Home namma chikmagalur chikamagalur ಮೂಡಿಗೆರೆಯಲ್ಲಿ ಅಕ್ರಮ ಅಂದರ್-ಬಾಹರ್ ಜೂಜಾಟದ ಮೇಲೆ ಪೊಲೀಸರ ದಾಳಿ
chikamagalurCrime NewsHomeLatest Newsnamma chikmagalur

ಮೂಡಿಗೆರೆಯಲ್ಲಿ ಅಕ್ರಮ ಅಂದರ್-ಬಾಹರ್ ಜೂಜಾಟದ ಮೇಲೆ ಪೊಲೀಸರ ದಾಳಿ

Share
Share

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ಅಕ್ರಮವಾಗಿ ಅಂದರ್-ಬಾಹರ್ ಇಸ್ಪೀಟು ಜೂಜಾಟ ನಡೆಸುತ್ತಿದ್ದ ಸ್ಥಳದ ಮೇಲೆ ಮೂಡಿಗೆರೆ ಪೊಲೀಸರು ದಾಳಿ ನಡೆಸಿ, ಎಂಟು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಜುಲೈ 17ರಂದು ರಾತ್ರಿ 8.10ರ ಸುಮಾರಿಗೆ ಮೂಡಿಗೆರೆ ಪೊಲೀಸ್ ಠಾಣೆಯ ಪಿಎಸ್‌ಐ (ತನಿಖೆ) ಶಶಿ ಟಿ.ಕೆ. ಅವರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ, ಪೊಲೀಸ್ ಸಿಬ್ಬಂದಿಯೊಂದಿಗೆ ಛತ್ರಮೈದಾನದ ವಾಟರ್‌ಮ್ಯಾನ್ ಲೋಕೇಶ್ ಅವರ ಮನೆಯ ಹಿಂದಿನ ಖಾಲಿ ಜಾಗದ ಮೇಲೆ ದಾಳಿ ನಡೆಸಲಾಯಿತು.

ದಾಳಿಯ ವೇಳೆ ಎಂಟು ಮಂದಿ ನೆಲದ ಮೇಲೆ ಬೆಡ್‌ಶೀಟ್ ಹಾಸಿಕೊಂಡು ಹಣವನ್ನು ಪಣಕ್ಕಿಟ್ಟು ಅಂದರ್-ಬಾಹರ್ ಇಸ್ಪೀಟು ಜೂಜಾಟ ಆಡುತ್ತಿರುವುದು ಪತ್ತೆಯಾಗಿದೆ. ಪೊಲೀಸರು ಸ್ಥಳದಲ್ಲೇ ಆರೋಪಿಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದರು.

ಕಾರ್ಯಾಚರಣೆಯಲ್ಲಿ ಜೂಜಾಟಕ್ಕೆ ಬಳಸಲಾಗಿದ್ದ 52 ಇಸ್ಪೀಟು ಎಲೆಗಳು, ₹920 ನಗದು, ಒಂದು ಪಿಂಕ್-ಬೂದು ಬಣ್ಣದ ಬೆಡ್‌ಶೀಟ್ ಹಾಗೂ ಬೆಳಕಿಗೆ ಬಳಸುತ್ತಿದ್ದ ಚಾರ್ಜರ್ ಲೈಟ್ ಅನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸ್ವತ್ತುಗಳನ್ನು ಪಂಚರ ಸಮಕ್ಷಮದಲ್ಲಿ ಮಹಜರು ನಡೆಸಿ ಸೀಲ್ ಮಾಡಲಾಗಿದೆ.

ಪ್ರಕರಣದಲ್ಲಿ ಲೋಕೇಶ್, ಅಬೂಬಕರ್, ಇಬ್ರಾಹಿಂ, ಅನಿಲ್ ಕುಮಾರ್, ಇರ್ಫಾನ್, ಮುಸ್ತಾಕ್, ಅಶ್ವಥ್ ಹಾಗೂ ತೇಜಸ್ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಆರೋಪಿಗಳನ್ನಾಗಿ ದಾಖಲಿಸಲಾಗಿದೆ. ಪ್ರಕರಣ ದಾಖಲಾದ ನಂತರ ಠಾಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್ ನೀಡಲಾಗಿದ್ದು, ಸ್ಥಳದಲ್ಲಿಯೇ ಬಿಡುಗಡೆ ಮಾಡಲಾಗಿದೆ.

