Home namma chikmagalur chikamagalur ಮಹಮದ್ ಅನ್ವರ್ ಕೊಲೆ ಪ್ರಕರಣ ಸಿಬಿಐ ತನಿಖೆಗೆ ಆಗ್ರಹ
chikamagalurHomeLatest Newsnamma chikmagalur

ಮಹಮದ್ ಅನ್ವರ್ ಕೊಲೆ ಪ್ರಕರಣ ಸಿಬಿಐ ತನಿಖೆಗೆ ಆಗ್ರಹ

Share
Share

ಚಿಕ್ಕಮಗಳೂರು : ಕಳೆದ ಎಂಟು ವರ್ಷಗಳ ಹಿಂದೆ ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸಿದ್ದ ಕೇಬಲ್ ನೆಟ್‌ವರ್ಕ್ ಉದ್ಯಮಿ ಉಪ್ಪಳ್ಳಿಯ ಮಹಮದ್ ಅನ್ವರ್ ಕೊಲೆ ಪ್ರಕರಣವನ್ನು ಸಿಬಿಐ ತನಿಖೆ ನಡೆಸುವ ಮೂಲಕ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಂತೆ ಮೃತನ ಸಹೋದರ ಅಬ್ದುಲ್ ಕಬೀರ್ ಆಗ್ರಹಿಸಿದರು.

ಅವರು ಸೋಮವಾರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ೨೦೧೮ರ ಜೂ.೨೨ ರಂದು ನಗರದ ಗೌರಿ ಕಾಲುವೆ ಬಡಾವಣೆ ಗುಡ್‌ಮಾರ್ನಿಂಗ್ ಶಾಪ್ ಬಳಿ ದುಷ್ಕರ್ಮಿಗಳು ಡ್ರ್ಯಾಗನ್ ಮತ್ತು ಚಾಕುವಿನಿಂದ ಇರಿದು ಭರ್ಬರವಾಗಿ ಕೊಲೆ ಮಾಡಿದ್ದರೆಂದು ಹೇಳಿದರು.

ಕೊಲೆ ನಡೆದು ೮ ವರ್ಷಗಳು ತುಂಬಿದ್ದರೂ ಪೊಲೀಸ್ ಇಲಾಖೆ, ಸಿಐಡಿ ಇಲಾಖೆ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸದೆ ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸುವಲ್ಲಿ ವಿಫಲರಾಗಿರುವುದರಿಂದ ಕುಟುಂಬವು ಕಂಗಾಲಾಗಿ ಚಿಂತಾಜನಕ ಸ್ಥಿತಿಯಲ್ಲಿದೆ ಎಂದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್ ಸಲ್ಲಿಕೆಯಾಗಿಲ್ಲ. ಮೃತನ ಕುಟುಂಬಕ್ಕೆ ನ್ಯಾಯ ಒದಗಿಸಲು ಹೋರಾಟ ಮಾಡುತ್ತಿದ್ದೇವೆ. ಕೊಲೆಗಾರರನ್ನು ಜೈಲಿಗೆ ತಳ್ಳುವವರೆಗೂ ವಿಶ್ರಮಿಸದೆ ಹೋರಾಟ ಮುಂದುವರೆಸುತ್ತೇನೆ. ಈಗಾಗಲೇ ಶಂಕಿತ ೭ ಆರೋಪಿಗಳ ಪೈಕಿ ಮೂವರು ಮಂಪರು ಪರೀಕ್ಷೆಗೆ ಒಪ್ಪಿಗೆ ನೀಡಿದ್ದು, ನ್ಯಾಯಾಲಯ ಅಧಿಕೃತವಾಗಿ ಆದೇಶ ನೀಡುತ್ತಿಲ್ಲ ಎಂದು ವಿವರಿಸಿದರು.

ಮೃತನ ಕುಟುಂಬಕ್ಕೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ತನಿಖಾ ಸಂಸ್ಥೆ ಅಗತ್ಯ ಕ್ರಮ ಕೈಗೊಳ್ಳಬೇಕು. ಕೊಲೆ ಪ್ರಕರಣ ನಡೆದು ಇದುವರೆಗೂ ತನಿಖೆ ಪೂರ್ಣಗೊಳ್ಳದಿರುವ ಬಗ್ಗೆ ಕಾರಣವೇನೆಂದು ಪ್ರಶ್ನಿಸಿದ ಅವರು ೫ ವರ್ಷಗಳಿಂದ ಸಿಐಡಿ ತನಿಖೆ ನಡೆಸಿದರೂ ಫಲಿತಾಂಶ ಪ್ರಕಟಿಸುವಲ್ಲಿ ವಿಳಂಭವೇಕೆ ಎಂದರಲ್ಲದೆ, ಕೂಡಲೆ ಸಿಬಿಐ ತನಿಖೆ ನಡೆಸಿ ಸಮಗ್ರ ತನಿಖೆ ನಡೆಸುವ ಮೂಲಕ ನ್ಯಾಯ ಒದಗಿಸುವಂತೆ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಬೆನಡಿಕ್ಟ್ ಜೇಮ್ಸ್, ಅಬ್ದುಲ್ ಮಜೀದ್, ನಜೀರ್ ಉಪಸ್ಥಿತರಿದ್ದರು.

Demand for CBI investigation into Mohammad Anwar murder case

Share

Leave a comment

Leave a Reply

Your email address will not be published. Required fields are marked *

Don't Miss

ಅಪಘಾತದಲ್ಲಿ ಸಾವು: ಚಾಲಕನಿಗೆ 9 ತಿಂಗಳು ಸಜೆ

ಚಿಕ್ಕಮಗಳೂರು: ಅತೀ ವೇಗ ಮತ್ತು ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು ಇನ್ನಿಬ್ಬರು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಚಾಲಕನಿಗೆ ನಗರದ ಒಂದನೇ ಅಧಿಕ ಹಿರಿಯ ಸಿ.ಜೆ....

ದ್ವಿಚಕ್ರ ವಾಹನ ಡಿಕ್ಕಿ-ಪಾದಚಾರಿ ಯುವಕ ಸಾವು

ಚಿಕ್ಕಮಗಳೂರು: ತಾಲೂಕಿನ ಕುರುಬರಹಳ್ಳಿ ಗ್ರಾಮದ ಸಮೀಪ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಯುವಕ ಮೃತಪಟ್ಟಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮಾಚೇನಹಳ್ಳಿ ಗ್ರಾಮದ...

Related Articles

100 ಅಡಿ ಪ್ರಪಾತಕ್ಕೆ ಉರುಳಿದ 10 ಚಕ್ರದ ಲಾರಿ

ಚಿಕ್ಕಮಗಳೂರು: ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ೧೦ ಚಕ್ರದ ಲಾರಿಯೊಂದು ರಸ್ತೆ ಪಕ್ಕದ...

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ...

ಕನಿಷ್ಟ ವೇತನ ಜಾರಿಗೆ ಆಗ್ರಹಿಸಿ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ

ಚಿಕ್ಕಮಗಳೂರು:  ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌ ಕರರಿಗೆ ಕಾರ್ಮಿಕ ಆಯುಕ್ತರ ಆದೇಶದಂತೆ ಕನಿಷ್ಟ ವೇತನ...