Home namma chikmagalur chikamagalur ಶಿವಮೊಗ್ಗ-ಶೃಂಗೇರಿ ಮಾರ್ಗ ಪರಿಗಣಿಸಿ
chikamagalurHomeLatest Newsnamma chikmagalur

ಶಿವಮೊಗ್ಗ-ಶೃಂಗೇರಿ ಮಾರ್ಗ ಪರಿಗಣಿಸಿ

Share
Share

ಚಿಕ್ಕಮಗಳೂರು: ನೂತನ ರೈಲ್ವೆ ಯೋಜನೆಗೆ ಅಂತಿಮ ಸ್ಥಳ ನಿರ್ಧಾರ ಸಮೀಕ್ಷೆ ಮಾಡುವ ವೇಳೆ ಶಿವಮೊಗ್ಗ, ಭದ್ರಾವತಿ, ಮುತ್ತಿನಕೊಪ್ಪ, ಎನ್.ಆರ್.ಪುರ, ಬಾಳೆಹೊನ್ನೂರು, ಜಯಪುರ, ಕೊಪ್ಪ, ಹರಿಹರಪುರ, ಶೃಂಗೇರಿ ರೈಲ್ವೆ ಮಾರ್ಗವನ್ನು ಪ್ರಮುಖವಾಗಿ ಪರಿಗಣಿಸಬೇಕು ಎಂದು ಜೆಡಿಎಸ್ ರಾಷ್ಟ್ರೀಯ ವಕ್ತಾರ ಸುಧಾಕರ ಶೆಟ್ಟಿ ಭಾರತೀಯ ರೈಲ್ವೆ ಮೈಸೂರು ವಿಭಾಗದ ವಿಭಾಗಿಯ ರೈಲ್ವೆ ವ್ಯವಸ್ಥೆ ಮಾಡಿ ಮನವಿ ಸಲ್ಲಿಸಿದರು.

ಪ್ರಸ್ತಾವಿತ ರೈಲ್ವೇ ಮಾರ್ಗದ ಶಿವಮೊಗ್ಗ ಪ್ರಮುಖ ವಾಣಿಜ್ಯ ನಗರವಾಗಿದ್ದರೆ, ಭದ್ರಾವತಿ ಕೈಗಾರಿಕಾ ನಗರವಾಗಿದೆ. ಎನ್.ಆರ್.ಪುರ ಸ್ವಾತಂತ್ರ್ಯ ಪೂರ್ವದಿಂದಲೂ ಶಿವಮೊಗ್ಗದೊಂದಿಗೆ ರೈಲ್ವೆ ಸಂಪರ್ಕ ಹೊಂದಿದ ಇತಿಹಾಸ ಹೊಂದಿದೆ. ಬಾಳೆಹೊನ್ನೂರಿನಲ್ಲಿ ವಿಶ್ವ ಪ್ರಸಿದ್ಧ ಶ್ರೀ ರಂಭಾಪುರಿ ಮಹಾಸಂಸ್ಥಾನ ಮಠವಿದೆ.

ಕೊಪ್ಪ ಮಲೆನಾಡಿನ ಪ್ರಮುಖ ವಾಣಿಜ್ಯ, ಶಿಕ್ಷಣ ಮತ್ತು ಆಡಳಿತ ಕೇಂದ್ರವಾಗಿದೆ. ಹರಪುರದಲ್ಲಿ ಐತಿಹಾಸಿಕ ಶ್ರೀ ಲಕ್ಷ್ಮಿ ನರಸಿಂಹ ದೇವಸ್ಥಾನವಿದೆ. ಇನ್ನು ಶೃಂಗೇರಿಗೆ ಪ್ರತಿದಿನ ಹತ್ತಾರು ಸಾವಿರ ಜನ ಶ್ರೀ ಶಾರದಾ ಪೀಠಕ್ಕೆ ಆಗಮಿಸುತ್ತಾರೆ. ಹೀಗಾಗಿ ಈ ಮಾರ್ಗದಲ್ಲಿ ರೈಲ್ವೆ ಯೋಜನೆ ಆರಂಭಿಸುವುದು ಅತಿ ಸೂಕ್ತ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಶೃಂಗೇರಿ ವಿಧಾನಸಭಾ ಕ್ಷೇತ್ರ ಕರ್ನಾಟಕದ ಅತ್ಯಂತ ಸುಂದರವಾದ ಮಲೆನಾಡು ಪ್ರದೇಶವಾಗಿದ್ದರೂ, ಅಭಿವೃದ್ಧಿಯ ದೃಷ್ಟಿಯಿಂದ ಇನ್ನೂ ಹಿಂದುಳಿದಿದೆ. ಈ ಭಾಗಕ್ಕೆ ರೈಲ್ವೆ, ವಿಮಾನ ಸಂಪರ್ಕವೇ ಇಲ್ಲ. ಇದೇ ಕಾರಣದಿಂದ ಕೈಗಾರಿಕಾ ವಲಯಗಳು ದೊಡ್ಡ ದೊಡ್ಡ ಕೈಗಾರಿಕೆಗಳು ಮಾಹಿತಿ ತಂತ್ರಜ್ಞಾನ ಅಥವಾ ಸಾಫ್ಟ್ವೇರ್ ಕಂಪನಿಗಳು ಬರುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಭಾಗದಲ್ಲಿ ಯಾವುದೇ ಸಾರಿಗೆ ಸೌಕರ್ಯ ಇಲ್ಲದಿರುವುದರಿಂದ ಪ್ರತಿವರ್ಷ ಶಿಕ್ಷಣ ಪೂರ್ಣಗೊಳಿಸುವ ನಾಲ್ಕು ಸಾವಿರಕ್ಕೂ ಹೆಚ್ಚು ಯುವ ಜನತೆ ಉದ್ಯೋಗ ಅರಸಿ ಬೆಂಗಳೂರು, ಮೈಸೂರು, ಮಂಗಳೂರು, ಶಿವಮೊಗ್ಗ ನಗರಗಳಿಗೆ ವಲಸೆ ಹೋಗಬೇಕಾದ ಪರಿಸ್ಥಿತಿ ಇದೆ.

