Home namma chikmagalur chikamagalur ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಂಸದರ ಅಸಮಾಧಾನ
chikamagalurHomeLatest Newsnamma chikmagalur

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಂಸದರ ಅಸಮಾಧಾನ

Share
Share

ಚಿಕ್ಕಮಗಳೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ವಿವಿಧ ಏಜೆನ್ಸಿಗಳ ಆಮೆಗತಿಯ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಬಿಗಿ ನಿರ್ದೇಶನಗಳನ್ನು ನೀಡಿದ್ದಾರೆ.

ಕಳೆದ ಮಳೆಗಾಲದಲ್ಲಿ ಮೂಡಿಗೆರೆ ಸೇರಿದಂತೆ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಮಾಪನ ಯಂತ್ರಗಳ ದೋಷದಿಂದಾಗಿ ರೈತರು ಬೆಳೆವಿಮೆಯಿಂದ ವಂಚಿತರಾಗಿರುವ ಕುರಿತು ಆತಂಕ ವ್ಯಕ್ತಪಡಿಸಿದ ಅವರು, ಜಿಲ್ಲೆಯ 242 ಮಳೆಮಾಪನ ಯಂತ್ರಗಳ ಪೈಕಿ ಕೇವಲ 107 ಮಾತ್ರ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವುದಕ್ಕೆ ತರಾಟೆಗೆ ತೆಗೆದುಕೊಂಡರು.

ನೆಟ್‌ವರ್ಕ್ ಸಮಸ್ಯೆ ಇರುವ ಕಡೆಗಳಲ್ಲಿ ಬಿಎಸ್‌ಎನ್‌ಎಲ್ ಮೂಲಕ ತಕ್ಷಣವೇ ದೋಷ ನಿವಾರಿಸುವಂತೆ ಸೂಚಿಸಿದ ಸಂಸದರು, ಇನ್ನು 15 ದಿನಗಳ ಒಳಗಾಗಿ ಜಿಲ್ಲೆಯ ಎಲ್ಲಾ ನಿಷ್ಟ್ರಯೋಜಕ ಯಂತ್ರಗಳನ್ನು ಕಡ್ಡಾಯವಾಗಿ ದುರಸ್ತಿಗೊಳಿಸಬೇಕು ಎಂದು ಕಟ್ಟುನಿಟ್ಟಿನ ಗಡುವು ವಿಧಿಸಿದ್ದಾರೆ. ಇದೇ ವೇಳೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಕುಸುಮ್’ ಸೋಲಾರ್ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ವಿಳಂಬ ಧೋರಣೆಯನ್ನು ಗಂಭೀರವಾಗಿ ಪರಿಗಣಿಸಿದರು.

ಕುಸುಮ್ ‘ಎ’ ಸೂರ್ಯಘರ್ ಯೋಜನೆಯಡಿ ₹78,000 ಸಬ್ಸಿಡಿ ಲಭ್ಯವಿದ್ದರೂ ಕೇವಲ 171 ಫಲಾನುಭವಿಗಳಿಗೆ ಮಾತ್ರ ಹಣ ತಲುಪಿರುವುದರಿಂದ, ಈ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಾಗೆಯೇ, ರೈತರು ತಮ್ಮ ಪಾಲಿನ ಹಣ ಪಾವತಿಸಿದ್ದರೂ ಶೇ. 80ರಷ್ಟು ಸಬ್ಸಿಡಿಯ ಕುಸುಮ್ ‘ಬಿ’ ಯೋಜನೆಯಡಿ ಸೋಲಾರ್ ಪಂಪ್‌ಸೆಟ್ ಅಳವಡಿಸಲು ವಿಳಂಬ ಮಾಡುತ್ತಿರುವ ಏಜೆನ್ಸಿಗಳನ್ನು ಮೆಸ್ಕಾಂ ಅಧಿಕಾರಿಗಳ ಸಮ್ಮುಖದಲ್ಲೇ ತರಾಟೆಗೆ ತೆಗೆದುಕೊಂಡು, ಬಾಕಿ ಕಾಮಗಾರಿ ಮುಗಿಸಲು 15 ದಿನಗಳ ಕಾಲಾವಕಾಶ ನೀಡಿದರು.

