Home namma chikmagalur chikamagalur ತೆಂಗಿನಕಾಯಿ ಕದ್ದ ಆರೋಪ: ಮಹಿಳೆ ಮೇಲೆ ಮೂವರಿಂದ ಹಲ್ಲೆ
chikamagalurCrime NewsHomeLatest Newsnamma chikmagalur

ತೆಂಗಿನಕಾಯಿ ಕದ್ದ ಆರೋಪ: ಮಹಿಳೆ ಮೇಲೆ ಮೂವರಿಂದ ಹಲ್ಲೆ

Share
Share

ಕಡೂರು: ತೆಂಗಿನಕಾಯಿ ಕದ್ದ ಆರೋಪದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರ ಮೇಲೆ ಮೂವರು ಪುರುಷರು ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಸಮೀಪದ ಪಾತೇನಗಳ್ಳಿ ಗ್ರಾಮದಲ್ಲಿ ನಡೆದಿದೆ.

ಹಲ್ಲೆಗೊಳಗಾದ ಮಹಿಳೆಯನ್ನು ಶಿವಮ್ಮ (32) ಎಂದು ಗುರುತಿಸಲಾಗಿದ್ದು, ಗಾಯಗೊಂಡ ಅವರನ್ನು ಕಡೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಾಹಿತಿಯ ಪ್ರಕಾರ, ಪಾತೇನಹಳ್ಳಿ ಗ್ರಾಮದ ಪಾಳುಬಿದ್ದ ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಶಿವಮ್ಮ ಅವರು ತೋಟದ ಮಾರ್ಗವಾಗಿ ಮತ್ತೊಂದು ಜಾಗಕ್ಕೆ ತೆರಳುತ್ತಿದ್ದ ವೇಳೆ, ಅವರ ಕೈಯಲ್ಲಿದ್ದ ತೆಂಗಿನಕಾಯಿಯನ್ನು ಗಮನಿಸಿದ ತೋಟದ ಮಾಲೀಕ ನವೀನ್, ಅದು ತಮ್ಮ ತೋಟದ್ದೇ ಎಂದು ಆರೋಪಿಸಿ ಜಗಳ ಆರಂಭಿಸಿದ್ದಾನೆ ಎನ್ನಲಾಗಿದೆ.

ಈ ವೇಳೆ, “ನಾನು ಕರೆದಾಗ ಬರುವುದಿಲ್ಲ, ಈಗ ತೆಂಗಿನಕಾಯಿ ತೆಗೆದುಕೊಂಡು ಹೋಗುತ್ತೀಯಾ” ಎಂದು ನಿಂದಿಸುತ್ತಾ ನವೀನ್ ಹಲ್ಲೆ ನಡೆಸಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ. ಬಳಿಕ ನವೀನ್ ಜೊತೆ ಕಲ್ಲೇಶ್ ಹಾಗೂ ದೀಪು ಕೂಡ ಸೇರಿಕೊಂಡು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಹಲ್ಲೆಯ ವೇಳೆ ಮಹಿಳೆಯ ಬಟ್ಟೆ ಹರಿದು, ಅವರನ್ನು ನೆಲಕ್ಕೆ ತಳ್ಳಿಹಾಕಿ ತುಳಿದಿರುವ ಆರೋಪವೂ ಕೇಳಿಬಂದಿದ್ದು, ಈ ಸಂಬಂಧ ನವೀನ್, ಕಲ್ಲೇಶ್ ಹಾಗೂ ದೀಪು ವಿರುದ್ಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ಕುರಿತು ಕಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Woman attacked by three people on charges of stealing coconuts