ಹೊಸ ರೈಲ್ವೆ ಮಾರ್ಗ ನಿರ್ಮಾಣಗೊಂಡರೆ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಪ್ರತಿದಿನ ದೊಡ್ಡ ದೊಡ್ಡ ನಗರಗಳಿಗೆ ತೆರಳಬಹುದಾಗಿದೆ. ಅಲ್ಲದೆ ರೋಗಿಗಳು ಕಡಿಮೆ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಇರುವ ನಗರಗಳಿಗೆ ತೆರಳಬಹುದಾಗಿದೆ. ಇನ್ನು ರೈತರು ತಾವು ಬಡಿತ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳನ್ನು ಸುಲಭವಾಗಿ ಮಾರುಕಟ್ಟೆಗೆ ಸಾಗಿಸಲು ಅನುಕೂಲವಾಗುತ್ತದೆ ಎಂದು ಮನವಿಯಲ್ಲಿ ಸವಿಸ್ತಾರವಾಗಿ ತಿಳಿಸಿದ್ದಾರೆ.

ರೈಲ್ವೆ ಯೋಜನೆಯಿಂದ ದೇಶದ ವಿವಿಧ ಭಾಗಗಳ ಹೂಡಿಕೆದಾರರು ಮಲೆನಾಡಿನಲ್ಲಿ ತಮ್ಮ ಉದ್ಯಮ ಆರಂಭಿಸಲು ಮುಂದೆ ಬರುತ್ತಾರೆ. ಪ್ರಮುಖವಾಗಿ ಅಡಕೆ ಕಾಫಿ ಕಾಳು ಮೆಣಸು ಅರಿಶಿನ ಮುಂತಾದ ಉತ್ಪನ್ನಗಳ ಮೌಲ್ಯವರ್ಧಿತ ಸಂಸ್ಕರಣ ಘಟಕಗಳು, ಗೋದಾಮುಗಳು, ಲಾಜಿಸ್ಟಿಕ್ ಪಾರ್ಕ್ಗಳು ಸ್ಥಾಪನೆಗೊಳ್ಳುತ್ತವೆ. ಇದರಿಂದ ಮಲೆನಾಡಿನ ಆರ್ಥಿಕ ಚಿತ್ರಣವೇ ಬದಲಾಗುತ್ತದೆ. ಇದೆಲ್ಲವಕ್ಕಿಂತಲೂ ಮುಖ್ಯವಾಗಿ ಧಾರ್ಮಿಕ ಹಾಗೂ ಪರಿಸರ ಪ್ರವಾಸೋದ್ಯಮಕ್ಕೆ ಹೊಸ ಉತ್ತೇಜನ ಸಿಗಲಿದೆ ಎಂದು ವಿವರಿಸಿದ್ದಾರೆ.

ಗೀ ಎಲ್ಲಾ ಅಂಶಗಳನ್ನು ಪರಿಗಣಿಸಿ ಶಿವಮೊಗ್ಗ ಶೃಂಗೇರಿ ರೈಲ್ವೆ ಮಾರ್ಗವು ಕೇವಲ ಒಂದು ರೈಲ್ವೆ ಮಾರ್ಗ ಮಾತ್ರವಲ್ಲ. ಬದಲಾಗಿ ಮಲೆನಾಡಿನ ಲಕ್ಷಾಂತರ ಜನರ ಭವಿಷ್ಯ, ಅಭಿವೃದ್ಧಿ, ಉದ್ಯೋಗ, ಕೃಷಿ, ಶಿಕ್ಷಣ, ಪ್ರವಾಸೋದ್ಯಮ ಹಾಗೂ ಸಮಗ್ರ ಆರ್ಥಿಕ ಪ್ರಗತಿಗೆ ಜೀವನಾಡಿಯಾಗಿದ ರಾಷ್ಟ್ರೀಯ ಮಹತ್ವದ ಯೋಜನೆಯಾಗಿದೆ ಎನ್ನುವುದನ್ನು ಮನಗಾಣಬೇಕು ಎಂದು ಮನವಿ ಮಾಡಿದ್ದಾರೆ.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಮೈಸೂರು ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಅಧ್ಯಕ್ಷ ಲಿಂಗರಾಜು ಉಪಸ್ಥಿತರಿದ್ದರು.