ಪೊಲೀಸರು ಮೊದಲಿಗೆ ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 87ರಡಿ ಅಸಂಜ್ಞೇಯ (ಎನ್‌ಸಿ) ಪ್ರಕರಣ ದಾಖಲಿಸಿ ನ್ಯಾಯಾಲಯದ ಅನುಮತಿ ಕೋರಿದ್ದರು. ಬಳಿಕ ನ್ಯಾಯಾಲಯದಿಂದ ಅನುಮತಿ ದೊರೆತ ಹಿನ್ನೆಲೆಯಲ್ಲಿ ಜುಲೈ 18ರಂದು ಆರೋಪಿಗಳ ವಿರುದ್ಧ ನಿಯಮಾನುಸಾರ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Police raid on illegal Andar-Bahar gambling in Mudigere

Share

Leave a comment

Leave a Reply

Your email address will not be published. Required fields are marked *

Don't Miss

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿಅಹ್ವಾನ

ಚಿಕ್ಕಮಗಳೂರು: ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳು ಒಳಗೊಂಡಂತೆ) ೨೦೨೬-೨೭ನೇ ಶೈಕ್ಷಣಿಕ ಸಾಲಿಗೆ ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ...

ಆಯುಷ್ಮಾನ್ ಆರೋಗ್ಯ ಕೇಂದ್ರದ ಕಾಮಗಾರಿಗೆ ಗುದ್ದಲಿ ಪೂಜೆ

ಚಿಕ್ಕಮಗಳೂರು: ಆರೋಗ್ಯ, ಶಿಕ್ಷಣ ಮತ್ತು ಜನರ ಬದುಕಿಗಾಗಿ ಆದ್ಯತೆಯ ಮೇಲೆ ಕೆಲಸ ಮಾಡಬೇಕಾಗಿರುವುದು ಚುನಾಯಿತ ಪ್ರತಿನಿಧಿಗಳ ಕರ್ತವ್ಯ ಆಗಿರುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ...

Related Articles

ಅಂಬೇಡ್ಕರ್ ವಸತಿ ಶಾಲೆಯಲ್ಲಿ ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ಅಂಬೇಡ್ಕರ್ ವಸತಿ ಶಾಲೆಯಲ್ಲಿ ಕಳಪೆ ಮಟ್ಟದ ಹಾಗೂ ಅರೆಬೆಂದ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ...

15.99 ಲಕ್ಷ ಜನರ ಸಂಧ್ಯಾ ಸುರಕ್ಷಾ ಯೋಜನೆಯ ರದ್ದು

ಚಿಕ್ಕಮಗಳೂರು: ರಾಜ್ಯ ಸರಕಾರ ನೀಡುತ್ತಿರುವ ಸಂಧ್ಯಾ ಸುರಕ್ಷಾ ಯೋಜನೆಯ ಪ್ರಯೋಜನ ೧೫.೯೯ ಲಕ್ಷ ಜನರಿಗೆ ರದ್ದಾಗಿದ್ದು...

ಅಯೋದ್ಯೆ ಹಣ ಕಳವು-ಸುಪ್ರೀಂನಿಂದ ಪಾರದರ್ಶಕ ತನಿಖೆಯಾಗಲಿ

ಚಿಕ್ಕಮಗಳೂರು: ಶ್ರೀರಾಮನ ಹೆಸರಲ್ಲಿ ಅಕಾರಕ್ಕೆ ಬಂದ ಬಿಜೆಪಿ ಶ್ರೀರಾಮನ ಟ್ರಸ್ಟ್ ಮೂಲಕ ಹಣಲೂಟಿ ಮಾಡಿದ್ದೇ ಸಾಧನೆಯಾಗಿದೆ....

ಚಿಕ್ಕಮಗಳೂರು ಜಿಲ್ಲೆಯ ಯಾರಿಗೂ ಸಚಿವ ಸ್ಥಾನವಿಲ್ಲ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಯಾವ ಶಾಸಕರಿಗೂ ಮಂತ್ರಿ ಸ್ಥಾನ ಸಿಗುವುದಿಲ್ಲ ಎಂದು ಖಚಿತ ಮಾಹಿತಿ ಇದೆ....