Home namma chikmagalur chikamagalur ಆರ್.ಎಸ್.ಎಸ್. ಲೆಕ್ಕ ಕೇಳಲು ನೀವ್ಯಾರು ?
chikamagalurHomeLatest Newsnamma chikmagalur

ಆರ್.ಎಸ್.ಎಸ್. ಲೆಕ್ಕ ಕೇಳಲು ನೀವ್ಯಾರು ?

Share
Oplus_131072
Share

ಮೂಡಿಗೆರೆ: ರಾಷ್ಟ್ರೀಯ ಸ್ವಯಂಸೇವಕ ಸಂಘದ ನೋಂದಣಿ ಹಾಗೂ ಲೆಕ್ಕ ಕೇಳಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ.

ಮೂಡಿಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಖರ್ಗೆ ಅವರಿಗೆ ಅವರ ಜವಾಬ್ದಾರಿಯ ಪಾಠವನ್ನು ನೆನಪಿಸುವ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ.

ಅಧಿಕಾರ ಸಿಕ್ಕ ಕೆಲವೇ ದಿನಗಳಲ್ಲಿ ಪ್ರಿಯಾಂಕ್ ಖರ್ಗೆ ಅವರು ಆರ್.ಎಸ್.ಎಸ್. ರಿಜಿಸ್ಟ್ರೇಷನ್ ಹಾಗೂ ಲೆಕ್ಕದ ವಿಚಾರವಾಗಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಮುತಾಲಿಕ್ ಆರೋಪಿಸಿದರು.

ನೀವು ಕರ್ನಾಟಕದ ಏಳು ಕೋಟಿ ಜನರಿಗೆ ಸಚಿವರಾಗಿದ್ದೀರಿ, ಆದರೆ ಆರ್.ಎಸ್.ಎಸ್. ದೇಶದ 140 ಕೋಟಿ ಜನರ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದೆ ಎಂದು ನೆನಪಿಸಿದ ಅವರು, ನೂರು ವರ್ಷಗಳಿಂದ ಬೆಳೆದು ನಿಂತಿರುವ ಆನೆಯಂತಹ ಸಂಘಟನೆಯ ಮುಂದೆ ನಿಂತು ನೀವು ಹೀಗೆ ಮಾಡು, ಹಾಗೆ ಮಾಡು ಎಂದು ಹೇಳಲು ನೀವ್ಯಾರು ಎಂದು ಪ್ರಶ್ನಿಸಿದ್ದಾರೆ.

ಆರ್.ಎಸ್.ಎಸ್. ಒಂದು ಅಂತಾರಾಷ್ಟ್ರೀಯ ಸಂಘಟನೆಯಾಗಿದ್ದು, ವಿಶ್ವದ ಸುಮಾರು 140 ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಸಾವಿರಾರು ಅನಾಥಶ್ರಮಗಳು, ಶಾಲೆಗಳು ಹಾಗೂ ಗೋಶಾಲೆಗಳ ಮೂಲಕ ನಿರಂತರವಾಗಿ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ.

ಸಂಘವು ಎಲ್ಲೂ ನೋಂದಣಿ ಆಗಿಲ್ಲ ಮತ್ತು ಅದನ್ನು ಮಾಡುವ ಅಗತ್ಯವೂ ಇಲ್ಲ, ಇದರಿಂದ ನಿಮಗೇನು ತೊಂದರೆ ಎಂದು ಮುತಾಲಿಕ್ ಖಾರವಾಗಿ ಪ್ರಶ್ನಿಸಿದರು.

ಆರ್.ಎಸ್.ಎಸ್. ಎಲ್ಲಾದರೂ ಕಾನೂನು ಬಾಹಿರ ಅಥವಾ ದೇಶದ್ರೋಹದ ಚಟುವಟಿಕೆಗಳನ್ನು ನಡೆಸುತ್ತಿದೆಯೇ ಎಂಬುದಕ್ಕೆ ಸಚಿವ ಖರ್ಗೆ ಒಂದೇ ಒಂದು ಉದಾಹರಣೆ ನೀಡಲಿ ಎಂದು ಸವಾಲು ಹಾಕಿದ ಮುತಾಲಿಕ್, ಸಂಘಟನೆಯು ಶುದ್ಧ, ಶಾಂತ ಹಾಗೂ ಶಿಸ್ತುಬದ್ಧವಾದ ಸ್ವದೇಶಿ ಚಳುವಳಿಯ ಮೂಲಕ ದೇಶಭಕ್ತಿಯನ್ನು ನಿರ್ಮಿಸುತ್ತಿದೆ ಎಂದರು.

