Home namma chikmagalur chikamagalur ಹಿರಿಯ ನಾಗರಿಕರಿಗೆ ಪಿಂಚಣಿ ಸೌಲಭ್ಯ ನೀಡಲು ಮನವಿ
chikamagalurHomeLatest Newsnamma chikmagalur

ಹಿರಿಯ ನಾಗರಿಕರಿಗೆ ಪಿಂಚಣಿ ಸೌಲಭ್ಯ ನೀಡಲು ಮನವಿ

Share
Share

ಚಿಕ್ಕಮಗಳೂರು:  ಹಿರಿಯ ನಾಗರೀಕರಿಗೆ ಸಂಧ್ಯಾ ಸುರಕ್ಷಾ, ವಿಧವಾ ಹಾಗೂ ಅಂಗವಿಕಲ ವೇತನವನ್ನು ಒದಗಿಸಿಕೊಡಬೇಕು ಎಂದು ಆಗ್ರಹಿಸಿ ಮಂಗಳವಾರ ಫೆಡರೇಷನ್ ಆಫ್ ಸೀನಿಯರ್‍ಸ್ ಸಿಟಿ ಜನ್ ಪೋರಮ್‌ನ ಪದಾಧಿಕಾರಿಗಳು ಜಿಲ್ಲಾಡಳಿತ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ವೇಳೆ ಫೆಡರೇಷನ್ ಅಧ್ಯಕ್ಷ ಕೆ.ಎಲ್.ನಂಜುಂಡರಾವ್ ಮಾತನಾಡಿ ಸರ್ಕಾರ ಕಳೆದ ನಾಲ್ಕು ತಿಂಗ ಳಿಂದ ಹಿರಿಯ ನಾಗರೀಕರಿಗೆ ವೃದ್ದಾಪ್ಯ, ಸಂಧ್ಯಾಸುರಕ್ಷಾ, ವಿಧವಾ, ಅಂಗವಿಕಲ ವೇತನವನ್ನು ನೀಡಿರುವು ದಿಲ್ಲ. ಇದರಿಂದ ಬಹಳಷ್ಟು ತೊಂದರೆಯಾಗಿದೆ ಎಂದು ತಿಳಿಸಿದರು.

ವೃದ್ದಾಪ್ಯದಲ್ಲಿ ಆರೋಗ್ಯದಲ್ಲಿ ಹಿರಿಯರಿಗೆ ಏರುಪೇರಾಗುವುದು ಸಹಜ. ಹೀಗಾಗಿ ಆರೋಗ್ಯ ಚಿಕಿತ್ಸೆ, ಔಷಧಿ, ಮಾತ್ರೆಗಳಿಗೆ ಸರ್ಕಾರದ ವೇತನಕ್ಕೆ ಹಿರಿಯರು ಸೀಮಿತರಾಗಿದ್ದಾರೆ. ಇದೀಗ ಮುರ್‍ನಾಲ್ಕು ತಿಂಗಳಿಂ ದ ವೇತನ ವಿತರಿಸದಿರುವ ಕಾರಣ ಅಲೆದಾಡುವಂತಾಗಿದೆ ಎಂದು ಹೇಳಿದರು.

ಕೂಡಲೇ ಜಿಲ್ಲಾಧಿಕಾರಿಗಳು ಹಿರಿಯ ನಾಗರೀಕರಿಗೆ ದೊರಕಬೇಕಾದ ಸೌಲಭ್ಯವನ್ನು ಮುಖ್ಯಮಂತ್ರಿಗ ಳ ಗಮನಕ್ಕೆ ತಂದು ಶೀಘ್ರದಲ್ಲೇ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಫೆಡರೇಷನ್‌ನ ಗೌರವಾಧ್ಯಕ್ಷ ಮುನೀರ್ ಅಹ್ಮದ್, ಪ್ರಧಾನ ಕಾರ್ಯದರ್ಶಿ ಎಸ್. ರಾಮಚಂದ್ರ, ಉಪಾಧ್ಯಕ್ಷೆ ಸಿ.ಸಂಧ್ಯಾರಾಣಿ, ಎನ್.ಜಿ.ರಾಜಶೇಖರ್, ಎಂ.ಸಿ.ಜೋಯಿ, ಕೆ.ಟಿ.ಪುಟ್ಟಣ್ಣ, ಮು ಖಂಡರುಗಳಾದ ಬಿ.ಎಂ.ಕುಮಾರ್, ಎಲ್.ವಿ.ಕೃಷ್ಣಮೂರ್ತಿ ಮುಂತಾದವರು ಉಪಸ್ಥಿತರಿದ್ದರು.

