Home namma chikmagalur chikamagalur ವ್ಯಸನಮುಕ್ತ ಸಮಾಜ ನಿರ್ಮಾಣದಿಂದ ಮಾತ್ರ ಸುಂದರ ಭವಿಷ್ಯ ಸಾಧ್ಯ
chikamagalurHomeLatest Newsnamma chikmagalur

ವ್ಯಸನಮುಕ್ತ ಸಮಾಜ ನಿರ್ಮಾಣದಿಂದ ಮಾತ್ರ ಸುಂದರ ಭವಿಷ್ಯ ಸಾಧ್ಯ

Share
Share

ಚಿಕ್ಕಮಗಳೂರು: ಸಮಾಜದಲ್ಲಿ ಶಾಂತಿ, ಸ್ವಾಸ್ಥ್ಯ ಮತ್ತು ಉತ್ತಮ ವಾತಾವರಣ ನಿರ್ಮಾಣವಾಗಬೇಕಾದರೆ ಪ್ರತಿಯೊಬ್ಬರೂ ವ್ಯಸನಗಳಿಂದ ದೂರವಿರಬೇಕು. ವ್ಯಸನಮುಕ್ತ ಸಮಾಜ ನಿರ್ಮಾಣದಿಂದ ಮಾತ್ರ ಸುಂದರ ಭವಿಷ್ಯ ಸಾಧ್ಯ ಎಂದು ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ ಅಧ್ಯಕ್ಷ ಎ.ಎನ್. ಮಹೇಶ್ ಹೇಳಿದರು.

ನಗರದ ಡಿಎಸಿಜಿ ಸರ್ಕಾರಿ ಪಾಲಿಟೆಕ್ನಿಕ್ ಸಭಾಂಗಣದಲ್ಲಿ ಮಹಾಂತ ಶಿವಯೋಗಿಗಳ ಜನ್ಮದಿನ ಅಂಗವಾಗಿ ಶನಿವಾರ ಆಯೋಜಿಸಿದ್ದ ವ್ಯಸನಮುಕ್ತ ದಿನಾಚರಣೆ ಹಾಗೂ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿ ೧೯೭೫ರಲ್ಲಿ ಇಳಕಲ್ ಮಠದ ಶ್ರೀಗಳು ‘ಜೋಳಿಗೆ ಚಳವಳಿ’ ಮೂಲಕ ಸಮಾಜದಲ್ಲಿ ವ್ಯಸನಮುಕ್ತಿಯ ಜಾಗೃತಿ ಮೂಡಿಸಿದ ಕಾರ್ಯವನ್ನು ಸ್ಮರಿಸಿದರು. ಧಾನ್ಯ ಅಥವಾ ಹಣ ಕೇಳದೆ, ಜನರ ದುರ್ವ್ಯಸನಗಳನ್ನು ತ್ಯಜಿಸುವಂತೆ ಕರೆ ನೀಡಿದ ಶ್ರೀಗಳ ಸಮಾಜಮುಖಿ ಕಾರ್ಯ ಕ್ರಾಂತಿಕಾರಿಯಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಎಚ್.ಡಿ. ತಮ್ಮಯ್ಯ ಮಾತನಾಡಿ, ದೇಶದ ಶಕ್ತಿಯಾಗಿರುವ ಯುವಜನರು ವ್ಯಸನಗಳಿಗೆ ಬಲಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ವ್ಯಸನ ಎಂದರೆ ಕೇವಲ ಮದ್ಯ ಅಥವಾ ಮಾದಕ ವಸ್ತುಗಳಷ್ಟೇ ಅಲ್ಲ, ಮೊಬೈಲ್ ಫೋನ್ ಮತ್ತು ಸಾಮಾಜಿಕ ಜಾಲತಾಣವೂ ಗಂಭೀರ ಸಮಸ್ಯೆಯಾಗಿದೆ ಎಂದು ಹೇಳಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ ಮಾತನಾಡಿ, ಯುವಜನರು ದುಶ್ಚಟಗಳಿಗೆ ಬಲಿಯಾಗದೆ ಸಮಾಜ ಸೇವೆಯಂತಹ ಸಕಾರಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ನಿವೃತ್ತ ಉಪನ್ಯಾಸಕ ಬಿ. ತಿಪ್ಪೇರುದ್ರಪ್ಪ ಮಾತನಾಡಿ, ಬಸವಾದಿ ಶರಣರು ಸಮಾಜದಲ್ಲಿ ವೈಚಾರಿಕ ಮತ್ತು ಸಾಮಾಜಿಕ ಕ್ರಾಂತಿ ಮೂಡಿಸಿದಂತೆ, ಡಾ. ಮಹಾಂತ ಶಿವಯೋಗಿಗಳೂ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟಿದ್ದರು. ಅವರ ಜನ್ಮದಿನವನ್ನು ‘ವ್ಯಸನಮುಕ್ತ ದಿನ’ವಾಗಿ ಆಚರಿಸುವುದು ಅರ್ಥಪೂರ್ಣವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜೆ.ಮಂಜೇಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಕೆ.ಮಂಜುನಾಥ್, ಡಿ.ಎ.ಸಿ.ಜಿ.ಸರ್ಕಾರಿ ಪಾಲಿಟೆಕ್ನಿಕ್‌ನ ಉಪಪ್ರಾಂಶುಪಾಲ ಶ್ರೀಧರ್ ಆಚಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಡಿ.ಎ.ಸಿ.ಜಿ. ಪಾಲಿಟೆಕ್ನಿಕ್ ಉಪನ್ಯಾಸಕಿ ನಾಗಶ್ರೀ ತ್ಯಾಗರಾಜ್ ಸ್ವಾಗತ, ಜಿಲ್ಲಾ ನಿವೃತ್ತ ಗ್ರಂಥಾಲಯಾಧಿಕಾರಿ ಮಹೇಶಪ್ಪ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

