Home Crime News ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕ ಆತ್ಮಹತ್ಯೆಗೆ ಶರಣು
Crime NewsHomeKadurLatest Newsnamma chikmagalur

ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕ ಆತ್ಮಹತ್ಯೆಗೆ ಶರಣು

Share
Share

ಕಡೂರು: ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಡೂರು ತಾಲೂಕಿನ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಲ್ಲೂರು ಗ್ರಾಮದ 20 ವರ್ಷದ ಚಂದನ್ ಮೃತಪಟ್ಟ ದುರ್ದೈವಿ.

ಇತ್ತೀಚೆಗೆ ಇದೇ ಗ್ರಾಮದ ಹುಡುಗಿಯೊಬ್ಬಳು ತನ್ನ ಪ್ರಿಯಕರನ ಜೊತೆ ಮನೆ ಬಿಟ್ಟು ಹೋಗಿದ್ದು, ಆಕೆಯ ಮೊಬೈಲ್ ಕರೆಗಳ ವಿವರವನ್ನು ಪರಿಶೀಲಿಸಿದಾಗ ಚಂದನ್ ನಂಬ‌ರ್ ಪತ್ತೆಯಾಗಿತ್ತು. ಆಕೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಹಾಗೂ ಮಾತುಕತೆ ನಡೆಸಿದ್ದ ಕಾರಣಕ್ಕಾಗಿ ಬೀರೂರು ಪೊಲೀಸರು ಚಂದನ್‌ನನ್ನು ಸಾಮಾನ್ಯ ವಿಚಾರಣೆಗೆಂದು ಠಾಣೆಗೆ ಕರೆಸಿದ್ದರು.

ವಿಚಾರಣೆ ಮುಗಿದ ಬಳಿಕ ಪೊಲೀಸರು ನಿನ್ನೆ ಸಂಜೆ ಆತನನ್ನು ಮನೆಗೆ ಕಳುಹಿಸಿಕೊಟ್ಟಿದ್ದರು. ಆದರೆ, ಮನೆಗೆ ಮರಳಿದ ಚಂದನ್ ಸಂಜೆ ವೇಳೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹುಡುಗಿ ಓಡಿ ಹೋಗಲು ಈತನೇ ಕಾರಣ ಎಂದು ಸ್ಥಳೀಯರು ಹಾಗೂ ಸಾರ್ವಜನಿಕರು ಮಾತನಾಡಿಕೊಂಡಿದ್ದರಿಂದ ತೀವ್ರ ಮನನೊಂದು ಆತ ಈ ನಿರ್ಧಾರ ಕೈಗೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಚಂದನ್ ತನ್ನ ತಾಯಿಗೆ ಮೊಬೈಲ್‌ನಲ್ಲಿ ಸಂದೇಶವೊಂದನ್ನು ರವಾನಿಸಿದ್ದಾನೆ ಎನ್ನಲಾಗಿದೆ.

ಪ್ರಸ್ತುತ ಚಂದನ್ ಆತ್ಮಹತ್ಯೆಗೆ ಕೇವಲ ಪೊಲೀಸರ ವಿಚಾರಣೆ ಮಾತ್ರ ಕಾರಣವೇ ಅಥವಾ ಜನರ ಆಪಾದನೆ ಹಾಗೂ ಬೇರೇನಾದರೂ ಹಿನ್ನೆಲೆ ಇದೆಯೇ ಎಂಬುದು ಇನ್ನು ಸ್ಪಷ್ಟವಾಗಿ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರ ಸಂಪೂರ್ಣ ತನಿಖೆಯಿಂದಷ್ಟೇ ಚಂದನ್ ಸಾವಿಗೆ ನಿಖರವಾದ ಕಾರಣ ಏನೆಂಬುದು ಹೊರಬರಬೇಕಿದೆ.

A young man who was being questioned by the police committed suicide.

Share

Leave a comment

Leave a Reply

Your email address will not be published. Required fields are marked *

Don't Miss

ಪೊಲೀಸ್ ಕಾನ್‌ಸ್ಟೇಬಲ್ ಲಿಖಿತ ಪರೀಕ್ಷೆಗೆ 451 ಅಭ್ಯರ್ಥಿಗಳ ಗೈರು

ಚಿಕ್ಕಮಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ಭಾನುವಾರ ರಾಜ್ಯಾದ್ಯಂತ ನಡೆದ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆಯು ಚಿಕ್ಕಮಗಳೂರು ಜಿಲ್ಲೆಯ ೧೬ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಡೆತಡೆ ಇಲ್ಲದೆ...

ವಿಧಾನ ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಇಂದು ಪ್ರಮಾಣ ವಚನ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ನೂತನ ಸದಸ್ಯೆಯಾಗಿ ನೇಮಕಗೊಂಡಿರುವ ಶ್ರೀಮತಿ ಗಾಯತ್ರಿ ಶಾಂತೇಗೌಡ ಅವರು ಸೋಮವಾರ (ಆಗಸ್ಟ್ 3) ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ...

Related Articles

ದೇವಸ್ಥಾನ ಪ್ರವೇಶದ ವಿಚಾರಕ್ಕೆ ಬಾಲಕನ ಮೇಲೆ ಕತ್ತಿಯಿಂದ ಹಲ್ಲೆಗೆ ಯತ್ನ

ಚಿಕ್ಕಮಗಳೂರು: ದೇವಸ್ಥಾನ ಪ್ರವೇಶದ ವಿಚಾರಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿಗೆ ಸೇರಿದ 16 ವರ್ಷದ ಬಾಲಕನಿಗೆ ಅವಾಚ್ಯವಾಗಿ...

ಸ್ಕೂಟರ್ ಮರದ ಬಿಳಲಿಗೆ ಡಿಕ್ಕಿಗೆ ಮಹಿಳೆ ಸ್ಥಳದಲ್ಲೇ ಸಾವು

ಕಡೂರು: ಸ್ಕೂಟರ್ ನಿಯಂತ್ರಣ ತಪ್ಪಿ ಆಲದ ಮರದ ಬಿಳಲಿಗೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಕುಳಿತಿದ್ದ...

ಜಲಜೀವನ್ ಮಿಷನ್ ಕಾಮಗಾರಿ ಸ್ಥಳದಿಂದ ಜನರೇಟರ್, ಪೈಪ್ ಕಳವು

ಚಿಕ್ಕಮಗಳೂರು: ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿಗೆ ಬಳಸುತ್ತಿದ್ದ 10 ಕೆವಿಎ ಡೀಸೆಲ್...

ಬೀರೂರಿನ ಫೈನಾನ್ಸ್ ಕಂಪನಿಗೆ ₹9.91 ಲಕ್ಷ ವಂಚನೆ

ಬೀರೂರು: ಬೇರೊಬ್ಬ ವ್ಯಕ್ತಿಯಂತೆ ನಟಿಸಿ ಫೈನಾನ್ಸ್‌ನಲ್ಲಿ ಗಿರವಿ ಇಟ್ಟಿರುವ ಚಿನ್ನ ಬಿಡಿಸಿಕೊಡುವುದಾಗಿ ನಂಬಿಸಿ ನವರತ್ನ ಗೋಲ್ಡ್...