Appeal to provide pension facility to senior citizens

 

Share

Leave a comment

Leave a Reply

Your email address will not be published. Required fields are marked *

Don't Miss

ಸಿಐಡಿ ಪೊಲೀಸ್ ರಿಂದ ಪಂಜರದಲ್ಲಿ ಬಂಧಿಸಿಟ್ಟಿದ ಕಾಡು ಗಿಳಿ ವಶ

ಚಿಕ್ಕಮಗಳೂರು : ಅಕ್ರಮವಾಗಿ ಪಂಜರದಲ್ಲಿ ಬಂಧಿಸಿಟ್ಟಿದ ಕಾಡು ಗಿಳಿಗಳನ್ನು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ವಶಕ್ಕೆ ಪಡೆದಿದೆ ನಗರದ ಟಿಪ್ಪುನಗರದ ಚಾಮುಂಡಿ ಕಾಫಿ ಕ್ಯೂರಿಂಗ್ ಹಿಂಭಾಗದ ರಾಜಸ್ತಾನ ಕುಳ್ಳಿ ರಸ್ತೆಯ...

ಸಖರಾಯಪಟ್ಟಣದಲ್ಲಿ ಹಣದ ವಿಷಯಕ್ಕೆ ಸ್ನೇಹಿತನೇ ಕೊಲೆ

ಕಡೂರು: ಅಪಘಾತದಲ್ಲಿ ಯುವಕ ಸಾವನ್ನಪ್ಪಿದ್ದ ಎಂದು ಭಾವಿಸಿದ್ದ ಪ್ರಕರಣ ತಿರುವು ಪಡೆದುಕೊಂಡಿದ್ದು, ಹಣದ ವಿಷಯಕ್ಕೆ ಸ್ನೇಹಿತನೇ ಕೊಲೆ ಮಾಡಿರುವುದನ್ನು ಸಖರಾಯಪಟ್ಟಣ ಪೊಲೀಸರು ಪತ್ತೆ ಮಾಡಿದ್ದಾರೆ. ಜೂನ್ 13ರ ರಾತ್ರಿ ಸಖರಾಯಪಟ್ಟಣ ಪೊಲೀಸ್...

Related Articles

ಅರತಿಕೃಷ್ಣಗೆ ಮಂತ್ರಿ ಗ್ಯಾರಂಟಿ – ಶ್ರೀನಿವಾಸ್ ತಿರುಪತಿಗೆ ? – ನಯನ ನವ ಅವತಾರಕ್ಕೆ ಭಂಗ, ಭಂಗ

ಚಿಕ್ಕಮಗಳೂರು: ಜಿಲ್ಲೆಯ ಲ್ಲಿ ಮಂತ್ರಿಯಾಗ ಬೇಕು ಎಂದು ಪಟ್ಟು ಹಿಡಿದವರು ಪಲ್ಟಿ ಹೊಡೆದಿದ್ದಾರೆ ಆದರೆ ಅರತಿಕೃಷ್ಣ...

ರೂಬೆನ್ ಮೊಸಸ್ ಗೆ ನ್ಯಾಷನಲ್ ಬೆಸ್ಟ್ ಸೋಷಿಯಲ್ ವರ್ಕರ್ ಅವಾರ್ಡ್ 

ಚಿಕ್ಕಮಗಳೂರು: ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ರೂಬೆನ್ ಮೊಸಸ್ ರವರಿಗೆ ನ್ಯಾಷನಲ್ ಬೆಸ್ಟ್ ಸೋಷಿಯಲ್ ವರ್ಕರ್ ಅವಾರ್ಡ್ ದೊರೆತಿದೆ....

ಜಲಾಶಯದ ನೀರು ಕುಡಿಯುವ ನೀರಿಗೆ ಬಳಕೆ

ಚಿಕ್ಕಮಗಳೂರು: ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯ ಕೊರತೆಯಿಂದಾಗಿ ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ತೀವ್ರವಾಗಿ ಕ್ಷೀಣಿಸುತ್ತಿದ್ದು,...

ಆಗಸ್ಟ್ 2ಕ್ಕೆ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಯ ಪರೀಕ್ಷೆಗೆ ನಿಷೇಧಾಜ್ಞೆ ಜಾರಿ

ಚಿಕ್ಕಮಗಳೂರು: ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗಾಗಿ ಆಗಸ್ಟ್ ೨ ರಂದು ಲಿಖಿತ ಪರೀಕ್ಷೆ...