Home namma chikmagalur chikamagalur ಕಾವೇರಿ ನೀರು ತಮಿಳುನಾಡಿಗೆ ಹರಿಸದಂತೆ ಒತ್ತಾಯಿಸಿ ಪ್ರತಿಭಟನೆ
chikamagalurHomeLatest Newsnamma chikmagalur

ಕಾವೇರಿ ನೀರು ತಮಿಳುನಾಡಿಗೆ ಹರಿಸದಂತೆ ಒತ್ತಾಯಿಸಿ ಪ್ರತಿಭಟನೆ

Share
Share

ಚಿಕ್ಕಮಗಳೂರು:  ಕಾವೇರಿ ನೀರನ್ನು ನೆರೆರಾಜ್ಯ ತಮಿಳುನಾಡಿಗೆ ಹರಿಬಿಡದೇ ರಾಜ್ಯದ ಜನರಿಗೆ ಉಳಿಸಿಕೊಡಬೇಕು ಎಂದು ಆಗ್ರಹಿಸಿ ಶನಿವಾರ ಜಿಲ್ಲಾ ಕನ್ನಡಸೇನೆ ಕಾರ್ಯಕರ್ತರು ನಗರದ ಆ ಜಾದ್‌ಪಾರ್ಕ್ ವೃತ್ತದ ಸಮೀಪ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಕನ್ನಡಸೇನೆ ಜಿಲ್ಲಾಧ್ಯಕ್ಷ ಪಿ.ಸಿ.ರಾಜೇಗೌಡ ರಾಜ್ಯದ ಉದ್ದಗಲ ಕ್ಕೂ ಬರಗಾಲದ ಛಾಯೆ ಆವರಿಸಿಕೊಂಡಿದೆ. ರೈತಾಪಿ ವರ್ಗ ಬೆಳೆಗಳಿಗೆ ನೀರಿಲ್ಲದೇ ಕಂಗಾಲಾಗಿದ್ದು ಇದ ರಿಂದ ಸಾಲ ಪಡೆದಿರುವ ರೈತರು ತೀರಿಸಲಾಗದೇ ವಿಷ ಕುಡಿಯುವ ಹಂತಕ್ಕೆ ತಲುಪಿದ್ದಾರೆ ಎಂದರು.

ರಾಜ್ಯದಲ್ಲಿ ಕೆಲವು ಜಿಲ್ಲೆಗಳಲ್ಲಿ ಕನಿಷ್ಟ ಅರ್ಧ ಅಥವಾ ಒಂದು ಇಂಚು ಸುರಿಯುವ ಮಳೆಯು, ಇದೀಗ ಸೆನ್ಸ್ ಲೆಕ್ಕದಲ್ಲಿ ಸುರಿಯತ್ತಿದೆ. ಹೀಗಾಗಿ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಜನಪ್ರತಿನಿಧಿಗಳು ಜನರ ಹಿತ ಕಾಯುವ ದೃಷ್ಟಿಯಿಂದ ನಿರ್ಣಯ ಕೈಗೊಳ್ಳದಿದ್ದಲ್ಲಿ ಅಧಿಕಾರ ತ್ಯಜಿಸಿ, ಕನ್ನಡಪರ ಸಂಘಟನೆಗಳಿಗೆ ರಾಜ್ಯ ವನ್ನು ಕಾಪಾಡುವ ಶಕ್ತಿಯಿದೆ ಎಂದರು.

ತಮಿಳುನಾಡು ಕಾವೇರಿ ನೀರನ್ನು ಮೇಕೆದಾಟಿಗೆ ಬಳಸುತ್ತಿಲ್ಲ. ಕೆಆರ್‌ಎಸ್ ಬಹುಪಾಲು ನೀರನ್ನು ಸ ಮುದ್ರದ ಪಾಲು ಮಾಡುತ್ತಿದ್ದು ಅಲ್ಲಿನ ಸರ್ಕಾರ ಜನಪರ ಕಾಳಜಿಯಿದ್ದಲ್ಲಿ ಅಣೆಕಟ್ಟು ನಿರ್ಮಿಸಿ ನೀರು ಸಂ ಗ್ರಹಿಸಬಹುದು. ಆದರೆ ತಮಿಳುನಾಡು ಸರ್ಕಾರ ಈ ಬಗ್ಗೆ ಚಿಂತಿಸದೇ ಪ್ರತಿಸಾರಿ ನೀರು ಕೇಳುವುದು ಸರಿ ಯಾದ ಕ್ರಮವಲ್ಲ ಎಂದರು.

ರಾಜ್ಯವನ್ನಾಳಿದ ಎರಡು ರಾಷ್ಟ್ರೀಯ ಪಕ್ಷಗಳು ಕಾವೇರಿ ವಿಚಾರದಲ್ಲಿ ಎಂದಿಗೂ ರೈತರ ಹಿತ ಕಾಪಾ ಡುತ್ತಿಲ್ಲ. ಕೇವಲ ಮತಬ್ಯಾಂಕ್‌ಗಾಗಿ ರೈತರನ್ನು ಬಳಸಿಕೊಂಡು, ನೀರಿನ ವಿಷಯದಲ್ಲಿ ದ್ರೋಹವೆಸಗುತ್ತಿದೆ. ಆ ನಿಟ್ಟಿನಲ್ಲಿ ಕನ್ನಡಸೇನೆ ನಾಡಿನ ಜಲ, ಭಾಷೆಯನ್ನು ಕಾಪಾಡುವ ಆಡಳಿತದೊಂದಿಗೆ ಸದಾ ಜೊತೆಗಿರಲಿದೆ ಎಂದು ತಿಳಿಸಿದರು.

