Home namma chikmagalur chikamagalur ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯದಿಂದಲೇ 12 ಸಾವಿರ ಕೋಟಿ ರೂ. ವೆಚ್ಚ
chikamagalurHomeLatest Newsnamma chikmagalur

ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯದಿಂದಲೇ 12 ಸಾವಿರ ಕೋಟಿ ರೂ. ವೆಚ್ಚ

Share
Share

ಚಿಕ್ಕಮಗಳೂರು:  ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ೫,೩೦೦ ಕೋಟಿ ರೂ. ಘೋಷಿಸಿದ್ದ ಕೇಂದ್ರ ಸರ್ಕಾರ ಇದುವರೆಗೆ ನಯಾಪೈಸೆ ಬಿಡುಗಡೆ ಮಾಡಿಲ್ಲ. ಆದರೆ, ನಮ್ಮ ರಾಜ್ಯ ಸರ್ಕಾರ ಈಗಾಗಲೇ ತನ್ನ ಪಾಲಿನ ೧೨,೦೦೦ ಕೋಟಿಗೂ ಅಧಿಕ ಹಣವನ್ನು ಖರ್ಚು ಮಾಡಿ ಕಾಮಗಾರಿ ಮುಂದುವರಿಸಿದೆ ಎಂದು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ತರೀಕೆರೆ ತಾಲ್ಲೂಕಿನಲ್ಲಿ ಭಾನುವಾರ ಭದ್ರಾ ಮೇಲ್ದಂಸಡೆ ಯೋಜನೆಯ ಕಾಲುವೆ ಹಾಗೂ ಜಲಾಶಯದ ಕಾಮಗಾರಿ ವೀಕ್ಷಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ

ಮಳೆ ಕೊರತೆಯಿಂದಾಗಿ ಈ ಬಾರಿ ಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಕಡಿಮೆ ಇರುವುದು ನಿಜ. ಆದರೆ, ಈ ವ್ಯಾಪ್ತಿಯ ಚಿತ್ರದುರ್ಗ, ತುಮಕೂರು ಸೇರಿದಂತೆ ಎಲ್ಲಾ ಜಿಲ್ಲೆಗಳ ಜನರಿಗೆ ಕುಡಿಯುವ ನೀರು ಪೂರೈಸಲು ಮೊದಲ ಆದ್ಯತೆ ನೀಡಲಾಗಿದೆ. ಯಾವುದೇ ಪರಿಸ್ಥಿತಿಯಲ್ಲೂ ಕುಡಿಯುವ ನೀರಿಗೆ ತೊಂದರೆಯಾಗದಂತೆ ಜಲಾಶಯಗಳಲ್ಲಿ ಅಗತ್ಯ ನೀರನ್ನು ಕಾಯ್ದಿರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದರು.

ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಯ ಪರಿಶೀಲಿಸಿದ ಸಚಿವರು, ಅರಣ್ಯ ಇಲಾಖೆ ಹಾಗೂ ಭೂಸ್ವಾಧೀನ ಪ್ರಕ್ರಿಯೆಯಲ್ಲಿದ್ದ ತೊಡಕುಗಳನ್ನು ಶೀಘ್ರವಾಗಿ ಬಗೆಹರಿಸಲು ಅಧಿಕಾರಿಗಳಿಗೆ ಸೂಚಿಸಿದರು.
ತುಮಕೂರು ಭಾಗದ ಕಾಲುವೆ ಹಾದುಹೋಗುವ ಮಾರ್ಗದಲ್ಲಿ ಅರಣ್ಯ ಇಲಾಖೆಯ ಕೆಲವು ಸಮಸ್ಯೆಗಳಿದ್ದವು.

ಹಾಗೆಯೇ ಚಿತ್ರದುರ್ಗ ಸೇರಿದಂತೆ ಕೆಲವು ಕಡೆಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ ಸಣ್ಣಪುಟ್ಟ ಅಡೆತಡೆಗಳಿದ್ದವು. ಇವೆಲ್ಲವನ್ನೂ ಆದಷ್ಟು ಬೇಗ ನಿವಾರಿಸಿ, ಕೆಲಸಕ್ಕೆ ವೇಗ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದ್ದು, ಅವರು ನಿಗಾ ವಹಿಸಿದ್ದಾರೆ ಎಂದು ತಿಳಿಸಿದರು.

