Home namma chikmagalur chikamagalur ಆಗಸ್ಟ್ 2ಕ್ಕೆ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಯ ಪರೀಕ್ಷೆಗೆ ನಿಷೇಧಾಜ್ಞೆ ಜಾರಿ
chikamagalurHomeLatest Newsnamma chikmagalur

ಆಗಸ್ಟ್ 2ಕ್ಕೆ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಯ ಪರೀಕ್ಷೆಗೆ ನಿಷೇಧಾಜ್ಞೆ ಜಾರಿ

Share
Share

ಚಿಕ್ಕಮಗಳೂರು: ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗಾಗಿ ಆಗಸ್ಟ್ ೨ ರಂದು ಲಿಖಿತ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ೧೬ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಜಿಲ್ಲಾ ದಂಡಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಭಂವರ್ ಸಿಂಗ್ ಮೀನಾ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ಈ ಪರೀಕ್ಷೆಯು ವಿದ್ಯಾರ್ಥಿಗಳಿಗೆ ಅತೀ ಮಹತ್ವದ ಹಿನ್ನೆಲೆ ಹೊಂದಿರುವುದರಿಂದ ಪರೀಕ್ಷಾ ಪ್ರಕ್ರಿಯೆಯನ್ನು ಸುವ್ಯವಸ್ಥಿತವಾಗಿ, ಶಾಂತಿ ಮತ್ತು ಶಿಸ್ತು ಪಾಲನೆಯೊಂದಿಗೆ ಹಾಗೂ ಗೌಪ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಡೆಸುವುದು ಅವಶ್ಯವಿರುವ ಹಿನ್ನೆಲೆಯಲ್ಲಿ ಹಾಗೂ ಪರೀಕ್ಷಾ ಪ್ರಕ್ರಿಯೆಗಳನ್ನು ನಿಯಮಬದ್ಧವಾಗಿ, ಯಾವುದೇ ಅಹಿತಕರ ಮತ್ತು ಅವ್ಯವಹಾರಗಳಿಗೆ ಆಸ್ಪದವಾಗದಂತೆ ನಡೆಸುವ ಸಲುವಾಗಿ ಪರೀಕ್ಷೆ ಆರಂಭವಾಗುವ ಬೆಳಿಗ್ಗೆ ೧೦.೩೦ ರಿಂದ ಮಧ್ಯಾಹ್ನ ೩ ಗಂಟೆಯವರೆಗೆ ಪರೀಕ್ಷಾ ಕೇಂದ್ರಗಳು ಮತ್ತು ಅವುಗಳ ಸುತ್ತಮುತ್ತಲಿನ ೨೦೦ ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, ೨೦೨೩ರ ಕಲಂ ೧೬೩ ರನ್ವಯ ಈ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಮಿಕ್ಕುಳಿದ ವೃಂದದಲ್ಲಿ ಖಾಲಿ ಇರುವ ೩೩೯೫ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗಾಗಿ ಲಿಖಿತ ಪರೀಕ್ಷೆ ಅಂದು ಬೆಳಿಗ್ಗೆ ೧೦.೩೦ ರಿಂದ ಮಧ್ಯಾಹ್ನ ೧೨ ಗಂಟೆಯವರೆಗೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳ ವಿವರ ಇಲ್ಲಿವೆ:

ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯ ಎಸ್.ಟಿ.ಜೆ ಮಹಿಳಾ ಪಿಯು ಕಾಲೇಜು, ಸರ್ಕಾರಿ ಪದವಿಪೂರ್ವ ಕಾಲೇಜು, ರತ್ನಗಿರಿ ರಸ್ತೆಯ ಎಂ.ಇ.ಎಸ್.ಎಸ್.ಎಸ್.ಎಂ ಪಿಯು ಕಾಲೇಜು, ಬಸವನಹಳ್ಳಿಯ
ಬಾಲಕಿಯರ ಪದವಿ ಪೂರ್ವ ಕಾಲೇಜು, ಆಶ್ರಯ ಆಸ್ಪತ್ರೆ ಹತ್ತಿರದ ಬಾಲಕಿಯರ ಸೆಂಟ್ ಜೋಸೆಫ್ ಪಿಯು ಕಾಲೇಜು, ಐಡಿಎಸ್‌ಜಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಜ್ಯೋತಿನಗರದ ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯ, ಹೌಸಿಂಗ್ ಬೋರ್ಡ್‌ನ ಬಿ.ಜಿ.ಎಸ್ ಎಕ್ಸ್‌ಪರ್ಟ್ ಪಿಯು ಕಾಲೇಜು, ಜ್ಯೋತಿನಗರದ ಸೆಂಟ್ ಜೋಸೆಫ್ ಪಿಯು ಕಾಲೇಜು, ಟೌನ್ ಕ್ಯಾಂಟೀನ್ ಹತ್ತಿರದ ಡಿಎಸಿಜಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಕಡೂರಿನ ಸರ್ಕಾರಿ ಪಿಯು ಕಾಲೇಜು, ಕೆ.ಎಂ. ರಸ್ತೆಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಿ.ಹೆಚ್.ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮೂಡಿಗೆರೆ ಹೆಸ್ಗಲ್ ರಸ್ತೆಯ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಹೊಯ್ಸಳ ರಸ್ತೆಯ ಸೆಂಟ್ ಮಾರ್ಥಾಸ್ ಕಾಂಪೋಸೈಟ್ ಪಿಯು ಕಾಲೇಜು ಹಾಗೂ ಕೆ.ಎಂ.ರಸ್ತೆಯ ಒಕ್ಕಲಿಗರ ಸಂಘ ಪಿಯು ಕಾಲೇಜಿನಲ್ಲಿ ಈ ಪರೀಕ್ಷೆಗಳು ನಡೆಯಲಿವೆ.

