Home namma chikmagalur chikamagalur ದನ ಅಕ್ರಮ ಸಾಗಾಟ: ಪ್ರಕರಣ ದಾಖಲು
chikamagalurHomeLatest Newsnamma chikmagalur

ದನ ಅಕ್ರಮ ಸಾಗಾಟ: ಪ್ರಕರಣ ದಾಖಲು

Share
Share

ಅಲ್ಲೂರು: ಇಲ್ಲಿಗೆ ಸಮೀಪದ ಹಾಂದಿಯ ಅಂಬೇಡ್ಕರ್ ವೃತ್ತದ ಬಳಿಯ ರಜಾ ಕ್ಯಾಂಟೀನ್ ಎದುರು 5 ವರ್ಷ ವಯಸ್ಸಿನ ಹೋರಿಯನ್ನು ಪಿಕಪ್ ವಾಹನದಲ್ಲಿ ಶನಿವಾರ ಅಕ್ರಮವಾಗಿ ಸಾಗಿಸಲು ಪ್ರಯತ್ನಿಸುತ್ತಿದ್ದನ್ನು ಪೊಲೀಸರು ಪತ್ತೆಮಾಡಿದ್ದಾರೆ.

ಹೋರಿಯ ಕಾಲುಗಳನ್ನು ಕಟ್ಟಿ ಟಾರ್ಪಾಲಿನಿಂದ ಮುಚ್ಚಿ ಸಾಗಿಸಲು ಪ್ರಯತ್ನಿಸುತ್ತಿದ್ದಾಗ ಪೊಲೀಸರನ್ನು ಕಂಡು ಒಬ್ಬ ಆರೋಪಿ ವಾಹನದಿಂದ ಜಿಗಿದು ಓಡಿಹೋಗಿದ್ದ. ವಾಹನದಲ್ಲಿದ್ದ ಆರೋಪಿಗಳಾದ ಮಂಜುನಾಥ್, ಕಿರಣ್, ಮಹಮ್ಮದ್ ಮುಬಾರಕ್ ಅವರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು, ಹೋರಿಯನ್ನು ಸಬ್ಬೇನಹಳ್ಳಿಯಿಂದ ಕಸಾಯಿಖಾನೆಗೆ ಸಾಗಾಟ ಮಾಡಲು ಕೊಂಡೊಯ್ಯುತ್ತಿದ್ದೆವು ಎಂದು ಮಾಹಿತಿ ನೀಡಿದ್ದಾರೆ.

ಪೊಲೀಸರು ವಾಹನ ಮತ್ತು ಹೋರಿಯನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಹೋರಿ ₹15 ಸಾವಿರ ಮೌಲ್ಯದ್ದಾಗಿದೆ. ಹೋರಿಯನ್ನು ಇಂದಾವರದಲ್ಲಿರುವ ಗೋಶಾಲೆಗೆ ಕಳುಹಿಸಿಕೊಡಲಾಗಿದೆ ಎಂದು ಪಿಎಸ್‌ಐ ರವಿ ಜಿ.ಎ. ಮಾಹಿತಿ ನೀಡಿದರು.

ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ರವಿ, ಸಂದೀಪ್ ಎಂ.ಜಿ., ಪ್ರಸನ್ನ ಎಂ.ಎಚ್., ರಘು ಎಲ್.ಎಲ್., ಅಣ್ಣಪ್ಪ ಭಾಗವಹಿಸಿದ್ದರು.