ತರೀಕೆರೆ ಶಾಸಕ ಜಿ.ಹೆಚ್.ಶ್ರೀನಿವಾಸ್, ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಮುಂತಾದವರು ಹಾಜರಿದ್ದರು.

The Bhadra Upper River Project will cost Rs 12000 crore from the state itself.

Share

Leave a comment

Leave a Reply

Your email address will not be published. Required fields are marked *

Don't Miss

ಮೆಡಿಕಲ್ ಕಾಲೇಜು ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿ

ಚಿಕ್ಕಮಗಳೂರು:  ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಿರುವ ಮೂಲ ಉದ್ದೇಶ ಇನ್ನೂ ಸಂಪೂರ್ಣವಾಗಿ ಈಡೇರಿಲ್ಲ. ಬಡ ರೋಗಿಗಳಿಗೆ ಜಿಲ್ಲೆಯಲ್ಲೇ ಉತ್ತಮ ಚಿಕಿತ್ಸೆ ದೊರೆಯುವಂತೆ, ಆಸ್ಪತ್ರೆಯನ್ನು ತಕ್ಷಣ ಪೂರ್ಣ ಪ್ರಮಾಣದಲ್ಲಿ...

ಮುಂಜಾಗ್ರತಾ ಕ್ರಮವಾಗಿ ಪೋಲಿಯೊ ಲಸಿಕೆ ಹಾಕಿಸಿ

ಚಿಕ್ಕಮಗಳೂರು:ಯಾವುದೇ ರೋಗ ಬಂದ ಮೇಲೆ ಪರದಾಡುವುದಕ್ಕಿಂತ, ಅದು ಬರುವ ಮುನ್ನವೇ ತಡೆಯುವುದು ಬುದ್ಧಿವಂತಿಕೆ. ಈ ನಿಟ್ಟಿನಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಮುಂಜಾಗ್ರತಾ ಕ್ರಮವಾಗಿ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಬೇಕು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಕರೆ ನೀಡಿದರು. ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ  ಪಂಚಾಯಿತಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ  ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.  ನಮ್ಮ ದೇಶದಲ್ಲಿ ಹಲವು ವರ್ಷಗಳ ಹಿಂದೆಯೇ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ಯಶಸ್ವಿಯಾಗಿ ಪ್ರಾರಂಭಿಸಲಾಯಿತು. ಅಂದಿನ ಪ್ರಧಾನಿ ಪಿ.ವಿ. ನರಸಿಂಹರಾವ್ ಹಾಗೂ ಅಂದಿನ ಮುಖ್ಯಮಂತ್ರಿ ಹೆಚ್.ಡಿ. ದೇವೇಗೌಡ ಅವರ...

Related Articles

ರೈತನ ಮನೆ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಮನೆ ಜಖಂ

ಚಿಕ್ಕಮಗಳೂರು:  ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಗಾಳಿಯ ವೇಗ ಹೆಚ್ಚಿರುವುದರಿಂದ ಮರಗಳು ಧರೆಗುರುಳುತ್ತಿವೆ. ಮೂಡಿಗೇರೆಯ ಕೋಳೂರು...

ಆಸ್ತಿ- ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂಪತ್ತು

ಚಿಕ್ಕಮಗಳೂರು:  ಆಸ್ತಿ ಮತ್ತು ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂ ಪತ್ತು. ಈ ಆರೋಗ್ಯಯುತ ಬದುಕು...

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಬಿಜೆಪಿ ರಾಜಕೀಯ

ಕಡೂರು: ಚಿಕ್ಕಮಗಳೂರು ಜಿಲ್ಲಾ ಪ್ರವಾಸದಲ್ಲಿರುವ ಸಚಿವ ರಾಮಲಿಂಗಾರೆಡ್ಡಿ ಅವರು ರಾಜಕೀಯ ವಲಯದ ಪ್ರಮುಖ ವಿದ್ಯಮಾನಗಳು, ರಾಜ್ಯದ...

ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ಉರುಳಿದ ಕಾರು

ಕಳಸ: ನಿರಂತರ ಮಳೆಯಿಂದಾಗಿ ರಸ್ತೆ ತೇವಾಂಶದಿಂದ ಕೂಡಿದ್ದ ಪರಿಣಾಮ, ಬೈಕ್‌ಗೆ ಸೈಡ್ ಕೊಡಲು ಹೋಗಿ ಕಾರೊಂದು...