Home namma chikmagalur chikamagalur ತನಿಕೋಡ್‌ನಿಂದ ಎಸ್.ಕೆ. ಬಾರ್ಡರ್‌ ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ
chikamagalurHomeLatest Newsnamma chikmagalur

ತನಿಕೋಡ್‌ನಿಂದ ಎಸ್.ಕೆ. ಬಾರ್ಡರ್‌ ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

Share
Share

ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ 169ರ ತನಿಕೋಡ್‌ನಿಂದ ಎಸ್.ಕೆ. ಬಾರ್ಡ‌್ರವರೆಗಿನ ರಸ್ತೆ ಮಾರ್ಗದಲ್ಲಿ ಭಾರಿ ವಾಹನಗಳ ಸಂಚಾರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೆಪ್ಟೆಂಬರ್ 30, 2026ರವರೆಗೆ ಸಂಪೂರ್ಣವಾಗಿ ನಿಷೇಧಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಈ ನಿರ್ದಿಷ್ಟ ಹೆದ್ದಾರಿ ವಲಯದಲ್ಲಿರುವ ನಾಲ್ಕು ಕಿರು ಸೇತುವೆಗಳು ತೀರಾ ಶಿಥಿಲಾವಸ್ಥೆ ತಲುಪಿದ್ದು, ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ 12 ಟನ್‌ಗಿಂತ ಅಧಿಕ ಭಾರದ ಸರಕು ಸಾಗಾಣಿಕೆ ವಾಹನಗಳಾದ ಟಿಪ್ಪರ್, ಲಾರಿ ಹಾಗೂ ಕಟ್ಟಡ ನಿರ್ಮಾಣ ಸಾಮಗ್ರಿ ಹೊತ್ತ ವಾಹನಗಳ ಓಡಾಟವನ್ನು ನಿರ್ಬಂಧಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಉಪವಿಭಾಗದ ಅಧಿಕಾರಿಗಳು ನಡೆಸಿದ ಪರಿಶೀಲನೆಯಲ್ಲಿ, 1950ರಿಂದ 1960ರ ಅವಧಿಯಲ್ಲಿ ನಿರ್ಮಿಸಲಾದ ಕಿರು ಸೇತುವೆಗಳ ಕಲ್ಲುಗಳು ಕಿತ್ತುಬಂದಿರುವುದು,

ಕಂಬಗಳು ಭಾಗಶಃ ಹಾನಿಗೊಳಗಾಗಿರುವುದು ಮತ್ತು ಸ್ಲಾಬ್‌ನ ಕಾಂಕ್ರೀಟ್ ಬಿದ್ದು ಸರಳುಗಳು ಹೊರ ಭಾಗಕ್ಕೆ ಕಾಣಿಸುತ್ತಿರುವುದು ಪತ್ತೆಯಾಗಿದೆ. ಪ್ರಸ್ತುತ ಮಳೆಗಾಲ ಆರಂಭವಾಗುತ್ತಿರುವುದರಿಂದ ಹಳ್ಳಗಳಲ್ಲಿ ನೀರಿನ ಹರಿವು ಹೆಚ್ಚಾಗಿ ಸೇತುವೆಗಳು ಮತ್ತಷ್ಟು ಅಪಾಯಕ್ಕೆ ಸಿಲುಕುವ ಸಾಧ್ಯತೆಯಿದೆ. ಜೊತೆಗೆ, ಈ ರಸ್ತೆಯು ಬಹುತೇಕ ಏಕಪಥ ರಸ್ತೆಯಾಗಿದ್ದು, ತೀವ್ರ ತಿರುವುಗಳು ಹಾಗೂ ಕಡಿದಾದ ಏರಿಗಳಿಂದ ಕೂಡಿದೆ. ಮಳೆಯಿಂದಾಗಿ ರಸ್ತೆಯ ಇಕ್ಕೆಲಗಳ ಮಣ್ಣು ಕೊಚ್ಚಿಹೋಗಿ ಭಾರಿ ವಾಹನಗಳ ಚಕ್ರಗಳು ಹೂತುಹೋಗುವ ಮತ್ತು ಅಪಘಾತಗಳು ಸಂಭವಿಸುವ ಗಂಭೀರ ಆತಂಕ ಎದುರಾಗಿರುವುದರಿಂದ ನಿರ್ಧಾರ ಕೈಗೊಳ್ಳಲಾಗಿದೆ.

ಚಿಕ್ಕಮಗಳೂರು ಮತ್ತು ನರಸಿಂಹರಾಜಪುರ ಕಡೆಯಿಂದ ಸಂಚರಿಸುವ ಭಾರಿ ವಾಹನಗಳು ಇನ್ನು ಮುಂದೆ ಬಾಳೆಹೊನ್ನೂರು, ಮಾಗುಂಡಿ, ಕಳಸ ಹಾಗೂ ಕುದುರೆಮುಖ ಮಾರ್ಗವಾಗಿ ಎಸ್.ಕೆ. ಬಾರ್ಡರ್ ತಲುಪಬೇಕಾಗುತ್ತದೆ. ಇನ್ನು ಕೊಪ್ಪ ಕಡೆಯಿಂದ ಬರುವ ಭಾರಿ ವಾಹನಗಳು ಕೊಪ್ಪ, ಜಯಪುರ, ಬಾಳೆಹೊನ್ನೂರು, ಮಾಗುಂಡಿ, ಕಳಸ ಮತ್ತು ಕುದುರೆಮುಖ ರಸ್ತೆಯ ಮೂಲಕ ಎಸ್.ಕೆ. ಬಾರ್ಡರ್ ಕಡೆಗೆ ಸಾಗಲು ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ. ವಾಹನ ಸವಾರರು ಮತ್ತು ಸಾರ್ವಜನಿಕರು ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತದೊಂದಿಗೆ ಸಹಕರಿಸಿ ಈ ಬದಲಿ ಮಾರ್ಗಗಳನ್ನು ಬಳಸಬೇಕಾಗಿ ವಿನಂತಿಸಲಾಗಿದೆ.

Heavy vehicle traffic banned from Thanikode to SK border

Share

Leave a comment

Leave a Reply

Your email address will not be published. Required fields are marked *

Don't Miss

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಚಿಕ್ಕಮಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರಾಜ್ಯ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ ನ್ಯಾಯಾಲಯವು ಮಹತ್ವದ ಶಿಕ್ಷೆ ಪ್ರಕಟಿಸಿದೆ. ಹಣದ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ...

Related Articles

ಮೆಡಿಕಲ್ ಅಂಗಡಿಗೆ ಕನ್ನ : ₹2.66 ಲಕ್ಷ ನಗದು ದೋಚಿ ಪರಾರಿ

ಚಿಕ್ಕಮಗಳೂರು;  ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ತಡರಾತ್ರಿ ನಡೆದ ಕಳ್ಳತನ ಪ್ರಕರಣ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪಟ್ಟಣದ...

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್...

ಸಾಲ ತೀರಿಸಲಾಗದೆ ರೈತ ಬೆಂಕಿ ಹಚ್ಚಿಕೊಂಡು ಸಾವು

ಕಡೂರು: ಜಮೀನಿನ ಅಭಿವೃದ್ಧಿ ಹಾಗೂ ಬೆಳೆಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ ತೀವ್ರವಾಗಿ ಕೊರಗುತ್ತಿದ್ದ ಕನ್ನೇನಹಳ್ಳಿಯ ರೈತರೊಬ್ಬರು...