ಎನ್.ಆರ್.ಪುರ: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆಗೆ ಭದ್ರಾ ನದಿ ಭೋರ್ಗರೆಯುತ್ತಿದೆ. ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಬಳಿಯ ಹೊಳೆಬಾಗಿಲು ಭಾಗದಲ್ಲಿ ಮಳೆಯ ಆರ್ಭಟಕ್ಕೆ ನದಿಯಲ್ಲಿ ಪ್ರವಾಹದ ಮಟ್ಟ ಏರಿಕೆಯಾಗಿದ್ದು, ನದಿ ಪಾತ್ರದ ಸುತ್ತಮುತ್ತಲಿನ ಅಡಕೆ ತೋಟ ಹಾಗೂ ಗದ್ದೆಗಳು ನೀರುಪಾಲಾಗಿವೆ.
ನದಿಯ ಪ್ರಚಂಡ ಹರಿವಿನಿಂದಾಗಿ ಹೊಳೆಬಾಗಿಲು ಮತ್ತು ಸುತ್ತಮುತ್ತಲಿನ ಗ್ರಾಮಗಳ ಕೃಷಿ ಭೂಮಿಗೆ ನೀರು ಆವರಿಸಿಕೊಂಡಿದ್ದು, ಬೆಳೆ ಸಂಪೂರ್ಣ ಮುಳುಗಡೆಯಾಗಿದೆ. ದಿಢೀರ್ ಎದುರಾದ ಈ ಜಲಾವೃತ ಸ್ಥಿತಿಯಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ನಾಶವಾಗುವ ಭೀತಿ ಎದುರಾಗಿದ್ದು, ನದಿ ಪಾತ್ರದ ರೈತರು ಸಂಪೂರ್ಣವಾಗಿ ಕಂಗಾಲಾಗಿದ್ದಾರೆ.
ತಡೆಗೋಡೆ ಕುಸಿತ: ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಭಾರಿ ಮಳೆಯಿಂದಾಗಿ ರಸ್ತೆ ಪಕ್ಕದ ತಡೆಗೋಡೆಯೊಂದು ಕುಸಿದು ಬಿದ್ದಿರು ಘಟನೆ ಕಳಸ ದಲ್ಲಿ ನಡೆದಿದೆ
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಬೇಡಕ್ಕಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ತಡೆಗೋಡೆ ಕುಸಿದಿರುವುದರಿಂದ ಸ್ಥಳೀಯ ಮೊಹಮ್ಮದ್ ಎಂಬುವವರ ಕುಟುಂಬ ತೀವ್ರ ಆತಂಕದಲ್ಲಿದೆ. ಅದೃಷ್ಟವಶಾತ್ ಯಾವುದೇ ದೊಡ್ಡ ಮಟ್ಟದ ಅನಾಹುತ ಸಂಭವಿಸಿಲ್ಲ.
ಪ್ರಸ್ತುತ ಮಳೆಯ ಪ್ರಮಾಣ ಹೆಚ್ಚಾದರೆ ತಡೆಗೋಡೆ ಮತ್ತಷ್ಟು ಕುಸಿಯುವ ಭೀತಿ ಎದುರಾಗಿದೆ. ಯಾವುದೇ ಅಹಿತಕರ ಘಟನೆ ನಡೆಯುವ ಮುನ್ನವೇ ಕುಸಿದಿರುವ ತಡೆಗೋಡೆಯನ್ನು ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ದುರಸ್ತಿಗೊಳಿಸಬೇಕು ಎಂದು ಸಾರ್ವಜನಿಕರು ತೀವ್ರವಾಗಿ ಆಗ್ರಹಿಸಿದ್ದಾರೆ.
The watershed around the riverbed is a wetland.
Leave a comment