ಚಿಕ್ಕಮಗಳೂರು: ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಆಗುವುದು ಖಚಿತ. ಹೀಗಾಗಿ ಚಿಕ್ಕಮಗಳೂರು ಜಿಲ್ಲೆ ಸ್ವತಂತ್ರ ಲೋಕಸಭಾ ಸಭಾ ಕ್ಷೇತ್ರ ಅಸ್ತಿತ್ವಕ್ಕೆ ಬರುವುದು ಬಹುತೇಕ ಖಚಿತ.
ಜನಸಂಖ್ಯೆ ಅಧಾರದ ಮೇಲೆ ಲೋಕಸಭಾ ಕ್ಷೇತ್ರಗಳನ್ನು ಪುನರ್ ವಿಂಗಡಣೆ ಮಾಡಲು ಕೇಂದ್ರ ಸರ್ಕಾರ ಎಲ್ಲಾ ತಯಾರಿ ನಡೆಸಿತ್ತು ದಕ್ಷಿಣ ಭಾರತದ ರಾಜ್ಯಗಳು ಇದನ್ನು ತೀವ್ರವಾಗಿ ವಿರೋಧಿಸಿದ್ದವು ಆದರೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪುನರ್ ವಿಂಗಡಣೆ ಬಿಲ್ ಮಂಡಿಸಿತ್ತು ಆದರೆ ಲೋಕಸಭೆಯಲ್ಲಿ ಬಹುಮತ ಸಿಗದಿರುವುದರಿಂದ ಪುನರ್ ವಿಂಗಡಣೆ ಸ್ಥಗಿತಗೊಳಿಸಲಾಗಿತ್ತು.
ಬಿಜೆಪಿ ಮುಂದಿನ ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟು ಮತ್ತೆ ಪುನರ್ ವಿಂಗಡಣೆಗೆ ಚಾಲನೆ ನೀಡಿದೆ. ಜನಸಂಖ್ಯೆ ಆಧಾರದ ಮೇಲೆ ಪುನರ್ ರಚನೆ ಮಾಡದೆ 1957 ಮತ್ತು 1967 ರಲ್ಲಿ ಲೋಕಸಭಾ ಕ್ಷೇತ್ರಗಳನ್ನು ಭೌಗೋಳಿಕವಾಗಿ ಮರುವಿಂಗಡಣೆ ಮಾಡಲಾಗಿತ್ತು ಮತ್ತೆ ಲೋಕಸಭಾ ಕ್ಷೇತ್ರಗಳನ್ನು ಭೌಗೋಳಿಕ ಆಧಾರದ ಮೇಲೆ ಪುನರ್ ವಿಂಗಡಣೆ ಮಾಡಲು ನಿರ್ಧಾರ ಮಾಡಲು ಕೇಂದ್ರ ಸರ್ಕಾರ ತಯಾರಿ ನಡೆಸಿದೆ.
1957 ರಿಂದ ಇಲ್ಲಿಯವರೆಗೆ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಹಾಸನ,ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳ ಮತ್ತು ಬೆಳ್ತಂಗಡಿ ಜೊತೆಗೆ ಸೇರಿಕೊಂಡಿತ್ತು. ಪ್ರಸ್ತುತ ಚಿಕ್ಕಮಗಳೂರು_ಉಡುಪಿ ಲೋಕಸಭಾ ಕ್ಷೇತ್ರವಾಗಿದೆ.
ಲೋಕಸಭೆಯಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಬಿಲ್ ಪಾಸ್ ಅದರೆ “ಚಿಕ್ಕಮಗಳೂರು ಜಿಲ್ಲೆ” ಗೆ ಸೀಮಿತವಾಗಿ ಲೋಕಸಭಾ ಕ್ಷೇತ್ರ ಅಸ್ತಿತ್ವಕ್ಕೆ ಬರಲಿದೆ.ಜಿಲ್ಲೆಯವರು ಲೋಕಸಭಾ ಸದಸ್ಯರಾಗುವ ಅವಕಾಶ ದೊರೆಯಲಿದೆ.
ಲೋಕಸಭಾ ಕ್ಷೇತ್ರ ಪುನರ್ ವಿಂಗಡಣೆ ಬಹುತೇಕ ಜಾರಿಗೆ ಬರುವುದು ಖಚಿತ. ಲೋಕಸಭೆಯಲ್ಲಿ ಬಹುಮತ ಇಲ್ಲದಿದ್ದರೂ ರಾಜ್ಯ ಸಭೆಯಲ್ಲಿ ಬಿಜೆಪಿ ಮತ್ತು ಮಿಶ್ರ ಪಕ್ಷಗಳಿಗೆ ಬಹುಮತ ಇರುವುದರಿಂದ ಕ್ಷೇತ್ರ ಮರು ವಿಂಗಡಣೆ ಬಹುತೇಕ ಖಚಿತ. ಇದರಿಂದಾಗಿ 542 ಕ್ಷೇತ್ರಗಳ ಬದಲಿಗೆ 820 ಕ್ಕೂ ಹೆಚ್ಚು ಲೋಕಸಭಾ ಸದಸ್ಯರು ಆಯ್ಕೆ ಆಗುತ್ತಾರೆ.
ಕರ್ನಾಟಕದಲ್ಲಿ ಹೆಚ್ಚುವರಿಯಾಗಿ 9 ಲೋಕಸಭಾ ಕ್ಷೇತ್ರಗಳು ಹೊಸದಾಗಿ ಅಸ್ತಿತ್ವಕ್ಕೆ ಬರಲಿವೆ.
Redistribution Benefit- Chikmagalur Lok Sabha Constituency is sure.
Leave a comment