Share

Leave a comment

Leave a Reply

Your email address will not be published. Required fields are marked *

Don't Miss

ಭದ್ರಾ ಹುಲಿ ಸಂರಕ್ಷಿತ ಸಿಬ್ಬಂದಿಗಳಿಂದಲೇ ಮದ್ಯಪಾನ ಮೋಜು ಮಸ್ತಿ

ಚಿಕ್ಕಮಗಳೂರು: ಭದ್ರಾ ಹುಲಿ ಸಂರಕ್ಷಿತ ವ್ಯಾಪ್ತಿಯ ತಣಿಗೆಬೈಲು ವಲಯದ, ವಿರೂಪಾಕ್ಷ ಖಾನ್ ಚೆಕ್ ಪೋಸ್ಟ್ ನಲ್ಲಿ ಸಿಬ್ಬಂದಿಗಳು ಆಗಲು ರಾತ್ರಿ ಎನ್ನದೆ ಮದ್ಯಪಾನ ಮಾಡಿ ಮೋಜು ಮಸ್ತಿಯಲ್ಲಿ ತೊಡಗಿರುವುದು ಕಂಡುಬಂದಿದೆ , ಚೆಕ್...

ತೋಟಕ್ಕೆ ನೀರು ಬಿಡಲು ಹೋದ ಯುವತಿ ಅಪಹರಣ

ಅಜ್ಜಂಪುರ : ಯುವತಿಯೊಬ್ಬಳನ್ನು ಕಾರಿನಲ್ಲಿ ಬಲವಂತವಾಗಿ ಅಪಹರಿಸಿಕೊಂಡು ಹೋಗಿರುವ ಗಂಭೀರ ಆರೋಪ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯ ತ್ಯಾಗದಕಟ್ಟೆ ಗ್ರಾಮದಲ್ಲಿ ಕೇಳಿ ಬಂದಿದೆ. ಬೈರಪ್ಪ ಎಂಬುವವರ ಮಗಳು ಗಾಯತ್ರಿ...

Related Articles

ಮೇಡಿಕಲ್ ಅಂಗಡಿಯಲ್ಲಿ ನಗದು ಕಳವು ಆರೋಪಿ ಬಂದನ

ಶೃಂಗೇರಿ: ಪಟ್ಟಣದ ಭಾರತೀ ಬೀದಿಯಲ್ಲಿರುವ ಭಗವಾನ್ ಮೇಡಿಕಲ್ ಅಂಗಡಿಯಲ್ಲಿ ಜು.೭ರಂದು ಬೀಗ ಒಡೆದು ಬಾಗಿಲು ತೆರೆದು...

ನೀಟ್ ವಿದ್ಯಾರ್ಥಿಗಳ ಹಲ್ಲೆ ಖಂಡಿಸಿ ಸಿಪಿಐನಿಂದ ಪ್ರತಿಭಟನೆ

ಚಿಕ್ಕಮಗಳೂರು:  ನೀಟ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿ ಸಿಪಿಐ ತಾಲ್ಲೂಕು...

ಮಳೆಗಾಗಿ ಅಯ್ಯನಕೆರೆ, ಮದಗದಕೆರೆ ತಪ್ಪಲಿನಲ್ಲಿ ವಿಶೇಷ ಪೂಜೆ

ಚಿಕ್ಕಮಗಳೂರು: ಮಳೆ ಕೊರತೆಯಿಂದ ಆತಂಕಗೊಂಡಿರುವ ಕಡೂರು ತಾಲೂಕಿನ ಅಯ್ಯನಕೆರೆ ಹಾಗೂ ಮದಗದಕೆರೆ ತಪ್ಪಲಿನ ಗ್ರಾಮಸ್ಥರು ಉತ್ತಮ...

ಸಾಲು ಸಾಲು ರಸ್ತೆ ಅಪಘಾತ – 12ಕ್ಕೂ ಹೆಚ್ಚು ಮಂದಿ ಗಾಯ

ಚಿಕ್ಕಮಗಳೂರು: ಜಿಲ್ಲೆಯ ವಿವಿಧೆಡೆ ಸಂಭವಿಸಿದ ಸಾಲು ಸಾಲು ರಸ್ತೆ ಅಪಘಾತಗಳಲ್ಲಿ 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು...