Home Crime News ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕ ಆತ್ಮಹತ್ಯೆಗೆ ಶರಣು
Crime NewsHomeKadurLatest Newsnamma chikmagalur

ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕ ಆತ್ಮಹತ್ಯೆಗೆ ಶರಣು

Share
Share

ಕಡೂರು: ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಡೂರು ತಾಲೂಕಿನ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಲ್ಲೂರು ಗ್ರಾಮದ 20 ವರ್ಷದ ಚಂದನ್ ಮೃತಪಟ್ಟ ದುರ್ದೈವಿ.

ಇತ್ತೀಚೆಗೆ ಇದೇ ಗ್ರಾಮದ ಹುಡುಗಿಯೊಬ್ಬಳು ತನ್ನ ಪ್ರಿಯಕರನ ಜೊತೆ ಮನೆ ಬಿಟ್ಟು ಹೋಗಿದ್ದು, ಆಕೆಯ ಮೊಬೈಲ್ ಕರೆಗಳ ವಿವರವನ್ನು ಪರಿಶೀಲಿಸಿದಾಗ ಚಂದನ್ ನಂಬ‌ರ್ ಪತ್ತೆಯಾಗಿತ್ತು. ಆಕೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಹಾಗೂ ಮಾತುಕತೆ ನಡೆಸಿದ್ದ ಕಾರಣಕ್ಕಾಗಿ ಬೀರೂರು ಪೊಲೀಸರು ಚಂದನ್‌ನನ್ನು ಸಾಮಾನ್ಯ ವಿಚಾರಣೆಗೆಂದು ಠಾಣೆಗೆ ಕರೆಸಿದ್ದರು.

ವಿಚಾರಣೆ ಮುಗಿದ ಬಳಿಕ ಪೊಲೀಸರು ನಿನ್ನೆ ಸಂಜೆ ಆತನನ್ನು ಮನೆಗೆ ಕಳುಹಿಸಿಕೊಟ್ಟಿದ್ದರು. ಆದರೆ, ಮನೆಗೆ ಮರಳಿದ ಚಂದನ್ ಸಂಜೆ ವೇಳೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹುಡುಗಿ ಓಡಿ ಹೋಗಲು ಈತನೇ ಕಾರಣ ಎಂದು ಸ್ಥಳೀಯರು ಹಾಗೂ ಸಾರ್ವಜನಿಕರು ಮಾತನಾಡಿಕೊಂಡಿದ್ದರಿಂದ ತೀವ್ರ ಮನನೊಂದು ಆತ ಈ ನಿರ್ಧಾರ ಕೈಗೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಚಂದನ್ ತನ್ನ ತಾಯಿಗೆ ಮೊಬೈಲ್‌ನಲ್ಲಿ ಸಂದೇಶವೊಂದನ್ನು ರವಾನಿಸಿದ್ದಾನೆ ಎನ್ನಲಾಗಿದೆ.

ಪ್ರಸ್ತುತ ಚಂದನ್ ಆತ್ಮಹತ್ಯೆಗೆ ಕೇವಲ ಪೊಲೀಸರ ವಿಚಾರಣೆ ಮಾತ್ರ ಕಾರಣವೇ ಅಥವಾ ಜನರ ಆಪಾದನೆ ಹಾಗೂ ಬೇರೇನಾದರೂ ಹಿನ್ನೆಲೆ ಇದೆಯೇ ಎಂಬುದು ಇನ್ನು ಸ್ಪಷ್ಟವಾಗಿ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರ ಸಂಪೂರ್ಣ ತನಿಖೆಯಿಂದಷ್ಟೇ ಚಂದನ್ ಸಾವಿಗೆ ನಿಖರವಾದ ಕಾರಣ ಏನೆಂಬುದು ಹೊರಬರಬೇಕಿದೆ.

A young man who was being questioned by the police committed suicide.