Prohibitory order issued for police constable exam on August 2

Share

Leave a comment

Leave a Reply

Your email address will not be published. Required fields are marked *

Don't Miss

ಸಿಐಡಿ ಪೊಲೀಸ್ ರಿಂದ ಪಂಜರದಲ್ಲಿ ಬಂಧಿಸಿಟ್ಟಿದ ಕಾಡು ಗಿಳಿ ವಶ

ಚಿಕ್ಕಮಗಳೂರು : ಅಕ್ರಮವಾಗಿ ಪಂಜರದಲ್ಲಿ ಬಂಧಿಸಿಟ್ಟಿದ ಕಾಡು ಗಿಳಿಗಳನ್ನು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ವಶಕ್ಕೆ ಪಡೆದಿದೆ ನಗರದ ಟಿಪ್ಪುನಗರದ ಚಾಮುಂಡಿ ಕಾಫಿ ಕ್ಯೂರಿಂಗ್ ಹಿಂಭಾಗದ ರಾಜಸ್ತಾನ ಕುಳ್ಳಿ ರಸ್ತೆಯ...

ಸಖರಾಯಪಟ್ಟಣದಲ್ಲಿ ಹಣದ ವಿಷಯಕ್ಕೆ ಸ್ನೇಹಿತನೇ ಕೊಲೆ

ಕಡೂರು: ಅಪಘಾತದಲ್ಲಿ ಯುವಕ ಸಾವನ್ನಪ್ಪಿದ್ದ ಎಂದು ಭಾವಿಸಿದ್ದ ಪ್ರಕರಣ ತಿರುವು ಪಡೆದುಕೊಂಡಿದ್ದು, ಹಣದ ವಿಷಯಕ್ಕೆ ಸ್ನೇಹಿತನೇ ಕೊಲೆ ಮಾಡಿರುವುದನ್ನು ಸಖರಾಯಪಟ್ಟಣ ಪೊಲೀಸರು ಪತ್ತೆ ಮಾಡಿದ್ದಾರೆ. ಜೂನ್ 13ರ ರಾತ್ರಿ ಸಖರಾಯಪಟ್ಟಣ ಪೊಲೀಸ್...

Related Articles

ಅರತಿಕೃಷ್ಣಗೆ ಮಂತ್ರಿ ಗ್ಯಾರಂಟಿ – ಶ್ರೀನಿವಾಸ್ ತಿರುಪತಿಗೆ ? – ನಯನ ನವ ಅವತಾರಕ್ಕೆ ಭಂಗ, ಭಂಗ

ಚಿಕ್ಕಮಗಳೂರು: ಜಿಲ್ಲೆಯ ಲ್ಲಿ ಮಂತ್ರಿಯಾಗ ಬೇಕು ಎಂದು ಪಟ್ಟು ಹಿಡಿದವರು ಪಲ್ಟಿ ಹೊಡೆದಿದ್ದಾರೆ ಆದರೆ ಅರತಿಕೃಷ್ಣ...

ರೂಬೆನ್ ಮೊಸಸ್ ಗೆ ನ್ಯಾಷನಲ್ ಬೆಸ್ಟ್ ಸೋಷಿಯಲ್ ವರ್ಕರ್ ಅವಾರ್ಡ್ 

ಚಿಕ್ಕಮಗಳೂರು: ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ರೂಬೆನ್ ಮೊಸಸ್ ರವರಿಗೆ ನ್ಯಾಷನಲ್ ಬೆಸ್ಟ್ ಸೋಷಿಯಲ್ ವರ್ಕರ್ ಅವಾರ್ಡ್ ದೊರೆತಿದೆ....

ಹಿರಿಯ ನಾಗರಿಕರಿಗೆ ಪಿಂಚಣಿ ಸೌಲಭ್ಯ ನೀಡಲು ಮನವಿ

ಚಿಕ್ಕಮಗಳೂರು:  ಹಿರಿಯ ನಾಗರೀಕರಿಗೆ ಸಂಧ್ಯಾ ಸುರಕ್ಷಾ, ವಿಧವಾ ಹಾಗೂ ಅಂಗವಿಕಲ ವೇತನವನ್ನು ಒದಗಿಸಿಕೊಡಬೇಕು ಎಂದು ಆಗ್ರಹಿಸಿ...

ಜಲಾಶಯದ ನೀರು ಕುಡಿಯುವ ನೀರಿಗೆ ಬಳಕೆ

ಚಿಕ್ಕಮಗಳೂರು: ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ತೀವ್ರವಾಗಿ ಕ್ಷೀಣಿಸುತ್ತಿದ್ದು,...