ರಾಜ್ಯಸರ್ಕಾರ ಕೂಡಲೇ ಬರಗಾಲ, ರೈತರ ಹಾಗೂ ಕುಡಿಯುವ ನೀರಿನ ಸಮಸ್ಯೆಯನ್ನು ಸುಪ್ರೀಂ ಕೋರ್ಟ್ ಗಮನಕ್ಕೆ ತಂದು ಕಾವೇರಿ ನೀರು ಹರಿಸದಂತೆ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಸರ್ಕಾರ ಈ ಬಗ್ಗೆ ನಿರ್ಲಕ್ಷ್ಯ ವಹಿಸಿ ನೀರನ್ನು ಹರಿಬಿಟ್ಟಲ್ಲಿ ಕನ್ನಡಪರ ಸಂಘಟನೆಗಳು ಬೃಹತ್ ಮಟ್ಟದ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಕನ್ನಡಸೇನೆ ಜಿಲ್ಲಾ ವಕ್ತಾರರಾದ ಹುಣಸೇಮಕ್ಕಿ ಲಕ್ಷ್ಮಣ್, ಕಳವಾಸೆ ರವಿ, ಆಟೋ ಘಟಕದ ಅಧ್ಯಕ್ಷ ಜಯಪ್ರಕಾಶ್, ನಗರಾಧ್ಯಕ್ಷ ಸತೀಶ್, ಮುಖಂಡರುಗಳಾದ ಇಂದ್ರ, ಮೇಘ, ಉಷಾ, ದಾಕ್ಷಾಯಣಿ, ಅನ್ವರ್, ಜಗದೀಶ್ ಮುಂತಾದವರು ಉಪಸ್ಥಿತರಿದ್ದರು.

Protest demanding that Cauvery water not be released to Tamil Nadu

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಸಮಾಜದ ಬಗ್ಗೆ ನಾನು ಎಂದೂ ಟೀಕಿಸಿ ಮಾತನಾಡಿಲ್ಲ

ಚಿಕ್ಕಮಗಳೂರು: ಮುಸ್ಲಿಂ ಸಮಾಜದ ಬಗ್ಗೆ ನಾನು ಎಂದೂ ಟೀಕಿಸಿ ಮಾತನಾಡಿಲ್ಲ, ದುಷ್ಕೃತ್ಯದಲ್ಲಿ ತೊಡಗುವವರ ವಿರುದ್ಧವಷ್ಟೇ ನಾನು ಮಾತನಾದಿದ್ದೇನೆ ಎಂಬುದನ್ನು ಆ ಸಮಾಜ ಅರ್ಥ ಮಾಡಿಕೊಳ್ಳಬೇಕು ಎಂದೂ ವಿಧಾನ ಪರಿಷತ್ ಶಾಸಕ ಡಾ....

ಬೈಕ್‌ಗಳ ನಡುವೆ ಭೀಕರ ಅಪಘಾತದಲ್ಲಿ ಮೆಕಾನಿಕ್ ಸಾವು

ಅಜ್ಜಂಪುರ:  ಅಜ್ಜಂಪುರ–ಬೀರೂರು ರಸ್ತೆಯ ನಾಗಮಂಗಲ ಸಮೀಪ ಭಾನುವಾರ ಸಂಜೆ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚನ್ನಾಪುರ ನಿವಾಸಿ ಹಾಗೂ ಮೆಕಾನಿಕ್ ಆಗಿದ್ದ ಆನಂದ್ ಮೃತಪಟ್ಟಿದ್ದಾರೆ. ಲಭ್ಯ ಮಾಹಿತಿಯ...

Related Articles

” ಕಾಂಗ್ರೆಸ್ ನಲ್ಲಿ” ಗಾಯಿತ್ರಿ ಪವರ್ ಸೆಂಟರ್ ಆರಂಭ ! ತಲ್ಲಣಿಸುತ್ತಿರುವ ಶಾಸಕರುಗಳು ?

ಚಿಕ್ಕಮಗಳೂರು: ಗಾಯಿತ್ರಿ ಶಾಂತೇಗೌಡ ಕೋರ್ಟ್ ಆದೇಶದ ಮೇರೆಗೆ ವಿಧಾನ ಪರಿಷತ್ ಗೆ ಎಂಟ್ರಿ ಕೊಟ್ಟಾಗಿದೆ. ಕಳೆದ...

ದ್ವೇಷ ಭಾಷಣಗಳ ಆಧಾರಲ್ಲಿಯೇ ಸಂಘಟನೆ ಕಟ್ಟಲು ಹೊರಟಿರುವುದು ಖಂಡನೀಯ

ಚಿಕ್ಕಮಗಳೂರು : ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಮತ್ತು ಉಡುಪಿ ಕ್ಷೇತ್ರದ ಶಾಸಕ ಯಶ್ಪಾಲ್...

ನ್ಯಾಯಾಲಯದ ತೀರ್ಪಿಗೆ ಎಂ.ಕೆ. ಪ್ರಾಣೇಶ್ ಭಾವನಾತ್ಮಕ ಹೇಳಿಕೆ

ಚಿಕ್ಕಮಗಳೂರು: ರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಹಾಗೂ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಮಾಜಿ ವಿಧಾನ...

ಜಿಲ್ಲೆಯಲ್ಲಿ ಮಳೆಯ ಆರ್ಭಟಕ್ಕೆ ಮಲೆನಾಡು ತತ್ತರ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮಿತಿಮೀರಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಕಳಸ, ಶೃಂಗೇರಿ...