ಇನ್ನು ಜಿಲ್ಲೆಯಲ್ಲಿ ಸೋಲಾರ್ ಪಾರ್ಕ್ ನಿರ್ಮಾಣದ ಕುರಿತಾದ ಕುಸುಮ್ ‘ಸಿ’ ಯೋಜನೆಗೆ ಸೂಕ್ತ ಜಾಗದ ಕೊರತೆಯಿದ್ದು, ಈ ಎಲ್ಲಾ ತಾಂತ್ರಿಕ ಸಮಸ್ಯೆಗಳ ನಿವಾರಣೆಗಾಗಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮತ್ತೊಂದು ಪ್ರತ್ಯೇಕ ವಿಶೇಷ ಸಭೆ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು. ಇದರೊಂದಿಗೆ ಕಾಫಿನಾಡಿನ ಪ್ರಮುಖ ಅಡುಗೆ ಅನಿಲ ಪೈಪ್‌ಲೈನ್ ಯೋಜನೆಗಳ ಕುರಿತೂ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು.

MPs unhappy with officials’ negligence

Share

Leave a comment

Leave a Reply

Your email address will not be published. Required fields are marked *

Don't Miss

ಅನಧಿಕೃತ ಜೀಪ್‌ಗಳ ಹಾವಳಿ ತಪ್ಪಿಸಲು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ

ಚಿಕ್ಕಮಗಳೂರು:  ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಅನಧಿಕೃತ ಮತ್ತು ಅಕ್ರಮ ಜೀಪ್ ಗಳ ಹಾವಳಿ ತಡೆಗಟ್ಟಿ ಪ್ರವಾಸಿಗರ ಸುರಕ್ಷತೆ ಕಾಪಾಡಬೇಕು ಎಂದು ಆಗ್ರಹಿಸಿ ಜಿಲ್ಲೆಯ ಸ್ಥಳೀಯ ನಾಗರೀ ಕರು ಸೋಮವಾರ ಅಪರ ಜಿಲ್ಲಾಧಿಕಾರಿ...

ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಮಾಫಿಯಾ ದಂದೆಗಳು ?

ಚಿಕ್ಕಮಗಳೂರು: ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಅಗ್ರಸ್ಥಾನವಿದೆ.ನಿಜವಾದ ಪ್ರವಾಸಿಗರು ಜಿಲ್ಲೆಯ ಪ್ರಕೃತಿ ಸೌಂದರ್ಯದ ಜೊತೆಗೆ ಧಾರ್ಮಿಕ ಸ್ಥಳಗಳು, ಝರಿಗಳ ಜೊತೆಗೆ ಬೋರ್ಗರಿಯುವ ನದಿಗಳು, ಉಪ ನದಿಗಳು,ಅರಣ್ಯದ ಜೊತೆಗೆ ಕಾಡು ಪ್ರಾಣಿಗಳು...

Related Articles

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ...

ಅಂಚೆ ನಾಗಭೂಷಣ್ ಗೆ’ಪತ್ರಿಕಾ ರತ್ನ’ ಪ್ರಶಸ್ತಿ ಪ್ರಧಾನ

ತರೀಕೆರೆ : ಪಟ್ಟಣದ ಹಿರಿಯ ಪತ್ರಕರ್ತರು, ಜಿಲ್ಲಾ ಕನ್ನಡ ವಾರಪತ್ರಿಕೆ ಅಂಚೆವಾರ್ತೆ ಸಂಪಾದಕರು ಆದ ಅಂಚೆ...

ಇಂದು ಆರ್‌ಟಿಒ ರಾಕೇಶ್ ಕುಮಾರ್ ವಿರುದ್ಧ ವಿಚಾರಣೆ

ಚಿಕ್ಕಮಗಳೂರು: ಇಲ್ಲಿನ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಭ್ರಷ್ಟಾಚಾರ ಹಾಗೂ ಹಣಕಾಸು ಅಕ್ರಮಗಳ ಆರೋಪ ಕೇಳಿಬಂದಿರುವ ಬೆನ್ನಲ್ಲೇ...

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು...