Home Crime News ಮಹಿಳೆ ಗಮನ ಬೇರೆಡೆ ಸೆಳೆದು ₹ 3.90 ಲಕ್ಷ ವಂಚನೆ
Crime NewsHomeKadurLatest Newsnamma chikmagalur

ಮಹಿಳೆ ಗಮನ ಬೇರೆಡೆ ಸೆಳೆದು ₹ 3.90 ಲಕ್ಷ ವಂಚನೆ

Share
Share

ಕಡೂರು: ಕಳೆದ ಜೂನ್‌ನಲ್ಲಿ ಗಮನ ಬೇರೆಡೆಗೆ ಸೆಳೆದು ಗ್ರಾಹಕರೋರ್ವರ ಖಾತೆಯಿಂದ ₹3.90 ಲಕ್ಷಡ್ರಾ ಮಾಡಿರುವ ಪ್ರಕರಣ ಕುರಿತು ಮಹಿಳೆಯೊಬ್ಬರುಕಡೂರು ಪೊಲೀಸರಿಗೆ ಗುರುವಾರ ದೂರು ನೀಡಿದ್ದಾರೆ.

ತಾಲೂಕಿನ ಚಿಕ್ಕಪಟ್ಟಣಗೆರೆಯ ಸುನಂದ ಟಿ.ಎಂ. ಎಂಬವರು ತಮ್ಮ ಖಾತೆಯಿಂದ ಹಣ ಡ್ರಾ ಮಾಡಲೆಂದು ಕಡೂರು ಪಟ್ಟಣದಜೈನ್‌ ಟೆಂಪಲ್‌ ರಸ್ತೆಯ ಕೆನರಾಬ್ಯಾಂಕ್ ಎ.ಟಿ.ಎಂ.ಗೆ ಹೋಗಿ ದ್ದರು.

ಈ ವೇಳೆ ಅಲ್ಲಿದ್ದ ಅಪರಿಚಿತ ವ್ಯಕ್ತಿಯು ಸುನಂದಾ ಅವರ ಗಮನವನ್ನು ಬೇರೆಡೆಗೆ ಸೆಳೆದು ಎ.ಟಿ.ಎಂ.ಪಾಸ್ ವರ್ಡ್ ತಿಳಿದುಕೊಂಡಿದ್ದಾನೆ. ಅಲ್ಲದೆ, ಸುನಂದಾ ಅವರು ನೀಡಿದ್ದ ಎ.ಟಿ. ಎಂ. ಕಾರ್ಡ್ ಪಡೆದು ಆತನ ಬಳಿಯಿದ್ದ ಇನ್ಯಾವುದೋ ಎ.ಟಿ.ಎಂ. ಅನ್ನು ನೀಡಿದ್ದಾನೆ.

ಬಳಿಕ ಸುನಂದಾ ಟಿ.ಎಂ. ಅವರ ಕೆನರಾ ಬ್ಯಾಂಕ್ ಖಾತೆಯಿಂದ ಒಟ್ಟು * 3.90 ಲಕ್ಷ ಹಣವನ್ನು ಹಲವಾರು ಬಾರಿ ಎಟಿಎಂನಿಂದ ಪಡೆಯುವ ಮೂಲಕವಂಚಿಸಿದ್ದಾನೆ. ಈಬಗ್ಗೆ ಯಾವುದೇ ಮಾಹಿತಿ ಅರಿವಿಗೆ ಬಾರದ ಸುನಂದಾ ತನ್ನ ಅಕೌಂಟ್‌ನಲ್ಲಿನ ಹಣದ ವಿವರ ಪರಿಶೀಲಿಸಲು ಮುಂದಾದಾಗ ತಾನು ವಂಚನೆಗೆ ಒಳಗಾಗಿರುವುದು ಗೊತ್ತಾಗಿದೆ.