A beautiful future is possible only by building an addiction-free society.

 

 

Share

Leave a comment

Leave a Reply

Your email address will not be published. Required fields are marked *

Don't Miss

ಎಲ್ಲಾ ಧರ್ಮದವರನ್ನು ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಎಲ್ಲಾ ಧರ್ಮದ ಜನರು ಪ್ರೀತಿ ಸ್ನೇಹದಿಂದ ಬದುಕುತ್ತಿರುವ ಇಂತಹ ಪರಂಪರೆಯನ್ನು ಗೌರವಿಸಬೇಕಾಗಿರುವುದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಸೇರಿದಂತೆ ಪ್ರತಿಯೊಬ್ಬ ನಾಗರೀಕನ ಕರ್ತವ್ಯ ಎಂದು ಕೆ.ಪಿ.ಸಿ.ಸಿ....

ರಾಜ್ಯ ಸರ್ಕಾರ ಜನ ಸಾಮಾನ್ಯರ ಜೀವನದ ಜೊತೆ ಚೆಲ್ಲಾಟ

ಕೊಪ್ಪ: ವೃದ್ಧಾಪ್ಯ ವೇತನ, ಅಂಗವಿಕಲ ವೇತನ ಹಾಗೂ ವಿಧವಾ ವೇತನ ಪಡೆಯಲು ರಾಜ್ಯ ಸರ್ಕಾತ ಗರಿ? ೩೨ ಸಾವಿರ ರೂ. ಆದಾಯಮಿತಿ ನಿಗದಿಪಡಿಸಿರುವುದನ್ನು ಖಂಡಿಸಿ ಶೃಂಗೇರಿ ಕ್ಷೇತ್ರ ಜೆಡಿಎಸ್ ಸಮಿತಿಯಿಂದ ಪಟ್ಟಣದ...

Related Articles

ಕೊನೆ ಕ್ಷಣದಲ್ಲಿ ಗಾಯಿತ್ರಿಗೆ ತಪ್ಪಿದ ಮಂತ್ರಿ ಸ್ಥಾನ

ಚಿಕ್ಕಮಗಳೂರು: ಜಿಲ್ಲೆಯ ಐದು ಜನ ಶಾಸಕರಿಗೆ ಮಂತ್ರಿ ಪದವಿ ದೊರೆಯದೆ ಕೊನೆ ಕ್ಷಣದಲ್ಲಿ ಫಿಲ್ಮ್ ನಲ್ಲಿ...

ಬಿಜೆಪಿ ಶಾಸಕ ಯಶಪಾಲ್ ಸುವರ್ಣ ವಿರುದ್ಧ ಕ್ರಮಕ್ಕೆ ಒತ್ತಾಯ

ಚಿಕ್ಕಮಗಳೂರು: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ...

ಪೊಲೀಸ್ ಕಾನ್‌ಸ್ಟೇಬಲ್ ಲಿಖಿತ ಪರೀಕ್ಷೆಗೆ 451 ಅಭ್ಯರ್ಥಿಗಳ ಗೈರು

ಚಿಕ್ಕಮಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ಭಾನುವಾರ ರಾಜ್ಯಾದ್ಯಂತ ನಡೆದ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್)...

ವಿಧಾನ ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಇಂದು ಪ್ರಮಾಣ ವಚನ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ನೂತನ ಸದಸ್ಯೆಯಾಗಿ ನೇಮಕಗೊಂಡಿರುವ ಶ್ರೀಮತಿ ಗಾಯತ್ರಿ ಶಾಂತೇಗೌಡ ಅವರು ಸೋಮವಾರ...