Share

Leave a comment

Leave a Reply

Your email address will not be published. Required fields are marked *

Don't Miss

ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ತರಾತುರಿಯಲ್ಲಿ ಮನೆಗೆ ಬೀಗ ಹಾಕದೆ ಹೊರಟ ದಂಪತಿಯ ನಿರ್ಲಕ್ಷ್ಯವನ್ನು ಬಂಡವಾಳ ಮಾಡಿಕೊಂಡ ಕಳ್ಳರು, ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿರುವ ಘಟನೆ ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಂತವೇರಿಯಲ್ಲಿ...

ಲೋನ್ ಬಾಕಿ ವಸೂಲಾತಿಗಾಗಿ ಹೋಗಿದ್ದ ಯುವಕ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಕಾರು ಲೋನ್ ಬಾಕಿ ವಸೂಲಾತಿಗಾಗಿ ಹೋಗಿದ್ದ ಬೆಂಗಳೂರಿನ ಕಾರ್ ಚಾಲಕ ಯಶ್ವಂತ್ ಎಂಬ ಯುವಕನು ಗೂಡ್ಸ್ ವಾಹನ ಡಿಕ್ಕಿಯಾಗಿ ಮೃತಪಟ್ಟಿರುವ ದುರದೃಷ್ಟಕರ ಘಟನೆ ಸಕ್ಕರಾಯಪಟ್ಟಣ ಠಾಣಾ ವ್ಯಾಪ್ತಿಯ ಹಿರೇಗೌಜ ಗೇಟ್ ಬಳಿ...

Related Articles

ಪೊಲೀಸರು ಕಿರುಕುಳ ಖಂಡಿಸಿ ಬೀರೂರು ಪೊಲೀಸ್ ಠಾಣೆ ಎದುರು ಪ್ರತಿಭಟನೆ

ಬೀರೂರು:  ಪ್ರೇಮಿಗಳು ನಾಪತ್ತೆಯಾಗಲು ಸಹಕಾರ ನೀಡಿದ್ದ ಎಂಬ ಆರೋಪದ ಮೇಲೆ ಯುವಕನನ್ನು ಠಾಣೆಗೆ ಕರೆಸಿ ಪೊಲೀಸರು...

ಮಹಮದ್ ಅನ್ವರ್ ಕೊಲೆ ಪ್ರಕರಣ ಸಿಬಿಐ ತನಿಖೆಗೆ ಆಗ್ರಹ

ಚಿಕ್ಕಮಗಳೂರು : ಕಳೆದ ಎಂಟು ವರ್ಷಗಳ ಹಿಂದೆ ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸಿದ್ದ ಕೇಬಲ್ ನೆಟ್‌ವರ್ಕ್ ಉದ್ಯಮಿ...

ನೋಟರಿ ವಿ.ಕೆ.ರಘುಯಿಂದ ನೀರಿನ ಮೇಲೆ ತೇಲುತ್ತಾ ಯೋಗ ಭಂಗಿ ಪ್ರದರ್ಶನ

ಚಿಕ್ಕಮಗಳೂರು: ಯೋಗ ಸಾಧಕ ನಗರದ ವಕೀಲ ಹಾಗೂ ನೋಟರಿ ವಿ.ಕೆ.ರಘು ಅವರು  ಅಂತರಾಷ್ಟ್ರೀಯ ಯೋಗ ದಿನಾಚರಣೆ...

ಮಳೆ ಅಭಾವ-ರೈತರ ಕಣ್ಣಲ್ಲಿ ದುಃಖ-ಜನ ಜಾನುವಾರು ಕಂಗಾಲು

ಚಿಕ್ಕಮಗಳೂರು:  ಬಾರೋ,ಬಾರೋ ಮಳೆರಾಯ .ಜನ,ದನ,ಕರುಗಳಿಗೆ ನೀರಿಲ್ಲ,ತೋಟ,ಗದ್ದೆಗಳಿಗೆ ನೀರಿಲ್ಲ ಎಂದು ರೈತರು ಮತ್ತು ಜನಸಾಮಾನ್ಯರು ಒಮ್ಮೆ ಅಕಾಶದ...