ಬಳಿಕ ಎಟಿಎಂ ಬಳಿ ತನಗೆ ಸಹಾಯ ಮಾಡುವ ನೆಪದಲ್ಲಿ ಬಂದಿದ್ದ ಅಪರಿಚಿತನ ಪತ್ತೆ ಹಚ್ಚಿ, ಸೂಕ್ತ ಕಾನೂನು ಕ್ರಮ ಕೈಗೊಂಡು ಕಳೆದುಕೊಂಡಿರುವ ಹಣ ಪತ್ತೆ ಕೊಡಿಸುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ.

Woman cheated of ₹ 3.90 lakh by diverting attention

Share

Leave a comment

Leave a Reply

Your email address will not be published. Required fields are marked *

Don't Miss

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು. ಶೃಂಗೇರಿ ತಾಲೂಕಿನ ಬುಕ್ಕಡಿಬೈಲು ಗ್ರಾಮದ ನಿವಾಸಿಯಾಗಿರುವ ಬಿ.ಜಿ. ಕೃಷ್ಣಮೂರ್ತಿ ವಿರುದ್ಧ ಕರ್ನಾಟಕದಲ್ಲಿ ಒಟ್ಟು 54...

ವಾಹನಗಳ ಮಿರರ್ ತಗುಲಿ-ಕತ್ತಿ-ಬಂದೂಕು ಝಳಪಿಸಿದ ಗಲಾಟೆ

ಚಿಕ್ಕಮಗಳೂರು: ವಾಹನಗಳ ಮಿರರ್ ಪರಸ್ಪರ ತಗುಲಿದ ಸಣ್ಣ ವಿಚಾರ ಕತ್ತಿ-ಬಂದೂಕು ಝಳಪಿಸುವ ಹಂತಕ್ಕೆ ತಲುಪಿರುವ ಆರೋಪವೊಂದು ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಸರವಳ್ಳಿ ಗ್ರಾಮದಲ್ಲಿ ಜುಲೈ 2...

Related Articles

ಶಿವಮೊಗ್ಗ-ಶೃಂಗೇರಿ ಮಾರ್ಗ ಪರಿಗಣಿಸಿ

ಚಿಕ್ಕಮಗಳೂರು: ನೂತನ ರೈಲ್ವೆ ಯೋಜನೆಗೆ ಅಂತಿಮ ಸ್ಥಳ ನಿರ್ಧಾರ ಸಮೀಕ್ಷೆ ಮಾಡುವ ವೇಳೆ ಶಿವಮೊಗ್ಗ, ಭದ್ರಾವತಿ,...

ಕವಿಕಲ್ ಮಠದ ರಸ್ತೆಯಲ್ಲಿ ಹುಲಿ ದಿಢೀರನೆ ಪ್ರತ್ಯಕ್ಷ

ಚಿಕ್ಕಮಗಳೂರು: ಕಾಫಿನಾಡಿನ ಹಸಿರು ಕಾಡುಗಳ ನಡುವೆ ಸಂಚರಿಸುತ್ತಿದ್ದ ಪ್ರವಾಸಿಗರಿಗೆ ಮರೆಯಲಾಗದ ಅನುಭವವೊಂದು ಎದುರಾಗಿದೆ. ಚಿಕ್ಕಮಗಳೂರು ತಾಲೂಕಿನ...

ಭದ್ರಾ ಜಲಾಶಯದ ನೀರು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಲು ಸೂಚನೆ

ಚಿಕ್ಕಮಗಳೂರು: ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿಯುತ್ತಿದ್ದು,...

ಕಾಂಗ್ರೆಸ್ ನಲ್ಲಿ ಶಾಕರುಗಳ ಚೆಲ್ಲಾಟ.! ಮುಳುಗುತ್ತಿರುವ ಕಾರ್ಯಕರ್ತರು ?

ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ನಲ್ಲಿ ಶಾಸಕರುಗಳ ಚೆಲ್ಲಾಟದಿಂದಾಗಿ ಕಾರ್ಯಕರ್ತರು ನಲುಗಿದ್ದಾರೆ ಎಂದು ಹೇಳಲಾಗುತ್ತಿದೆ.ಅಧಿಕಾರ ಮದ,ಹಣ ಬಲದಿಂದ...