Home namma chikmagalur chikamagalur ಎಟಿಎಂ ಕಾರ್ಡ್ ಬದಲಿಸಿ ₹3.09 ಲಕ್ಷ ವಂಚನೆ
chikamagalurHomeLatest Newsnamma chikmagalur

ಎಟಿಎಂ ಕಾರ್ಡ್ ಬದಲಿಸಿ ₹3.09 ಲಕ್ಷ ವಂಚನೆ

Share
Share

ಕಡೂರು: ಪಟ್ಟಣದ ಜೈನ್ ಟೆಂಪಲ್ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಹಣ ಹಿಂಪಡೆಯಲು ಯತ್ನಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಎಟಿಎಂ ಕಾರ್ಡ್ ಬದಲಿಸಿ, ಬಳಿಕ ಅದನ್ನು ದುರುಪಯೋಗಪಡಿಸಿಕೊಂಡು ₹3.09 ಲಕ್ಷ ವಂಚಿಸಿರುವ ಪ್ರಕರಣ ವರದಿಯಾಗಿದೆ.

ಚಿಕ್ಕಪಟ್ಟಣಗೆರೆ ಗ್ರಾಮದ ಸುನಂದಾ ಅವರು, ತಮ್ಮ ಪತಿಯ ಹೆಸರಿನಲ್ಲಿದ್ದ ಭೂಮಿಯನ್ನು ಮಾರಾಟ ಮಾಡಿ ಬಂದ ಹಣದಲ್ಲಿ ₹5 ಲಕ್ಷವನ್ನು ಕಡೂರು ಕೆನರಾ ಬ್ಯಾಂಕ್ ಖಾತೆಗೆ ಜಮಾಮಾಡಿದ್ದರು.
ಜೂನ್ ತಿಂಗಳಲ್ಲಿ ಪುತ್ರ ರಾಕೇಶ್ ಅವರು, ಕೆನರಾ ಬ್ಯಾಂಕ್ ಎಟಿಎಂನಲ್ಲಿ ಮೂರು ಬಾರಿ ಹಣ ಹಿಂಪಡೆಯಲು ಯತ್ನಿಸಿದರೂ ಹಣ ಬರಲಿಲ್ಲ.

ಈ ವೇಳೆ ಮಾಸ್ಕ್ ಧರಿಸಿದ್ದ ವ್ಯಕ್ತಿಯೊಬ್ಬ ನೆರವಾಗುವುದಾಗಿ ಹೇಳಿ ಎಟಿಎಂ ಕಾರ್ಡ್ ಪಡೆದು ಖಾತೆಯಲ್ಲಿನ ಬಾಕಿ ಮೊತ್ತ ಪರಿಶೀಲಿಸಿದ್ದಾನೆ. ಬಳಿಕ ‘ಹಣ ಬರುತ್ತಿಲ್ಲ’ ಎಂದು ಹೇಳಿ ಕಾರ್ಡ್ ಹಿಂತಿರುಗಿಸಿ ಸ್ಥಳದಿಂದ ತೆರಳಿದ್ದಾನೆ.

ಅದೇ ತಿಂಗಳಲ್ಲಿ ಸುನಂದಾ ಅವರು ಬ್ಯಾಂಕ್‌ನಿಂದ ₹2 ಲಕ್ಷ ನಗದು ಪಡೆದು ಸಂಬಂಧಿಕರೊಬ್ಬರಿಗೆ ಸಾಲ ತೀರಿಸಿದ್ದರು. ಬಳಿಕ, ಈ ತಿಂಗಳ 1ರಂದು ಮತ್ತೆ ಹಣ ಹಿಂಪಡೆಯಲು ಬ್ಯಾಂಕ್‌ಗೆ ತೆರಳಿದಾಗ ಖಾತೆಯಲ್ಲಿ ಹಣ ಇಲ್ಲ ಎಂದು ಬ್ಯಾಂಕ್ ಸಿಬ್ಬಂದಿ ತಿಳಿಸಿದ್ದಾರೆ.

ಎಟಿಎಂ ಕಾರ್ಡ್ ಪರಿಶೀಲಿಸಿ ದಾಗ ಅದು ಸುನಂದಾ ಅವರದ್ದಲ್ಲ ಎಂಬುದು ಗೊತ್ತಾಗಿದೆ. ಪಾಸ್‌ಬುಕ್ ಪರಿಶೀಲಿಸಿದಾಗ ಖಾತೆಯಿಂದ ₹3.09 ಲಕ್ಷ ಹಣ ಡ್ರಾ ಆಗಿರುವುದು ಬೆಳಕಿಗೆ ಬಂದಿದೆ.

