Home namma chikmagalur chikamagalur ದಬ್ಬಾಳಿಕೆಯಿಂದ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಯತ್ನ
chikamagalurHomeLatest Newsnamma chikmagalur

ದಬ್ಬಾಳಿಕೆಯಿಂದ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಯತ್ನ

Share
Share

ಚಿಕ್ಕಮಗಳೂರು: ಬಿಡದಿ ಟೌನ್‌ಶಿಪ್ ಯೋಜನೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದಬ್ಬಾಳಿಕೆಯ ಮೂಲಕ ಜಾರಿಗೆ ತರಲು ಮುಂದಾಗಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ವಕ್ತಾರ ಸುಧಾಕರ ಶೆಟ್ಟಿ ಆರೋಪಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಡದಿಯಲ್ಲಿ ಟೌನ್‌ಶಿಪ್ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟದ ಸಮೀಪದಲ್ಲೇ ಕೆಲವರು ಕೆಂಪು ಬಾವುಟ ಹಿಡಿದು ಯೋಜನೆ ಪರವಾಗಿ ಪ್ರತಿಭಟನೆ ನಡೆಸುತ್ತಿರುವುದು ಗಮನಾರ್ಹವಾಗಿದೆ. ಈ ಪ್ರತಿಭಟನೆಗೆ ಮುಖ್ಯಮಂತ್ರಿ ಅವರೇ ಪರೋಕ್ಷವಾಗಿ ಬೆಂಬಲ ನೀಡಿ ಕೆಲವರನ್ನು ಮುಂದಿಟ್ಟಿದ್ದಾರೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ ಎಂದು ಹೇಳಿದರು.

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಈ ವಿಚಾರವಾಗಿ ಸಾರ್ವಜನಿಕ ಚರ್ಚೆಗೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದರೂ, ಅವರ ಬದಲಿಗೆ ಇತರರನ್ನು ಕಳುಹಿಸಲಾಗಿದೆ ಎಂದು ಟೀಕಿಸಿದ ಅವರು, ಸ್ವಪ್ರತಿಷ್ಠೆಗಾಗಿ ಯೋಜನೆಯನ್ನು ಯಾವುದೇ ಬೆಲೆಗೆ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.

ಯಾವುದೇ ಅಭಿವೃದ್ಧಿ ಯೋಜನೆ ಅನುಷ್ಠಾನಗೊಳಿಸುವ ಮೊದಲು ಭೂಮಿ ಕಳೆದುಕೊಳ್ಳುವ ರೈತರೊಂದಿಗೆ ನೇರವಾಗಿ ಚರ್ಚಿಸಬೇಕು. ನೈಸ್ ಯೋಜನೆ ಜಾರಿಗೆ ಬಂದ ಸಂದರ್ಭದಲ್ಲಿ ಆಗಿನ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ರೈತರ ಮಧ್ಯೆ ತೆರಳಿ ಸಭೆ ನಡೆಸಿದ್ದರು. ಆದರೆ ಈಗಿನ ಸರ್ಕಾರ ರೈತರ ಅಭಿಪ್ರಾಯವನ್ನೇ ಕಡೆಗಣಿಸಿ ದಬ್ಬಾಳಿಕೆ ನಡೆಸುತ್ತಿದೆ ಎಂದು ದೂರಿದರು.

ಇದೇ ವೇಳೆ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ನ ೧೨ ಮಂದಿ ಶಾಸಕರು ಅಡ್ಡಮತದಾನ ಮಾಡಿರುವ ವಿಚಾರವನ್ನು ಪ್ರಸ್ತಾಪಿಸಿದ ಅವರು, ಇದರ ಹಿಂದೆ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿರುವ ಶಂಕೆ ವ್ಯಕ್ತಪಡಿಸಿದರು. ಅನುದಾನ ಸೇರಿದಂತೆ ವಿವಿಧ ಆಮಿಷಗಳನ್ನು ಒಡ್ಡಿ ಶಾಸಕರನ್ನು ಸೆಳೆದಿರಬಹುದು. ಆದರೆ ಪಕ್ಷಕ್ಕೆ ದ್ರೋಹ ಮಾಡಿದವರಿಗೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.

ಮಲೆನಾಡಿನ ರೈತರ ಜೀವಾಳವಾಗಿರುವ ಅಡಕೆ ಬೆಳೆ ವಿವಿಧ ರೋಗಗಳಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಅಡಕೆಗೆ ಬಂದಿರುವ ರೋಗಗಳ ಕುರಿತು ಸಮರ್ಪಕ ಸಂಶೋಧನೆ ನಡೆಯುತ್ತಿಲ್ಲ. ಅಡಕೆ ಸಂಶೋಧನಾ ಕೇಂದ್ರ ನಿಷ್ಕ್ರಿಯಗೊಂಡಿದ್ದು, ರಾಜ್ಯ ಸರ್ಕಾರ ಕೂಡಲೇ ಅಗತ್ಯ ಮೂಲಸೌಕರ್ಯ ಕಲ್ಪಿಸಿ ಸಂಶೋಧನೆಗೆ ಉತ್ತೇಜನ ನೀಡಬೇಕು ಎಂದು ಅವರು ಆಗ್ರಹಿಸಿದರು.

