Home namma chikmagalur chikamagalur ಶಾಹುರವರು ಜಾತೀಯತೆ ತೊಲಗಿಸಲು ಶ್ರಮಿಸಿದ ಮಾನವತಾವಧಿ
chikamagalurHomeLatest Newsnamma chikmagalur

ಶಾಹುರವರು ಜಾತೀಯತೆ ತೊಲಗಿಸಲು ಶ್ರಮಿಸಿದ ಮಾನವತಾವಧಿ

Share
Share

ಚಿಕ್ಕಮಗಳೂರು: ವೈಚಾರಿಕತೆಯ ಭದ್ರ ಬುನಾದಿಯನ್ನು ಸಾಮಾಜಿಕ ಪರಿವರ್ತನ ಚಳ ವಳಿಯ ಸಂದರ್ಭದಲ್ಲಿ ರಾಜಪ್ರಭುತ್ವದಲ್ಲಿ ಶಾಹೂ ಮಹಾರಾಜರು ಹಾಕಿದ್ದಾರೆ. ಅದರ ಫಲವನ್ನು ನಾವೀಗ ಪ್ರಜಾಪ್ರಭುತ್ವದಲ್ಲಿ ಅನುಭವಿಸುತ್ತಿದ್ದೇವೆ ಎಂದು ಬಿಎಸ್ಪಿ ರಾಜ್ಯ ಉಪಾಧ್ಯಕ್ಷ ಜಾಕೀರ್ ಹುಸೇನ್ ತಿಳಿಸಿದರು.

ನಗರದ ಬಿಎಸ್ಪಿ ಕಚೇರಿಯಲ್ಲಿ ಭಾನುವಾರ ಛತ್ರಪತಿ ಶಾಹೂ ಮಹಾರಾಜರ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು ಈ ರೀತಿಯ ಸಾಧನೆ ಮಾಡಿದ ಮಹನೀ ಯರ ಜಯಂತಿ ಆಚರಿಸುವ ಮೂಲಕ ಯುವಕರಿಗೆ ಸ್ಫೂರ್ತಿ ತುಂಬಬೇಕು ಎಂದರು.

ಶಾಹು ಮಹಾರಾಜರು ಜಾತೀಯತೆ ತೊಲಗಿಸಲು ಶ್ರಮಿಸಿದ ಮಹಾ ಮಾನವತಾವಧಿ. ಶೋಷಿತರು, ದಲಿತರ ಏಳಿಗಗೆ ದುಡಿದ ಮಹಾನೀಯರ ಜನ್ಮದಿನಾಚರಣೆ ಜೊತೆಗೆ ಅವರ ಆದರ್ಶ, ತತ್ವಸಿದ್ದಾಂತವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಈ ಮೂಲಕ ಸಮ ಸಮಾಜದ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೊಡುಗೆ ನೀಡಬೇಕು ಎಂದರು.

ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ.ರಾಧಾಕೃಷ್ಣ ಮಾತನಾಡಿ ಶಾಹು ಮಹಾರಾಜ್ ಅವರ ಕ್ರಾ ಂತಿಕಾರ ಹೆಜ್ಜೆಗಳಿಂದ ಅನೇಕ ಶೋಷಿತ ಹಾಗೂ ಹಿಂದುಳಿದ ಸಮುದಾಯದವರು ಮೇಲೆ ಬರಲು ಸಾಧ್ಯ ವಾಯಿತು. ಹೀಗಾಗಿ ತಳಸಮುದಾಯದವರು ಸದಾ ಶಾಹು ಮಹಾರಾಜರನ್ನು ಸ್ಮರಿಸಬೇಕು ಹಾಗೂ ಅವರ ಚಿಂತನೆ ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಎಸ್ಪಿ ಜಿಲ್ಲಾಧ್ಯಕ್ಷ ಪರಮೇಶ್ ಮಾತನಾಡಿದರು. ಈ ಸಂದರ್ಭದಲ್ಲಿ ಬಿಎಸ್ಪಿ ರಾಜ್ಯ ಕಾರ್ಯದರ್ಶಿಗಳಾದ ಪಿ ವೇಲಾಯುಧನ್, ಕೆ ಬಿ ಸುಧಾ, ಲೋಕಸಭಾ ಕ್ಷೇತ್ರದ ಸಂಯೋಜಕರಾದ ಬಿ.ಎಂ.ಶಂಕರ್, ಕೆ ಆರ್ ಗಂಗಾಧರ್, ಜಿಲ್ಲಾ ಸಂಯೋಜಕ ಯು ಬಿ.ಮಂಜಯ್ಯ, ಉಪಾಧ್ಯಕ್ಷರಾದ ಎಂ.ಬಾಬು, ಕೆ,ಎಸ್,ಮಂಜುಳ, ಕಾರ್ಯದರ್ಶಿ ಡಿ.ಪುಟ್ಟಸ್ವಾಮಿ ಭಾಗವ ಹಿಸಿದ್ದರು.

