು: ಸ್ಕೂಟರ್ ನಿಯಂತ್ರಣ ತಪ್ಪಿ ಆಲದ ಮರದ ಬಿಳಲಿಗೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಕುಳಿತಿದ್ದ...

ಜಲಜೀವನ್ ಮಿಷನ್ ಕಾಮಗಾರಿ ಸ್ಥಳದಿಂದ ಜನರೇಟರ್, ಪೈಪ್ ಕಳವು

ಚಿಕ್ಕಮಗಳೂರು: ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿಗೆ ಬಳಸುತ್ತಿದ್ದ 10 ಕೆವಿಎ ಡೀಸೆಲ್...

ಬೀರೂರಿನ ಫೈನಾನ್ಸ್ ಕಂಪನಿಗೆ ₹9.91 ಲಕ್ಷ ವಂಚನೆ

ಬೀರೂರು: ಬೇರೊಬ್ಬ ವ್ಯಕ್ತಿಯಂತೆ ನಟಿಸಿ ಫೈನಾನ್ಸ್‌ನಲ್ಲಿ ಗಿರವಿ ಇಟ್ಟಿರುವ ಚಿನ್ನ ಬಿಡಿಸಿಕೊಡುವುದಾಗಿ ನಂಬಿಸಿ ನವರತ್ನ ಗೋಲ್ಡ್...