Home namma chikmagalur chikamagalur ಕೆಪಿಟಿಸಿಎಲ್ ಸಿಎಸ್‌ಆರ್ ಅನುದಾನ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಕಣ್ಣಾವಲಿಗೆ ನೆರವು
chikamagalurHomeLatest Newsnamma chikmagalur

ಕೆಪಿಟಿಸಿಎಲ್ ಸಿಎಸ್‌ಆರ್ ಅನುದಾನ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಕಣ್ಣಾವಲಿಗೆ ನೆರವು

Share
Share

ಚಿಕ್ಕಮಗಳೂರು: ಸರ್ಕಾರದ ಅನುದಾನದ ಕೊರತೆ ನಡುವೆ ಕೆಪಿಟಿಸಿಎಲ್ ಸಿಎಸ್‌ಆರ್ (ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿ) ಅನುದಾನ ಜಿಲ್ಲೆಯ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ವರವಾಗಿದೆ. ಅದರಲ್ಲೂ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಕಣ್ಣಾವಲಿಗೆ ನೆರವಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರು ಇಂಧನ ಸಚಿವರಾಗಿದ್ದು, ಕೆಪಿಟಿಸಿಎಲ್‌ನ ಸಿಎಸ್‌ಆರ್ ನಿಧಿ ಜಿಲ್ಲೆಗೆ ಹೆಚ್ಚಿನ ಪ್ರಮಾಣದಲ್ಲಿ ಬಳಕೆಯಾಗುತ್ತಿದೆ. ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಳ್ಳಬೇಟೆ ತಡೆ ಶಿಬಿರಗಳಲ್ಲಿ ಕಟ್ಟಡ ಮತ್ತು ಅಗತ್ಯ ಉಪಕರಣ ಒದಗಿಸಿದೆ. ಮೂಲಕ ಸೌಕರ್ಯಗಳ ಕೊರತೆಯಿಂದ ಬಳಲುತ್ತಿದ್ದ 21 ಶಿಬಿರಗಳಿಗೆ ಈ ಅನುದಾನ ದೊರಕಿದ್ದು. ತಲಾ ₹3 ಲಕ್ಷ ವೆಚ್ಚದಲ್ಲಿ ಈ ಶಿಬಿರಗಳನ್ನು ಬಲಪಡಿಸಲಾಗುತ್ತಿದೆ.

ಬೆಂಕಿಯಿಂದ ಕಾಡು ರಕ್ಷಣೆ ಮಾಡಲು ಮೂರು ಥರ್ಮಲ್ ಡೋನ್‌ಗಳನ್ನು ಕೆಪಿಟಿಸಿಎಲ್ ಒದಗಿಸಿದೆ. ವನ್ಯಜೀವಿಗಳ ಚಲನ -ವಲನ ಹಾಗೂ ಹುಲಿ ಗಣತಿಗೆ ನೆರವಾಗಲು 100 ಕ್ಯಾಮೆರಾ ಟ್ರ್ಯಾಪ್‌ಗಳನ್ನು ನೀಡಿದೆ. ಸಿಬ್ಬಂದಿ ಗಸ್ತು ತಿರುಗಲು ಒಂದು ಯಾಂತ್ರೀಕೃತ ದೋಣಿ ಮತ್ತು ಮುತ್ತೊಡಿಯಲ್ಲಿರುವ ಸೀಗೇಖಾನ್ ವಿಶ್ರಾಂತಿ ಗೃಹ ನವೀಕರಣ, ಪರಿಸರ ಪ್ರವಾಸೋದ್ಯಮಕ್ಕೆ ಅನುಕೂಲವಾಗುವಂತೆ ಮಿನಿ ಬಸ್ ಹಾಗೂ ಮುತ್ತೊಡಿ-ಮಲ್ಲಂದೂರು ರಸ್ತೆ ದುರಸ್ತಿಗೆ ₹2.58 ಕೋಟಿ ನೆರವು ನೀಡಿದೆ.

ಆರೋಗ್ಯ ಜಾಗೃತಿ ಮೂಡಿಸಲು ನಿಗಮವು ₹24 ಲಕ್ಷ ಒದಗಿಸಿದೆ. ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ ಆವರಣದಲ್ಲಿ ಗ್ರಂಥಾಲಯ ನಿರ್ಮಾಣಕ್ಕೆ ₹10 ಲಕ್ಷ ಅನುದಾನವನ್ನು ನೀಡಿದೆ. ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ₹ 29. 43 ಲಕ್ಷ ವೆಚ್ಚದಲ್ಲಿ ಅಂಬ್ಯುಲೆನ್ಸ್ ಒದಗಿಸಿದೆ. ಜೀವನ್ ಸಂಧ್ಯಾ ವೃದ್ಧಾಶ್ರಮದಲ್ಲಿ ಮೂಲ ಸೌಕರ್ಯ ಕಲ್ಪಿಸಲು ಅನುದಾನ, ಆರೋಗ್ಯ ಜಾಗೃತಿ ಕಾರ್ಯಕ್ರಮಗಳಿಗೆ ವಾಹನ ನೀಡಿದೆ.

ಚಿಕ್ಕಮಗಳೂರಿನ ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣದ ನಿರ್ಮಾಣಕ್ಕೆ ₹2 ಕೋಟಿ ಹಾಗೂ ಜಿಲ್ಲಾ ರೈಫಲ್ಸ್ ಮತ್ತು ಶಾಟ್‌ಗನ್ ಅಸೋಸಿಯೇಷನ್‌ ಮೂಲಸೌಕರ್ಯ ಅಭಿವೃದ್ಧಿಗೆ ₹1 ಕೋಟಿಯನ್ನು ನಿಗಮ ಒದಗಿಸಿದೆ.

ಜಿಲ್ಲೆಯ ಸರ್ಕಾರಿ ಶಾಲೆಗಳ ಬಲವರ್ಧನೆಗೂ ಕೆಪಿಟಿಸಿಎಲ್ ನಿಧಿ ಬಳಕೆ ಮಾಡಲಾಗುತ್ತಿದೆ. ಸಿರಿವಾಸೆ ಸರ್ಕಾರಿ ವಿವೇಕಾನಂದ ಪ್ರಾಥಮಿಕ ಶಾಲೆಗೆ ಪ್ಯಾನಲ್ ಟಿವಿ, ಕಂಪ್ಯೂಟರ್ ಹಾಗೂ ಒಂದನೇ ತರಗತಿಯಿಂದ ಹತ್ತನೇ ತರಗತಿ ತನಕ ಶಿಕ್ಷಣಕ್ಕೆ ನೆರವಾಗಲು ಸಂಯೋಜಿತ ಪಠ್ಯವನ್ನು ಒದಗಿಸಿದೆ.

ಕೆಂಪನಹಳ್ಳಿಯ ಆಶಾಕಿರಣ ಅಂಧ ಮಕ್ಕಳ ಶಾಲೆಗೆ₹ 16 ಲಕ್ಷ ವೆಚ್ಚದಲ್ಲಿ ಉಪಕರಣ ಒದಗಿಸಲಾಗಿದೆ. ಬಾಳೆಹೊನ್ನೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಸ್ಮಾರ್ಟ್ ಕ್ಲಾಸ್, ಕಡೂರಿನ ನಿವೇದಿತಾ ಶ್ರವಣದೋಷ ಮಕ್ಕಳ ಶಾಲೆಗೆ ₹20 ಲಕ್ಷ ನೀಡಿದೆ. ಅತ್ತಿಗುಂಡಿ ಗ್ರಾಮದ ಸರ್ಕಾರಿ ಶಾಲೆ ದುರಸ್ತಿಗೆ ₹8.5 ಲಕ್ಷ ನೆರವು ಬಂದಿದೆ.

KPTCL CSR grant helps in protecting Bhadra Tiger Reserve

Share

Leave a comment

Leave a Reply

Your email address will not be published. Required fields are marked *

Don't Miss

ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯದಿಂದಲೇ 12 ಸಾವಿರ ಕೋಟಿ ರೂ. ವೆಚ್ಚ

ಚಿಕ್ಕಮಗಳೂರು:  ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ೫,೩೦೦ ಕೋಟಿ ರೂ. ಘೋಷಿಸಿದ್ದ ಕೇಂದ್ರ ಸರ್ಕಾರ ಇದುವರೆಗೆ ನಯಾಪೈಸೆ ಬಿಡುಗಡೆ ಮಾಡಿಲ್ಲ. ಆದರೆ, ನಮ್ಮ ರಾಜ್ಯ ಸರ್ಕಾರ ಈಗಾಗಲೇ ತನ್ನ ಪಾಲಿನ ೧೨,೦೦೦...

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಬಿಜೆಪಿ ರಾಜಕೀಯ

ಕಡೂರು: ಚಿಕ್ಕಮಗಳೂರು ಜಿಲ್ಲಾ ಪ್ರವಾಸದಲ್ಲಿರುವ ಸಚಿವ ರಾಮಲಿಂಗಾರೆಡ್ಡಿ ಅವರು ರಾಜಕೀಯ ವಲಯದ ಪ್ರಮುಖ ವಿದ್ಯಮಾನಗಳು, ರಾಜ್ಯದ ಜಲವಿವಾದ ಹಾಗೂ ಸಚಿವ ಸಂಪುಟ ವಿಸ್ತರಣೆಯ ಕುರಿತಾಗಿ ಮಾಧ್ಯಮಗಳ ಎದುರು ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ....

Related Articles

ವಾಹನ ಡಿಕ್ಕಿಗೆ ಬೈಕ್ ಸವಾರ ಸಾವು

ಬೀರೂರು: ಕಡೂರು ತಾಲ್ಲೂಕಿನ ಹೇಮಗಿರಿ ಗೇಟ್ ಬಳಿಯ ಜಮೀನಿನಲ್ಲಿ ಕೆಲಸ ಮುಗಿಸಿ, ಅಜ್ಜಂಪುರ ಕಡೆಗೆ ಬೀರೂರು...

ಕಾಫಿ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಮನವಿ

ಚಿಕ್ಕಮಗಳೂರು: ಮೂಡಿಗೆರೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಇತ್ತೀಚೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ...

ದನ ಅಕ್ರಮ ಸಾಗಾಟ: ಪ್ರಕರಣ ದಾಖಲು

ಅಲ್ಲೂರು: ಇಲ್ಲಿಗೆ ಸಮೀಪದ ಹಾಂದಿಯ ಅಂಬೇಡ್ಕರ್ ವೃತ್ತದ ಬಳಿಯ ರಜಾ ಕ್ಯಾಂಟೀನ್ ಎದುರು 5 ವರ್ಷ...

ಅಕ್ರಮ ನುಸುಳುಕೋರರ ಮತಪಟ್ಟಿಗೆ ದಾಖಲಿಸದಂತೆ ಕ್ರಮವಹಿಸಿ

ಚಿಕ್ಕಮಗಳೂರು: ಎಸ್‌ಐಆರ್ ಸಂಬಂಧ ಬಿಎಲ್‌ಒ೨ಗಳು ಪಕ್ಷದ ಮತದಾರರನ್ನು ಪಟ್ಟಿ ಯಿಂದ ಕೈಜಾರದಂತೆ ಗಮನಹರಿಸುವ ಜೊತೆಗೆ ಅಕ್ರಮ...