Shahu’s humane efforts to eradicate casteism

 

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ ಮೂರು ತಿಂಗಳಿಂದ ಪಿಂಚಣಿ ಹಣ ಸ್ಥಗಿತ

ಚಿಕ್ಕಮಗಳೂರು: ಸಾಮಾಜಿಕ ಭದ್ರತಾ ಯೋಜನೆಗಳಡಿ ವೃದ್ಧಾಪ್ಯ, ವಿಧವಾ ಸೇರಿದಂತೆ ವಿವಿಧ ಮಾಸಿಕ ಪಿಂಚಣಿಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ “ತಿಳುವಳಿಕೆ ಪತ್ರ” ನೀಡುವ ನೆಪದಲ್ಲಿ ಕಳೆದ ಸುಮಾರು ಮೂರು ತಿಂಗಳಿಂದ ಪಿಂಚಣಿ ಹಣ ತಡೆಹಿಡಿಯಲಾಗಿದೆ...

ಕಾಡುಕೋಣ ದಾಳಿಗೆ ಕಾರ್ಮಿಕ ಬಲಿ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡುಕೋಣಗಳ ಹಾವಳಿ ಮತ್ತೆ ಜೀವ ಬಲಿ ಪಡೆದಿದೆ. ಕೊಪ್ಪ ತಾಲೂಕಿನ ಅಗಳಗಂಡಿ ಸಮೀಪದ ದೋಣಿಹಡ್ಲು ಗ್ರಾಮದಲ್ಲಿ ಕಾಡುಕೋಣ ದಾಳಿಗೆ 45 ವರ್ಷದ ಮಂಜುನಾಥ್ ಮೃತಪಟ್ಟಿದ್ದಾರೆ. ಮಂಜುನಾಥ್...

Related Articles

ಯಗಟಿ ಸಮೀಪದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಬಲಿ

ಚಿಕ್ಕಮಗಳೂರು: ಕಾಡುಹಂದಿ ಬೇಟೆಗಾಗಿ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಸಿಕ್ಕಿಬೀಳುವ ಭೀತಿಯಿಂದ ಬೇಟೆಗಾರರು...

ಸಿ.ಟಿ.ರವಿಯನ್ನು ಇನ್ನೆರಡು ದಿನದಲ್ಲಿ ಬಂಧಿಸದಿದ್ದರೆ ಜಿಲ್ಲಾ ಬಂದ್‌

ಮೂಡಿಗೆರೆ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಸಮರ್ಥಿಸುವ ಭರದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು...

ಸಿ.ಟಿ.ರವಿಯಿಂದ ಸಮಾಜದಲ್ಲಿ ಸಾಮರಸ್ಯ ಕದಡುವ ಕೆಲಸ

ಚಿಕ್ಕಮಗಳೂರು : ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಮುಲ್ಲಾನ ಎದೆ ಸೀಳಿದರೆ ಮೂರಕ್ಷರ ಇಲ್ಲ...

ಎಲ್ಲಾ ಧರ್ಮದವರನ್ನು ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಎಲ್ಲಾ ಧರ್ಮದ ಜನರು ಪ್ರೀತಿ ಸ್ನೇಹದಿಂದ ಬದುಕುತ್ತಿರುವ ಇಂತಹ ಪರಂಪರೆಯನ್ನು ಗೌರವಿಸಬೇಕಾಗಿರುವುದು...