ಶೃಂಗೇರಿ : ತಾಲೂಕಿನ ನೆಮ್ಮಾರ್ ಸರ್ಕಲ್ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಉಸಿರುಚೆಲ್ಲಿರುವ ಮನಕಲಕುವ ಘಟನೆ ನಡೆದಿದೆ.
ಬುಕಡಿಬೈಲ್ ನಿವಾಸಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿ (ವಾಚ್ಮ್ಯಾನ್) ಕೆಲಸ ಮಾಡುತ್ತಿದ್ದ ಲಿಂಗಪ್ಪ ಗೌಡ ಎಂಬುವವರೇ ಈ ಅಪಘಾತದಲ್ಲಿ ಅಕಾಲಿಕ ಮರಣ ಹೊಂದಿದ ದುರ್ದೈವಿ.
ತಮ್ಮ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ವೇಗದ ಲಾರಿಯೊಂದು ನೇರವಾಗಿ ಬೈಕ್ಗೆ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ತೀವ್ರ ರಕ್ತಸ್ರಾವವಾಗಿ ಲಿಂಗಪ್ಪ ಗೌಡ ಅವರು ಘಟನಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆಯೇ ಶೃಂಗೇರಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
Biker dies in horrific road accident
Leave a comment