ಸಚಿವರ ಇಂತಹ ಟೀಕೆಗಳು ಮತ್ತು ಬೇಡಿಕೆಗಳು ಅತ್ಯಂತ ಅಸಹ್ಯವಾಗಿದ್ದು, ಪ್ರತಿಯೊಬ್ಬರಿಗೂ ಒಂದು ಮಿತಿ ಇರುತ್ತದೆ ಎಂಬುದನ್ನು ಅರಿತು ರಾಜ್ಯದ ಅಭಿವೃದ್ಧಿಯ ಕಡೆಗೆ ಗಮನ ಹರಿಸುವುದು ಒಳಿತು ಎಂದು ಅವರು ಮೂಡಿಗೆರೆಯಲ್ಲಿ ಕಿಡಿಕಾರಿದ್ದಾರೆ.

RSS Who are you to hold accountable?

Share

Leave a comment

Leave a Reply

Your email address will not be published. Required fields are marked *

Don't Miss

ರಸ್ತೆಯಲ್ಲಿ ದುಡುಕಿನಿಂದ ಚಾಲನೆ – ಪ್ರಕರಣ ದಾಖಲು

ಮೂಡಿಗೆರೆ: ಇನ್‌ಸ್ಟಾಗ್ರಾಮ್‌ನಲ್ಲಿ ಲೈಕ್ಸ್ ಮತ್ತು ಕಾಮೆಂಟ್ಸ್ಗಾಗಿ ಸಾರ್ವಜನಿಕ ರಸ್ತೆಯಲ್ಲಿ ಅಪಾಯಕಾರಿಯಾಗಿ ರೀಲ್ಸ್ ಮಾಡಿದ್ದ ಮೂಡಿಗೆರೆ ಮೂಲದ ವ್ಯಕ್ತಿಯೊಬ್ಬರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮದ ರಾಜು ಪಿ.ಕೆ...

ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯ ವರ್ತನೆ: ಯುವಕ ಬಂಧನ

ಶೃಂಗೇರಿ:  ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಡಿ ಯುವಕನೊಬ್ಬನನ್ನು ಶೃಂಗೇರಿ ಪೊಲೀಸರು ಬಂಧಿಸಿದ್ದಾರೆ. ಪಟ್ಟಣದಲ್ಲಿ ಕುಷನ್ ಅಂಗಡಿ ನಡೆಸುತ್ತಿದ್ದ ಶಬೀರ್ ಎಂಬಾತ ತನ್ನ ಅಂಗಡಿ ಬಳಿ ಬಂದಿದ್ದ ಅಪ್ರಾಪ್ತ ಬಾಲಕಿಯ ಖಾಸಗಿ...

Related Articles

ಕಳ್ಳತನ ಆರೋಪಿ ಬಂಧನ-₹12.50 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಅಲ್ಲೂರು: ಬಸರವಳ್ಳಿ ಗ್ರಾಮದ ಮಂಜುನಾಥ್ ಅವರ ಮನೆಯಲ್ಲಿ ಕಳ್ಳತನ ನಡೆಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್...

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು...

ವಿಶೇಷ ಕೃಷಿ ಜಾಗೃತಿ ಕಾರ್ಯಕ್ರಮದಲ್ಲಿ ಕನ್ನೇರಿ ಸ್ವಾಮೀಜಿ ವಿರುದ್ಧ ಆಕ್ರೋಶ

ಚಿಕ್ಕಮಗಳೂರು: ನಗರದ ಕುವೆಂಪು ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಕೃಷಿ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಕನ್ನೇರಿ...