Home namma chikmagalur chikamagalur ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ
chikamagalurHomeLatest Newsnamma chikmagalur

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

Share
Share

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿರುವ ಆರೋಪ ಶೃಂಗೇರಿ ತಾಲೂಕಿನ ಗುಬ್ಬಗೋಡಿನಲ್ಲಿ ನಡೆದಿದೆ.

ಗ್ರಾಮದ ಅಂಗನವಾಡಿಯಲ್ಲಿ ಸಂಘದ ಸಭೆ ನಡೆಯುತ್ತಿದ್ದಾಗ ಈ ಗಲಾಟೆ ಆರಂಭವಾಗಿದೆ ಎನ್ನಲಾಗಿದೆ. ಸಂಘದ ಸದಸ್ಯರಾದ ದೂರುದಾರೆ ಮಹಿಳೆ, ನಿಯಮದ ಪ್ರಕಾರ ಸಂಘದಲ್ಲಿ ಸಕ್ರಿಯರಾಗಿರುವ ಸದಸ್ಯರಿಗೆ ಮಾತ್ರ ಸಾಲ ನೀಡುವುದಾಗಿ ತಿಳಿಸಿದಾಗ. ಈ ಮಾತಿನಿಂದ ಆಕ್ರೋಶಗೊಂಡ ಅದೇ ಗ್ರಾಮದ ಶಾಂತಿ ಎಂಬುವವರು ಸಭೆಯಲ್ಲೇ ಜಗಳ ತೆಗೆದಿದ್ದಾರೆಂದು ದೂರಲಾಗಿದೆ.

ಇಷ್ಟಕ್ಕೇ ನಿಲ್ಲದ ಜಗಳದ ಕಿಡಿ ಮಹಿಳೆ ಸಭೆ ಮುಗಿಸಿ ಮನೆಗೆ ಮರಳುತ್ತಿದ್ದಾಗ ದಾರಿಯಲ್ಲಿ ಶಾಂತಿ ಮತ್ತು ಆಕೆಯ ಮಗ ದೊಣ್ಣೆಗಳೊಂದಿಗೆ ಅಡ್ಡಗಟ್ಟಿ ತೀವ್ರ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ವೇಳೆ ಪತ್ನಿಯನ್ನು ರಕ್ಷಿಸಲು ಧಾವಿಸಿದ ಪತಿ ವಿಜೇಂದ್ರ ಅವರ ಮೇಲೂ ಇಬ್ಬರು ಮನಬಂದಂತೆ ಹಲ್ಲೆ ನಡೆಸಿ, ಕೊಲೆ ಮಾಡುವುದಾಗಿ ಜೀವರಕ್ಷಕ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದ್ದು . ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡ ದಂಪತಿಗಳನ್ನು ಚಿಕಿತ್ಸೆಗಾಗಿ ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗಲೂ ಶಾಂತಿಯ ಪತಿ ಸುಧೀರ್ ದಾರಿಯಲ್ಲಿ ಕಾರನ್ನು ಅಡ್ಡಗಟ್ಟಿ ಮತ್ತೆ ಬೆದರಿಕೆ ಹಾಕಿದ್ದಾರೆಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ

ಈ ಭೀತಿಯಿಂದಾಗಿ ದಂಪತಿಗಳು ಮೊದಲು ಚಿಕಿತ್ಸೆ ಪಡೆಯಲಾಗದೆ ಹಿಂತಿರುಗಿ, ಮರುದಿನ ತಡವಾಗಿ ಅಭಿನವ ವಿದ್ಯಾತೀರ್ಥ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ ಎಂದು ಗಾಯಾಳುಗಳು ನೀಡಿದ ದೂರಿನ ಮೇರೆಗೆ ಶೃಂಗೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Couple attacked with sticks over Dharmasthala Sangha loan dispute

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...

ಪ್ರೀತಿ ನಿರಾಕರಣೆ : ಬಾಲಕಿ ಮೇಲೆ ಹಲ್ಲೆ

ಚಿಕ್ಕಮಗಳೂರು: ಕಾಫಿನಾಡಿನ ಹೃದಯ ಭಾಗದಲ್ಲಿರುವ ಎಸ್ಪಿ ಮತ್ತು ಡಿಸಿ ಕಚೇರಿ ಪಕ್ಕದಲ್ಲೇ ಇರುವ ಜಿಲ್ಲಾ ಕ್ರೀಡಾಂಗಣದಲ್ಲಿ...