ಅಯೋಧ್ಯೆಯ ರಾಮ ಮಂದಿರವು ದೇಶದ ಹಿಂದುಗಳ ಪವಿತ್ರ ಕ್ಷೇತ್ರವಾಗಿದ್ದು, ಅದರ ನಿರ್ಮಾಣಕ್ಕೆ ದೇಶದಾದ್ಯಂತ ಜನರು ಪಕ್ಷಾತೀತವಾಗಿ ದೇಣಿಗೆ ನೀಡಿದ್ದಾರೆ. ಇಂತಹ ಪವಿತ್ರ ಕ್ಷೇತ್ರದ ಹುಂಡಿಗೆ ಕನ್ನ ಹಾಕಿರುವುದು ಅತ್ಯಂತ ಖಂಡನೀಯ. ಈ ಪ್ರಕರಣದಲ್ಲಿ ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸುಧಾಕರ ಶೆಟ್ಟಿ ಒತ್ತಾಯಿಸಿದರು.

Attempt to implement Bidadi Township project through oppression

 

Share

Leave a comment

Leave a Reply

Your email address will not be published. Required fields are marked *

Don't Miss

ಕೋಟ್ಯಂತರ ರೂಪಾಯಿ ಮೌಲ್ಯದ ಬ್ಯಾಂಕ್ ಆಸ್ತಿ ಪತ್ರಗಳೊಂದಿಗೆ ಮಹಿಳೆ ನಾಪತ್ತೆ

ಕಡೂರು: ಕೋರ್ಟ್ ವಿಚಾರಣೆಗಾಗಿ ಚಿಕ್ಕಮಗಳೂರಿಗೆ ಹೋಗಿ ಬರುವುದಾಗಿ ಹೇಳಿ ಹೋದ ಮಹಿಳೆಯೊಬ್ಬರು ಮನೆಯಲ್ಲಿದ್ದ ನೂರಾರು ಗ್ರಾಂ ಚಿನ್ನಾಭರಣ ಹಾಗೂ ಕೋಟ್ಯಂತರ ರೂಪಾಯಿ ಮೌಲ್ಯದ ಬ್ಯಾಂಕ್ ಆಸ್ತಿ ಪತ್ರಗಳೊಂದಿಗೆ ನಿಗೂಢವಾಗಿ ನಾಪತ್ತೆಯಾಗಿರುವ ಆಘಾತಕಾರಿ...

ಮುದುಗುಂಡಿ ಗ್ರಾಮದಲ್ಲಿ ಹೆಣ್ಣು ಚಿರತೆ ಸೆರೆ

ತರೀಕೆರೆ: ತಾಲ್ಲೂಕಿನ ಮುದುಗುಂಡಿ ಗ್ರಾಮದಲ್ಲಿ ಸುಮಾರು 3 ವರ್ಷ ವಯಸ್ಸಿನ ಹೆಣ್ಣು ಚಿರತೆಯನ್ನು ಅರಣ್ಯ ಇಲಾಖೆ ಶನಿವಾರ ಸೆರೆಹಿಡಿದಿದೆ. ಮುದುಗುಂಡಿ ಗ್ರಾಮದಲ್ಲಿ ಬಳಕೆ ಮಾಡದ ಶೌಚಾಲಯದಲ್ಲಿದ್ದ ನಾಯಿಗಳನ್ನು ಹಿಡಿಯಲು ಶನಿವಾರ ಬೆಳಿಗ್ಗೆ...

Related Articles

ಬೆಂಗಳೂರನ್ನು ಜಾಗತಿಕ ಮಟ್ಟದಲ್ಲಿ ದಾಖಲಿಸಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ

ಕಡೂರು :  ಬೆಂಗಳೂರು ನಗರವನ್ನು ಜಾಗತಿಕ ಮಟ್ಟದಲ್ಲಿ ದಾಖಲಿಸಿದ ಕೀರ್ತಿ ನಾಡಪ್ರಭು ಕೆಂಪೇಗೌಡರಿಗೆ ಸಲ್ಲುತ್ತದೆ ಎಂದು...

ಮೆಡಿಕಲ್ ಕಾಲೇಜು ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿ

ಚಿಕ್ಕಮಗಳೂರು:  ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಿರುವ ಮೂಲ ಉದ್ದೇಶ ಇನ್ನೂ ಸಂಪೂರ್ಣವಾಗಿ...

ಮುಂಜಾಗ್ರತಾ ಕ್ರಮವಾಗಿ ಪೋಲಿಯೊ ಲಸಿಕೆ ಹಾಕಿಸಿ

ಚಿಕ್ಕಮಗಳೂರು:ಯಾವುದೇ ರೋಗ ಬಂದ ಮೇಲೆ ಪರದಾಡುವುದಕ್ಕಿಂತ, ಅದು ಬರುವ ಮುನ್ನವೇ ತಡೆಯುವುದು ಬುದ್ಧಿವಂತಿಕೆ. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಮುಂಜಾಗ್ರತಾ ಕ್ರಮವಾಗಿ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಬೇಕು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಕರೆ ನೀಡಿದರು. ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ  ಪಂಚಾಯಿತಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ  ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  ನಮ್ಮ ದೇಶದಲ್ಲಿ ಹಲವು ವರ್ಷಗಳ ಹಿಂದೆಯೇ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ಯಶಸ್ವಿಯಾಗಿ...

ಮುಳ್ಳಯ್ಯನಗಿರಿ ಬಳಿ ಟ್ರಾಫಿಕ್ ಜಾಮ್

ಚಿಕ್ಕಮಗಳೂರು: ಮೂರು ದಿನಗಳ ಸತತ ರಜೆಯ ಹಿನ್ನೆಲೆಯಲ್ಲಿ ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸಲು ಪ್ರವಾಸಿಗರು ಕಾಫಿನಾಡು ಚಿಕ್ಕಮಗಳೂರಿನತ್ತ...