Consider the Shivamogga-Sringeri route.

Share

Leave a comment

Leave a Reply

Your email address will not be published. Required fields are marked *

Don't Miss

ಬೆಳವಾಡಿ ಕೆರೆಗೆ ಎತ್ತಿನಹೊಳೆ ನೀರು-ರೈತರಲ್ಲಿ ಸಂತಸ

ಚಿಕ್ಕಮಗಳೂರು: ಎತ್ತಿನಹೊಳೆ ಯೋಜನೆಯ ನೀರಿನಿಂದ ಚಿಕ್ಕಮಗಳೂರು ತಾಲೂಕಿನ ಲಕ್ಯಾ ಹೋಬಳಿಯ ಬೆಳವಾಡಿ ಕೆರೆ ತುಂಬಿ ಕೋಡಿ ಬಿದ್ದ ಹಿನ್ನೆಲೆಯಲ್ಲಿ ಶಾಸಕ ಹೆಚ್.ಡಿ.ತಮ್ಮಯ್ಯ ಹಾಗೂ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಅವರು...

`ನಾನು’ ಎಂಬುದನ್ನು ಬಿಟ್ಟು `ನಾವು’ ಎಂಬ ಮನೋಭಾವ ಬೆಳೆಸಿಕೊಳ್ಳಿ

ಚಿಕ್ಕಮಗಳೂರು: `ನಾನು ಮಾಡಿದ್ದು, ನಾನು ಮಾಡಿದ್ದು’ ಎನ್ನುವುದಕ್ಕಿಂತ `ನಾವು ಮಾಡಿದ್ದು’ ಎಂಬ ಮನೋಭಾವ ಬೆಳೆಸಿಕೊಳ್ಳಬೇಕು. ಜನರ ಆಶೀರ್ವಾದದಿಂದಲೇ ಜನಪ್ರತಿನಿಧಿಗಳು ಅಧಿಕಾರಕ್ಕೆ ಬರುತ್ತಾರೆ. ಅಭಿವೃದ್ಧಿ ಕಾರ್ಯಗಳಿಗೆ ವೈಯಕ್ತಿಕ ಹಕ್ಕು ಸಾಧಿಸುವ ಬದಲು ಎಲ್ಲರ...

Related Articles

ಮುಖ್ಯಮಂತ್ರಿ ಸೂಕ್ತ ಭದ್ರತಾ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಮುಖ್ಯಮಂತ್ರಿಗಳ ಜಿಲ್ಲಾ ಭೇಟಿಯ ಸಂದರ್ಭದಲ್ಲಿ ಸೂಕ್ತ ರೀತಿಯಲ್ಲಿ ಭದ್ರತಾ ವ್ಯವಸ್ಥೆ ಕಲ್ಪಿಸುವುದಲ್ಲದೆ, ಶಿಷ್ಟಾಚಾರ ಪಾಲನೆಗೆ...

ಎಂ.ಸಿ. ಹಳ್ಳಿಯಲ್ಲಿ ಕಡವೆ ಬೇಟೆ-ಆರೋಪಿಗಳ ಬಂಧನ

ತರೀಕೆರೆ: ಲಕ್ಕವಳ್ಳಿ ವಲಯದ ಎಂ.ಸಿ. ಹಳ್ಳಿ ಶಾಖೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಡವೆಯನ್ನು ಬೇಟೆ ಮಾಡಿ ಮಾಂಸ...

ಸೆ.21ರಿಂದ ಮುಖ್ಯಮಂತ್ರಿ ನಿವಾಸದವರೆಗೆ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು: ಹೊರಗುತ್ತಿಗೆ ಪೌರನೀರು ಸರಬರಾಜು ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ ಅಥವಾ ನೇರಪಾವತಿ...

 ವಿಶ್ವಕರ್ಮ ಸಮುದಾಯ ಎಲ್ಲ ರಂಗಗಳಲ್ಲೂ ಮುಂಚೂಣಿಗೆ ಬರಲಿ

ಚಿಕ್ಕಮಗಳೂರು: ವಿಶ್ವಕರ್ಮ ಸಮುದಾಯ ಎಲ್ಲ ರಂಗಗಳಲ್ಲೂ ಮುಂಚೂಣಿಗೆ ಬರಬೇಕು ಎಂದು ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ...