Home namma chikmagalur chikamagalur ಜಿಲ್ಲೆಯ ಮೂರು ತಾಲ್ಲೂಕಿನ ಶಾಲೆಗಳಿಗೆ ರಜೆ
chikamagalurHomeLatest Newsnamma chikmagalur

ಜಿಲ್ಲೆಯ ಮೂರು ತಾಲ್ಲೂಕಿನ ಶಾಲೆಗಳಿಗೆ ರಜೆ

Share
Share

ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಹಾಗೂ ಶೃಂಗೇರಿ ತಾಲೂಕುಗಳ ಅಂಗನವಾಡಿ, ಶಿಶುಪಾಲನಾ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಆಗಸ್ಟ್ 3, 2026 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಭನ್ವ‌ರ್ ಸಿಂಗ್ ಮೀನಾ ಆದೇಶ ಹೊರಡಿಸಿದ್ದಾರೆ.

ಕೇಂದ್ರ ಜಲ ಆಯೋಗ (CWC) ಎಚ್ಚರಿಕೆ ನೀಡಿದ್ದು, ತುಂಗಾ ನದಿಯ ನೀರಿನ ಮಟ್ಟವು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಈ ರಜೆಯು ಕೊಪ್ಪ ಮತ್ತು ಶೃಂಗೇರಿ ತಾಲೂಕಿನ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗಲಿದ್ದು, ರಜೆಯಿಂದಾಗಿ ನಷ್ಟವಾಗುವ ದಿನಗಳನ್ನು ಮುಂಬರುವ ಸಾರ್ವತ್ರಿಕ ರಜಾ ದಿನಗಳಲ್ಲಿ ಸರಿದೂಗಿಸಿಕೊಳ್ಳಲು ಸೂಚಿಸಲಾಗಿದೆ.

ತುಂಗಾ ನದಿಯಲ್ಲಿ ಪ್ರವಾಹದ ಅಪಾಯವಿರುವುದರಿಂದ ಸಾರ್ವಜನಿಕರು, ಪ್ರವಾಸಿಗರು ಹಾಗೂ ಮಕ್ಕಳು ಯಾವುದೇ ಕಾರಣಕ್ಕೂ ನದಿ, ಹೊಳೆ, ಕೆರೆ ಮುಂತಾದ ಜಲಮೂಲಗಳ ಬಳಿ ತೆರಳಬಾರದು ಎಂದು ಜಿಲ್ಲಾಡಳಿತ ಕಟ್ಟುನಿಟ್ಟಿನ ಸೂಚನೆ ನೀಡಿದೆ.

Holiday for schools in three taluks of the district

Share

Leave a comment

Leave a Reply

Your email address will not be published. Required fields are marked *

Don't Miss

ಎಲ್ಲಾ ಧರ್ಮದವರನ್ನು ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಎಲ್ಲಾ ಧರ್ಮದ ಜನರು ಪ್ರೀತಿ ಸ್ನೇಹದಿಂದ ಬದುಕುತ್ತಿರುವ ಇಂತಹ ಪರಂಪರೆಯನ್ನು ಗೌರವಿಸಬೇಕಾಗಿರುವುದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಸೇರಿದಂತೆ ಪ್ರತಿಯೊಬ್ಬ ನಾಗರೀಕನ ಕರ್ತವ್ಯ ಎಂದು ಕೆ.ಪಿ.ಸಿ.ಸಿ....

ರಾಜ್ಯ ಸರ್ಕಾರ ಜನ ಸಾಮಾನ್ಯರ ಜೀವನದ ಜೊತೆ ಚೆಲ್ಲಾಟ

ಕೊಪ್ಪ: ವೃದ್ಧಾಪ್ಯ ವೇತನ, ಅಂಗವಿಕಲ ವೇತನ ಹಾಗೂ ವಿಧವಾ ವೇತನ ಪಡೆಯಲು ರಾಜ್ಯ ಸರ್ಕಾತ ಗರಿ? ೩೨ ಸಾವಿರ ರೂ. ಆದಾಯಮಿತಿ ನಿಗದಿಪಡಿಸಿರುವುದನ್ನು ಖಂಡಿಸಿ ಶೃಂಗೇರಿ ಕ್ಷೇತ್ರ ಜೆಡಿಎಸ್ ಸಮಿತಿಯಿಂದ ಪಟ್ಟಣದ...

Related Articles

ಕೊನೆ ಕ್ಷಣದಲ್ಲಿ ಗಾಯಿತ್ರಿಗೆ ತಪ್ಪಿದ ಮಂತ್ರಿ ಸ್ಥಾನ

ಚಿಕ್ಕಮಗಳೂರು: ಜಿಲ್ಲೆಯ ಐದು ಜನ ಶಾಸಕರಿಗೆ ಮಂತ್ರಿ ಪದವಿ ದೊರೆಯದೆ ಕೊನೆ ಕ್ಷಣದಲ್ಲಿ ಫಿಲ್ಮ್ ನಲ್ಲಿ...

ವ್ಯಸನಮುಕ್ತ ಸಮಾಜ ನಿರ್ಮಾಣದಿಂದ ಮಾತ್ರ ಸುಂದರ ಭವಿಷ್ಯ ಸಾಧ್ಯ

ಚಿಕ್ಕಮಗಳೂರು: ಸಮಾಜದಲ್ಲಿ ಶಾಂತಿ, ಸ್ವಾಸ್ಥ್ಯ ಮತ್ತು ಉತ್ತಮ ವಾತಾವರಣ ನಿರ್ಮಾಣವಾಗಬೇಕಾದರೆ ಪ್ರತಿಯೊಬ್ಬರೂ ವ್ಯಸನಗಳಿಂದ ದೂರವಿರಬೇಕು. ವ್ಯಸನಮುಕ್ತ...

ಬಿಜೆಪಿ ಶಾಸಕ ಯಶಪಾಲ್ ಸುವರ್ಣ ವಿರುದ್ಧ ಕ್ರಮಕ್ಕೆ ಒತ್ತಾಯ

ಚಿಕ್ಕಮಗಳೂರು: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ...

ಪೊಲೀಸ್ ಕಾನ್‌ಸ್ಟೇಬಲ್ ಲಿಖಿತ ಪರೀಕ್ಷೆಗೆ 451 ಅಭ್ಯರ್ಥಿಗಳ ಗೈರು

ಚಿಕ್ಕಮಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ಭಾನುವಾರ ರಾಜ್ಯಾದ್ಯಂತ ನಡೆದ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್)...