Home namma chikmagalur chikamagalur ಅಂದರ್-ಬಾಹರ್ ಅಡ್ಡೆ ಮೇಲೆ ಪೊಲೀಸರ ದಾಳಿ – ಐವರ ಬಂಧನ
chikamagalurCrime NewsHomeLatest Newsnamma chikmagalur

ಅಂದರ್-ಬಾಹರ್ ಅಡ್ಡೆ ಮೇಲೆ ಪೊಲೀಸರ ದಾಳಿ – ಐವರ ಬಂಧನ

Share
Share

ಚಿಕ್ಕಮಗಳೂರು: ಹೊರವಲಯದ ಹುಕ್ಕುಂದ ಗ್ರಾಮದ ಖಾಲಿ ಜಾಗದಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಲಕ್ಷಾಂತರ ರೂಪಾಯಿ ಹಣವನ್ನು ಪಣವಾಗಿಟ್ಟುಕೊಂಡು ಅಂದರ್-ಬಾಹರ್ ಇಸ್ಪೀಟು ಜೂಜಾಟವಾಡುತ್ತಿದ್ದ ಹೈಟೆಕ್ ಅಡ್ಡೆಯ ಮೇಲೆ ಗ್ರಾಮಾಂತರ ಠಾಣೆಯ ಪಿಎಸ್‌ಐ ನೇತ್ರಾವತಿ ವಿ ಮತ್ತು ತಂಡ ಮಿಂಚಿನ ದಾಳಿ ನಡೆಸಿದೆ.

ಖಚಿತ ಮಾಹಿತಿ ಮೇರೆಗೆ ಅಲರ್ಟ್ ಆದ ಪೊಲೀಸರು ಜೂಜಿನ ಅಡ್ಡೆಗೆ ಅನಿರೀಕ್ಷಿತ ಮುತ್ತಿಗೆ ಹಾಕಿದ್ದಾರೆ. ಪೊಲೀಸರ ಎಂಟ್ರಿಯಿಂದ ಕಂಗಾಲಾದ ಜೂಜುಕೋರರು ಓಡಲು ಯತ್ನಿಸಿದರಾದರೂ, ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸುತ್ತುವರಿದು ಅಬ್ದುಲ್ ಖಾದರ್, ಸಾದತ್, ನಾಸಿರ್, ವೆಂಕಟೇಶ್ ಮತ್ತು ಅನ್ಸ‌ರ್ ಎಂಬ ಐದು ಜನ ಆರೋಪಿಗಳನ್ನು ಸ್ಥಳದಲ್ಲೇ ವಶಕ್ಕೆ ಪಡೆದು ಹೆಡೆಮುರಿ ಕಟ್ಟಿದ್ದಾರೆ.

ದಾಳಿಯ ವೇಳೆ ಜೂಜಿನ ಅಡ್ಡೆಯಿಂದ ಭಾರಿ ಪ್ರಮಾಣದ ನಗದು ಜಪ್ತಿ ಮಾಡಲಾಗಿದ್ದು, 500, 200, 100 ರೂಪಾಯಿ ಮುಖಬೆಲೆಯ ನೋಟುಗಳು ಸೇರಿದಂತೆ ಒಟ್ಟು 1,43,310 ರೂಪಾಯಿ ಹಣ ಹಾಗೂ ಜೂಜಿಗೆ ಬಳಸುತ್ತಿದ್ದ 52 ಇಸ್ಪೀಟು ಎಲೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಸದ್ಯ ಬಂಧಿತ ಐದೂ ಜನ ಆರೋಪಿಗಳ ವಿರುದ್ಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Police raid on Andar-Bahar Avenue – Five arrested

Share

Leave a comment

Leave a Reply

Your email address will not be published. Required fields are marked *

Don't Miss

ರಸ್ತೆಯಲ್ಲಿ ದುಡುಕಿನಿಂದ ಚಾಲನೆ – ಪ್ರಕರಣ ದಾಖಲು

ಮೂಡಿಗೆರೆ: ಇನ್‌ಸ್ಟಾಗ್ರಾಮ್‌ನಲ್ಲಿ ಲೈಕ್ಸ್ ಮತ್ತು ಕಾಮೆಂಟ್ಸ್ಗಾಗಿ ಸಾರ್ವಜನಿಕ ರಸ್ತೆಯಲ್ಲಿ ಅಪಾಯಕಾರಿಯಾಗಿ ರೀಲ್ಸ್ ಮಾಡಿದ್ದ ಮೂಡಿಗೆರೆ ಮೂಲದ ವ್ಯಕ್ತಿಯೊಬ್ಬರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮದ ರಾಜು ಪಿ.ಕೆ...

ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯ ವರ್ತನೆ: ಯುವಕ ಬಂಧನ

ಶೃಂಗೇರಿ:  ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಡಿ ಯುವಕನೊಬ್ಬನನ್ನು ಶೃಂಗೇರಿ ಪೊಲೀಸರು ಬಂಧಿಸಿದ್ದಾರೆ. ಪಟ್ಟಣದಲ್ಲಿ ಕುಷನ್ ಅಂಗಡಿ ನಡೆಸುತ್ತಿದ್ದ ಶಬೀರ್ ಎಂಬಾತ ತನ್ನ ಅಂಗಡಿ ಬಳಿ ಬಂದಿದ್ದ ಅಪ್ರಾಪ್ತ ಬಾಲಕಿಯ ಖಾಸಗಿ...

Related Articles

ಆರ್.ಎಸ್.ಎಸ್. ಲೆಕ್ಕ ಕೇಳಲು ನೀವ್ಯಾರು ?

ಮೂಡಿಗೆರೆ: ರಾಷ್ಟ್ರೀಯ ಸ್ವಯಂಸೇವಕ ಸಂಘದ ನೋಂದಣಿ ಹಾಗೂ ಲೆಕ್ಕ ಕೇಳಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರ...

ಕಳ್ಳತನ ಆರೋಪಿ ಬಂಧನ-₹12.50 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಅಲ್ಲೂರು: ಬಸರವಳ್ಳಿ ಗ್ರಾಮದ ಮಂಜುನಾಥ್ ಅವರ ಮನೆಯಲ್ಲಿ ಕಳ್ಳತನ ನಡೆಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್...

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು...