Home namma chikmagalur chikamagalur ನ್ಯಾಯಾಲಯದ ತೀರ್ಪಿಗೆ ಎಂ.ಕೆ. ಪ್ರಾಣೇಶ್ ಭಾವನಾತ್ಮಕ ಹೇಳಿಕೆ
chikamagalurHomeLatest Newsnamma chikmagalur

ನ್ಯಾಯಾಲಯದ ತೀರ್ಪಿಗೆ ಎಂ.ಕೆ. ಪ್ರಾಣೇಶ್ ಭಾವನಾತ್ಮಕ ಹೇಳಿಕೆ

Share
Share

ಚಿಕ್ಕಮಗಳೂರು: ರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಹಾಗೂ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಕೆ. ಪ್ರಾಣೇಶ್ ಅವರು ನ್ಯಾಯಾಲಯದ ತೀರ್ಪಿಗೆ ಗೌರವ ಸೂಚಿಸಿ, ತಮ್ಮ ಉಪಸಭಾಪತಿ ಹಾಗೂ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಶನಿವಾರ ಬಿಡುಗಡೆ ಮಾಡಿದ ಭಾವನಾತ್ಮಕ ಪತ್ರದಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ಆದೇಶದಂತೆ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ನೀಡಲಾಗಿದ್ದು, ಅದೇ ನಿಯಮದ ಅನ್ವಯ ನಡೆದ ಚುನಾವಣೆಯಲ್ಲಿ ತಾವು ಗೆಲುವು ಸಾಧಿಸಿದ್ದಾಗಿ ತಿಳಿಸಿದ್ದಾರೆ. ಆದರೆ ಇದೀಗ ನಾಮನಿರ್ದೇಶಿತ ಸದಸ್ಯರ ಮತಗಳನ್ನು ಅನರ್ಹ ಎಂದು ನ್ಯಾಯಾಲಯ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ, ಆ ತೀರ್ಪಿಗೆ ತಲೆಬಾಗುವುದಾಗಿ ಹೇಳಿದ್ದಾರೆ.

1997ರಿಂದಲೂ ದೇಶಾದ್ಯಂತ ನಡೆದ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗಳಲ್ಲಿ ನಾಮನಿರ್ದೇಶಿತ ಸದಸ್ಯರು ಮತ ಚಲಾಯಿಸುತ್ತಾ ಬಂದಿದ್ದಾರೆ. ತಾವು ಯಾವುದೇ ಚುನಾವಣಾ ಅಕ್ರಮ ಎಸಗಿಲ್ಲ. ತಮ್ಮ ಗೆಲುವಿನ ಅಂತರ ಕಡಿಮೆ ಇದ್ದ ಕಾರಣ ಪ್ರತಿಸ್ಪರ್ಧಿ ಅಭ್ಯರ್ಥಿ ನ್ಯಾಯಾಲಯದ ಮೊರೆ ಹೋದ ಪರಿಣಾಮ ಈ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಳೆದ ನಾಲ್ಕೂವರೆ ವರ್ಷಗಳ ಅವಧಿಯಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಉಪಸಭಾಪತಿಯಾಗಿ ಪ್ರಾಮಾಣಿಕತೆ, ಪಾರದರ್ಶಕತೆ ಮತ್ತು ಪಕ್ಷಾತೀತವಾಗಿ ಕಾರ್ಯನಿರ್ವಹಿಸಿದ್ದು, ಭ್ರಷ್ಟಾಚಾರ ಹಾಗೂ ದ್ವೇಷ ರಾಜಕಾರಣದಿಂದ ದೂರವಿದ್ದು ಸಾರ್ವಜನಿಕ ಸೇವೆಗೆ ಆದ್ಯತೆ ನೀಡಿದ್ದೇನೆ ಎಂದು ಪ್ರಾಣೇಶ್ ಹೇಳಿದ್ದಾರೆ.

ತಮ್ಮ ಮೇಲೆ ವಿಶ್ವಾಸವಿಟ್ಟು ಅವಕಾಶ ನೀಡಿದ ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು, ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆಗಳ ಸದಸ್ಯರು, ನಾಮನಿರ್ದೇಶಿತ ಸದಸ್ಯರು, ಕಾರ್ಯಕರ್ತರು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಜನತೆಗೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಅಲ್ಲದೆ, ತಮ್ಮ ಅವಧಿಯಲ್ಲಿ ಸಹಕಾರ ನೀಡಿದ ಹಿಂದಿನ ಹಾಗೂ ಹಾಲಿ ಸರ್ಕಾರದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಸಚಿವರು, ಶಾಸಕರು, ವಿಧಾನ ಪರಿಷತ್ ಸಭಾಪತಿ, ಅಧಿಕಾರಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರಿಗೂ ಧನ್ಯವಾದ ಅರ್ಪಿಸಿದ್ದಾರೆ.

“ಈ ತೀರ್ಪಿನಿಂದ ಯಾರೂ ಎದೆಗುಂದಬೇಕಿಲ್ಲ. ನಾನು ಅಧಿಕಾರವನ್ನು ಕಳೆದುಕೊಂಡಿರಬಹುದು. ಆದರೆ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಜನರೊಂದಿಗೆ ಸದಾ ಇರುತ್ತೇನೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಶಕ್ತಿಯುತವಾಗಿ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಳ್ಳುತ್ತೇನೆ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ, ನೂತನವಾಗಿ ವಿಧಾನ ಪರಿಷತ್ ಸದಸ್ಯೆಯಾಗಿ ಆಯ್ಕೆಯಾಗಿರುವ ಗಾಯತ್ರಿ ಶಾಂತೇಗೌಡ ಅವರಿಗೆ ಶುಭಾಶಯ ಕೋರಿರುವ ಎಂ.ಕೆ. ಪ್ರಾಣೇಶ್, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಯಶಸ್ವಿಯಾಗಿ ಮುಂದುವರಿಸಲಿ ಎಂದು ಹಾರೈಸಿದ್ದಾರೆ.

M.K. Pranesh’s emotional statement on the court verdict

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಸಮಾಜದ ಬಗ್ಗೆ ನಾನು ಎಂದೂ ಟೀಕಿಸಿ ಮಾತನಾಡಿಲ್ಲ

ಚಿಕ್ಕಮಗಳೂರು: ಮುಸ್ಲಿಂ ಸಮಾಜದ ಬಗ್ಗೆ ನಾನು ಎಂದೂ ಟೀಕಿಸಿ ಮಾತನಾಡಿಲ್ಲ, ದುಷ್ಕೃತ್ಯದಲ್ಲಿ ತೊಡಗುವವರ ವಿರುದ್ಧವಷ್ಟೇ ನಾನು ಮಾತನಾದಿದ್ದೇನೆ ಎಂಬುದನ್ನು ಆ ಸಮಾಜ ಅರ್ಥ ಮಾಡಿಕೊಳ್ಳಬೇಕು ಎಂದೂ ವಿಧಾನ ಪರಿಷತ್ ಶಾಸಕ ಡಾ....

ಬೈಕ್‌ಗಳ ನಡುವೆ ಭೀಕರ ಅಪಘಾತದಲ್ಲಿ ಮೆಕಾನಿಕ್ ಸಾವು

ಅಜ್ಜಂಪುರ:  ಅಜ್ಜಂಪುರ–ಬೀರೂರು ರಸ್ತೆಯ ನಾಗಮಂಗಲ ಸಮೀಪ ಭಾನುವಾರ ಸಂಜೆ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚನ್ನಾಪುರ ನಿವಾಸಿ ಹಾಗೂ ಮೆಕಾನಿಕ್ ಆಗಿದ್ದ ಆನಂದ್ ಮೃತಪಟ್ಟಿದ್ದಾರೆ. ಲಭ್ಯ ಮಾಹಿತಿಯ...

Related Articles

” ಕಾಂಗ್ರೆಸ್ ನಲ್ಲಿ” ಗಾಯಿತ್ರಿ ಪವರ್ ಸೆಂಟರ್ ಆರಂಭ ! ತಲ್ಲಣಿಸುತ್ತಿರುವ ಶಾಸಕರುಗಳು ?

ಚಿಕ್ಕಮಗಳೂರು: ಗಾಯಿತ್ರಿ ಶಾಂತೇಗೌಡ ಕೋರ್ಟ್ ಆದೇಶದ ಮೇರೆಗೆ ವಿಧಾನ ಪರಿಷತ್ ಗೆ ಎಂಟ್ರಿ ಕೊಟ್ಟಾಗಿದೆ. ಕಳೆದ...

ದ್ವೇಷ ಭಾಷಣಗಳ ಆಧಾರಲ್ಲಿಯೇ ಸಂಘಟನೆ ಕಟ್ಟಲು ಹೊರಟಿರುವುದು ಖಂಡನೀಯ

ಚಿಕ್ಕಮಗಳೂರು : ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಮತ್ತು ಉಡುಪಿ ಕ್ಷೇತ್ರದ ಶಾಸಕ ಯಶ್ಪಾಲ್...

ಕಾವೇರಿ ನೀರು ತಮಿಳುನಾಡಿಗೆ ಹರಿಸದಂತೆ ಒತ್ತಾಯಿಸಿ ಪ್ರತಿಭಟನೆ

ಚಿಕ್ಕಮಗಳೂರು:  ಕಾವೇರಿ ನೀರನ್ನು ನೆರೆರಾಜ್ಯ ತಮಿಳುನಾಡಿಗೆ ಹರಿಬಿಡದೇ ರಾಜ್ಯದ ಜನರಿಗೆ ಉಳಿಸಿಕೊಡಬೇಕು ಎಂದು ಆಗ್ರಹಿಸಿ ಶನಿವಾರ...

ಜಿಲ್ಲೆಯಲ್ಲಿ ಮಳೆಯ ಆರ್ಭಟಕ್ಕೆ ಮಲೆನಾಡು ತತ್ತರ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮಿತಿಮೀರಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಕಳಸ, ಶೃಂಗೇರಿ...