Cattle smuggling: Case registered

Share

Leave a comment

Leave a Reply

Your email address will not be published. Required fields are marked *

Don't Miss

ಪ್ರವಾಸೋದ್ಯಮ ತಾಣಗಳಿಗೆ ಮೂಲಸೌಕರ್ಯಕ್ಕೆ ಆಗ್ರಹಿಸಿ ಕರವೇ ಧರಣಿ

ಚಿಕ್ಕಮಗಳೂರು:  ಮಲೆನಾಡಿನ ಪಶ್ಚಿಮ ಘಟ್ಟ ಪ್ರವಾಸೋದ್ಯಮದ ಹಲವಾರು ಸಮಸ್ಯೆಗಳ ನ್ನು ಪರಿಹರಿಸುವಲ್ಲಿ ವಿಫಲವಾಗಿರುವ ಜಿಲ್ಲಾಡಳಿತ ವಿರುದ್ಧ ಸೋಮವಾರ ಜಿಲ್ಲಾ ಕರವೇ (ಶಿವರಾಮೇ ಗೌಡ ಬಣ) ಮುಖಂಡರುಗಳು ಅರೆಬೆತ್ತಲಾಗಿ, ಬಾಯಿಗೆ ಕಪ್ಪುಪಟ್ಟಿ ಕಟ್ಟಿಕೊಂಡು,...

ಮಲ್ಲೇಗೌಡ ಆಸ್ಪತ್ರೆ ಆರೋಗ್ಯ ಸೇವೆ ಬಲಪಡಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಸೋಮವಾರ ಭೇಟಿ ನೀಡಿ ಆಸ್ಪತ್ರೆಯ ವಿವಿಧ ವಿಭಾಗಗಳ ಕಾರ್ಯವೈಖರಿ ಹಾಗೂ ಸಾರ್ವಜನಿಕರಿಗೆ ಸಿಗುತ್ತಿರುವ ಆರೋಗ್ಯ ಸೇವೆಗಳನ್ನು...

Related Articles

ಜಯಪುರ ಠಾಣೆಯ ಮಹಿಳಾ ಸಿಬ್ಬಂದಿಗೆ ಬಾಗಿನ

ಕೊಪ್ಪ : ಹಬ್ಬ-ಹರಿದಿನಗಳಲ್ಲೂ ಕರ್ತವ್ಯದಲ್ಲೇ ನಿರತರಾಗಿರುವ ಪೊಲೀಸ್ ಸಿಬ್ಬಂದಿಯ ಮೊಗದಲ್ಲಿ ಹಬ್ಬದ ಸಂಭ್ರಮ ಮೂಡಿಸುವ ಅರ್ಥಪೂರ್ಣ...

ಟ್ರಾಕ್ಟರ್ ಹರಿಸಿ ₹1.15 ಲಕ್ಷ ಮೌಲ್ಯದ ರಾಗಿ ಬೆಳೆ ನಾಶ

ತರೀಕೆರೆ : ನ್ಯಾಯಾಲಯದ ಸ್ಪಷ್ಟ ತಡೆಯಾಜ್ಞೆ ಇದ್ದರೂ ಅದ್ಯಾವುದನ್ನೂ ಲೆಕ್ಕಿಸದೆ, ಜಮೀನಿಗೆ ಅಕ್ರಮವಾಗಿ ನುಗ್ಗಿ ಕಟಾವಿಗೆ...

ಸಚಿವ ಕೃಷ್ಣಬೈರೇಗೌಡ ಹೇಳಿಕೆ ಖಂಡನೀಯ

ಚಿಕ್ಕಮಗಳೂರು- ಬೆಂಗಳೂರು ನಗರ ಪರಿಶೀಲನೆ ಮಾಡುವ ಸಂದರ್ಭದಲ್ಲಿ ಸಚಿವ ಕೃ?ಬೈರೇಗೌಡರು ಪೌರಕಾರ್ಮಿಕರ ಬಗ್ಗೆ ತುಚ್ಚವಾಗಿ ಮಾತನಾಡಿರುವುದನ್ನು...

ಮುಂದಿನ ದಿನಗಳಲ್ಲಿ ದೇವಾಲಯದ ಜಿರ್ಣೋದ್ದಾರಕ್ಕೆ ಅನುದಾನ

ಬೀರೂರು:ಕಾಂಗ್ರೆಸ್ ಸರಕಾರದಲ್ಲಿ ನನ್ನಂತ ಹಿಂದುಳಿದ ವರ್ಗದ ಶಾಸಕನಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಿದ ಮಾಜಿ ಮುಖ್ಯಮಂತ್ರಿ...