ರಾಕೇಶ್ ಎಟಿಎಂನಲ್ಲಿ ಹಣ ಹಿಂಪಡೆಯಲು ಯತ್ನಿಸಿದ ವೇಳೆ ನೆರವಾಗುವ ನೆಪದಲ್ಲಿ ಬಂದಿದ್ದ ಅನಾಮಧೇಯ ವ್ಯಕ್ತಿ ಪಿನ್ ಸಂಖ್ಯೆ ಗಮನಿಸಿ, ಕಾರ್ಡ್ ಬದಲಿಸಿ ವಾಪಸ್ ನೀಡಿದ್ದಾನೆ. ಬಳಿಕ, ಮೂಲ ಕಾರ್ಡ್ ಬಳಸಿ ತಲಾ ₹10 ಸಾವಿರದಂತೆ 30 ಬಾರಿ ಹಾಗೂ ಒಮ್ಮೆ ₹9 ಸಾವಿರ ಸೇರಿ ಒಟ್ಟು ₹3.09 ಲಕ್ಷ ಹಣ ಹಿಂಪಡೆದು ವಂಚನೆ ಎಸಗಿದ್ದಾನೆ ಎಂದು ರಾಕೇಶ್ ನೀಡಿದ ದೂರಿನ ಮೇರೆಗೆ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

₹3.09 lakh fraud by changing ATM card

Share

Leave a comment

Leave a Reply

Your email address will not be published. Required fields are marked *

Don't Miss

ಕೆಎಸ್‌ಆರ್‌ಟಿಸಿ ಬಸ್‌ಗಾಗಿ ರಸ್ತೆಗಿಳಿದ ವಿದ್ಯಾರ್ಥಿಗಳು-ಗ್ರಾಮಸ್ಥರು

ಕಡೂರು: ಗ್ರಾಮೀಣ ಭಾಗದ ಕುಗ್ರಾಮಗಳಿಗೆ ಸಮರ್ಪಕ ಸಾರಿಗೆ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ಗ್ರಾಮಸ್ಥರು ರಸ್ತೆಗಿಳಿದು ಪ್ರತಿಭಟನೆ ನಡೆಸಿದ ಘಟನೆ ಕಡೂರು ತಾಲೂಕಿನ ಕಬ್ಬಳ್ಳಿ ಗೇಟ್ ಬಳಿ...

ವಿಶೇಷ ಅಧಿವೇಶನದಲ್ಲಿ ಪಕ್ಷಭೇದ ಮರೆತು ಮಲೆನಾಡಿನ ಸಮಸ್ಯೆ ಚರ್ಚಿಸಲು ಒತ್ತಾಯ

ಚಿಕ್ಕಮಗಳೂರು: ಕಸ್ತೂರಿರಂಗನ್ ವರದಿ ಕುರಿತು ಚರ್ಚಿಸಲು ರಾಜ್ಯ ಸರ್ಕಾರ ಸೆ.21, 22 ಮತ್ತು 23ರಂದು ಮೂರು ದಿನಗಳ ವಿಶೇಷ ಅಧಿವೇಶನ ಕರೆದಿರುವುದನ್ನು ಜಿಲ್ಲಾ ನಾಗರಿಕ ಮತ್ತು ರೈತ ಹೋರಾಟ ಸಮಿತಿ ಸ್ವಾಗತಿಸಿದೆ....

Related Articles

ಪೌರ ಕಾರ್ಮಿಕರಿಗೆ ಸವಲತ್ತು ಕಲ್ಪಿಸಿ

ಚಿಕ್ಕಮಗಳೂರು:  ಪೌರಕಾರ್ಮಿಕರಿಗೆ ವಸತಿ ಸೌಲಭ್ಯ, ರಜೆ, ಮಕ್ಕಳ ಶಿಕ್ಷಣ ಸೇರಿದಂತೆ ಅವರ ಕಲ್ಯಾಣಕ್ಕೆ ಅಗತ್ಯ ಸೌಕರ್ಯಗಳನ್ನು...

ಗ್ರೌಂಡ್ ಸರ್ವೇ ಅಗತ್ಯ-’ಕಾರ್ಬನ್ ಕ್ರೆಡಿಟ್ ನಿಗಮ’ ಸ್ಥಾಪನೆಗೆ ಪ್ರಸ್ತಾಪ

ಚಿಕ್ಕಮಗಳೂರು:  ಕೇಂದ್ರ ಸರ್ಕಾರ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ವಲಯಕ್ಕೆ  ಸಂಬಂಧಿಸಿದಂತೆ ಉಪಗ್ರಹ ಆಧಾರಿತ ಚಿತ್ರಣವನ್ನು...

ಮಾಂಸ ಮಾರಾಟ- ಮೂವರ ಬಂಧನ

ಎನ್.ಆ‌ರ್. ಪುರ: ಕಾಡಿನಲ್ಲಿ ಮೇಯುತ್ತಿದ್ದ ಜಾನುವಾರನ್ನು ಹಿಡಿದು ತಂದು ಎಸ್ಟೇಟ್‌ ನ ಕೂಲಿಲೈನ್ ಬಳಿ ಬರ್ಬರವಾಗಿ...

ನಕಲಿ ಬೀಗದ ಕೈ ಬಳಸಿ ಮನೆಯಲ್ಲಿದ್ದ ನಗ-ನಗದು ಕಳವು

ಚಿಕ್ಕಮಗಳೂರು: ಮನೆಯ ಯಜಮಾನರು ಹಬ್ಬದ ಸಂಭ್ರಮಕ್ಕೆಂದು ಊರಿಗೆ ತೆರಳಿದ್ದ ಸಮಯವನ್ನೇ ಹೊಂಚು ಹಾಕಿ ಕಾದು, ನಕಲಿ...