Home namma chikmagalur chikamagalur ಸಿಐಡಿ ಪೊಲೀಸ್ ರಿಂದ ಪಂಜರದಲ್ಲಿ ಬಂಧಿಸಿಟ್ಟಿದ ಕಾಡು ಗಿಳಿ ವಶ
chikamagalurCrime NewsHomeLatest Newsnamma chikmagalur

ಸಿಐಡಿ ಪೊಲೀಸ್ ರಿಂದ ಪಂಜರದಲ್ಲಿ ಬಂಧಿಸಿಟ್ಟಿದ ಕಾಡು ಗಿಳಿ ವಶ

Share
Share

ಚಿಕ್ಕಮಗಳೂರು : ಅಕ್ರಮವಾಗಿ ಪಂಜರದಲ್ಲಿ ಬಂಧಿಸಿಟ್ಟಿದ ಕಾಡು ಗಿಳಿಗಳನ್ನು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ವಶಕ್ಕೆ ಪಡೆದಿದೆ

ನಗರದ ಟಿಪ್ಪುನಗರದ ಚಾಮುಂಡಿ ಕಾಫಿ ಕ್ಯೂರಿಂಗ್ ಹಿಂಭಾಗದ ರಾಜಸ್ತಾನ ಕುಳ್ಳಿ ರಸ್ತೆಯ ನಿವಾಸಿಯೊಬ್ಬರು ಅಕ್ರಮವಾಗಿ ಪಂಜರದಲ್ಲಿ ಬಂಧಿಸಿಟ್ಟುಕೊಂಡಿದ್ದ ಎರಡು ಕಾಡು ಗಿಳಿಗಳನ್ನು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ಯಶಸ್ವಿಯಾಗಿ ವಶಪಡಿಸಿಕೊಂಡಿದೆ.

ಖಚಿತ ಸುಳಿವಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಗಿಳಿಗಳನ್ನು ಸಾಕುತ್ತಿದ್ದ ಸುರೇಶ್ ಎಂಬಾತನ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಮಿಂಚಿನ ದಾಳಿಯಲ್ಲಿ ಸುರೇಶ್ ವಶದಲ್ಲಿದ್ದ ಗಿಳಿಗಳನ್ನು ಪಂಜರದ ಸಹಿತ ವಶಕ್ಕೆ ಪಡೆಯಲಾಗಿದ್ದು, ಸೂಕ್ತ ಸಂರಕ್ಷಣೆಗಾಗಿ ಸ್ಥಳೀಯ ಆರ್‌ಎಫ್‌ಒ ಅವರ ಸುಪರ್ದಿಗೆ ಹಸ್ತಾಂತರಿಸಲಾಗಿದೆ. ಈ ಸಂಬಂಧ ನ್ಯಾಯಾಲಯಕ್ಕೆ ವರದಿಯನ್ನೂ ಸಲ್ಲಿಸಲಾಗಿದೆ.

ರಾಜ್ಯ ಸಿಐಡಿ ಅರಣ್ಯ ಘಟಕದ ಪೊಲೀಸ್ ಉಪ ಮಹಾನಿರೀಕ್ಷಕರಾದ ಜಿ.ಸಂಗೀತ ಹಾಗೂ ಮಡಿಕೇರಿ ಸಿಐಡಿ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಪವನ್ ನೆಜ್ಜುರು ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಉಪನಿರೀಕ್ಷಕ ಬಾಬುದ್ದೀನ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಕೃಷ್ಣರಾಜು ಅರಸ್, ಕೆ.ಎಸ್‌.ದಿಲೀಪ್, ಹೆಚ್.ನಟರಾಜ್, ಹಾಲೇಶ್, ಲೋಹಿತ್ ಸಿ.ಎಂ. ಹಾಗೂ ಚಾಲಕ ತಿಮ್ಮಶೆಟ್ಟಿ ಭಾಗವಹಿಸಿದ್ದರು.

CID police seize wild parrot kept in cage

Share

Leave a comment

Leave a Reply

Your email address will not be published. Required fields are marked *

Don't Miss

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ ಪರಿಷತ್ ಸ್ಥಾನಕ್ಕೆ ಆಯ್ಕೆಯಾಗಿದ್ದರ ಬಗ್ಗೆ ಎದುರಾಳಿ ಪಕ್ಷದ ಗಾಯಿತ್ರಿ ಶಾಂತೇಗೌಡ ಹೈಕೋರ್ಟಿನಲ್ಲಿ ತಕರಾರು ಸಲ್ಲಿಸಿದ್ದು...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ ರೂ.ಗಳ ಹಗರಣ ನಡೆಸಿರುವ ಪ್ರಕರಣವನ್ನು ಸಿಬಿಐ ಅಥವಾ ಇಡಿ ತನಿಖೆಗೆ ಒಪ್ಪಿಸಬೇಕೆಂದು ಜಿಲ್ಲಾ ಬಿಜೆಪಿ...

Related Articles

ವಿದ್ಯಾರ್ಥಿ ಹೋರಾಟವನ್ನು ಬೆಂಬಲಿಸಿ ಸಮಾನ ಮನಸ್ಕರ ಪ್ರತಿಭಟನೆ

ಚಿಕ್ಕಮಗಳೂರು : ನೀಟ್ ಪದೆಶ್ನೆ ಪತ್ರಿಕೆ ಸೋರಿಕೆ ತಡೆಯುವಲ್ಲಿ ವಿಫಲವಾಗಿರುವ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ...

ಸಖರಾಯಪಟ್ಟಣದಲ್ಲಿ ಹಣದ ವಿಷಯಕ್ಕೆ ಸ್ನೇಹಿತನೇ ಕೊಲೆ

ಕಡೂರು: ಅಪಘಾತದಲ್ಲಿ ಯುವಕ ಸಾವನ್ನಪ್ಪಿದ್ದ ಎಂದು ಭಾವಿಸಿದ್ದ ಪ್ರಕರಣ ತಿರುವು ಪಡೆದುಕೊಂಡಿದ್ದು, ಹಣದ ವಿಷಯಕ್ಕೆ ಸ್ನೇಹಿತನೇ...

ಸಹಾನುಭೂತಿ ಇಲ್ಲದ ಧರ್ಮೇಂದ್ರ ಪ್ರದಾನ್ ರಾಜೀನಾಮೆ ನೀಡಲಿ

ಚಿಕ್ಕಮಗಳೂರು: ವಿದ್ಯಾರ್ಥಿಗಳು ಹಾಗೂ ಯುವ ಜನತೆಯ ಬಗ್ಗೆ ಸಹಾನುಭೂತಿ ಇಲ್ಲದ ದೇಶದ ಶಿಕ್ಷಣ ಸಚಿವ ಧರ್ಮೇಂದ್ರ...

ಪೊಲೀಸ್ ಕರ್ತವ್ಯಕ್ಕೆ ಅಡ್ಡಿ- ಮೂವರ ವಿರುದ್ಧ ಕೊಪ್ಪ ಠಾಣೆಯಲ್ಲಿ ಪ್ರಕರಣ

ಕೊಪ್ಪ: ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ಮಾಡುತ್ತಿದ್ದವರನ್ನು ಸಮಾಧಾನಪಡಿಸಲು ತೆರಳಿದ್ದ ಪೊಲೀಸ್ ಸಿಬ್ಬಂದಿಯ ಮೊಬೈಲ್ ಫೋನ್ ಕಸಿದು...