ಚಿಕ್ಕಮಗಳೂರು : ಜಿಲ್ಲೆಯ ೧೩೭ ಹಳ್ಳಿಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಣೆ ಮಾಡಿದ್ದು, ಬಗ್ಗೆ ಜನಸಾಮಾನ್ಯರು ಯಾವುದೇ ಆತಂಕಕ್ಕೆ ಒಳಗಾಗದೆ ಆ ವ್ಯಾಪ್ತಿಯ ಪ್ರತಿಯೊಬ್ಬ ನಾಗರಿಕರು ಆಕ್ಷೇಪಣೆ ಸಲ್ಲಿಸುವ ಮೂಲಕ ಪ್ರತಿರೋಧ ವ್ಯಕ್ತಪಡಿಸುವಂತೆ ಕಾಂಗ್ರೆಸ್ ಕೆಪಿಸಿಸಿ ವಕ್ತಾರಾ ಎಚ್.ಎಚ್ದೇವರಾಜ್ ಹೇಳಿದರು.
ನಗರದ ಪ್ರೆಸ್ ಕ್ಲಬ್ ನಲ್ಲಿ ಇಂದು ಕರೆದಿದ್ದ ಸುದ್ದಿಗೋಷಿ ಯಲ್ಲಿ ಮಾತನಾಡಿದ ಈ ಘೋಷಣೆ ಮಾಡಿರುವ ದಿನಾಂಖದಿಂದ ೬೦ ದಿನಗಳ ವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದ್ದು. ಈ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲರೂ ಒಗ್ಗಟ್ಟು ಪ್ರದರ್ಶಿಸಬೇಕೆಂದರು.
ಈ ಘೋಷಣೆಯಿಂದ ಜನ ಜೀವನಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಎಂಬ ಭರವಸೆ ನೀಡಿದ್ದರು ಸಹ ಹೊರಡಿಸಿರುವ ಕರಡು ಅನುಸೂಚನೆಯಲ್ಲಿ ಯಾವುದೇ ಸ್ಪಷ್ಟತೆ ಇಲ್ಲದಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ಹೇಳಿದ ಅವರು ಪರಿಸರ ಸೂಕ್ತ ಪ್ರದೇಶ ವ್ಯಾಪ್ತಿಯ ೧೩೭ ಹಳ್ಳಿಗಳ ಜನತೆ ಧೃತಿಗೆಡುವ ಅಗತ್ಯವಿಲ್ಲ ನಿಮ್ಮೊಂದಿಗೆ ಜಿಲ್ಲೆಯ ಜನಪ್ರತಿನಿಧಿಗಳು ಬೆಂಬಲವಾಗಿ ನಿಲ್ಲಲಿದ್ದಾರೆ ಎಂದು ಅಭಯ ನೀಡಿದರು.
ಸರ್ಕಾರದ ನಿಲುವಿನ ವಿರುದ್ದ ಹೋರಾಟ ರೂಪಿಸಲು ರೈತ ಸಂಘದ ನಾಯಕತ್ವದಲ್ಲಿ ಬೆಳೆಗಾರರಸಂಘ ಡಿಎಸ್ಎಸ್,ಕಮ್ಯುನಿಸ್ಟ್ ಪಕ್ಷ ,ಕಾಂಗ್ರೆಸ್ ಪಕ್ಷ ದ ಮುಖಂಡರು ಶೀಘ್ರದಲ್ಲಿಯೇ ಸಭೆ ನಡೆಸಿ ಪ್ರತಿಭಟನೆಯ ರೂಪವೇಷಗಳನ್ನು ಸಿದ್ಧಪಡಿಸುತ್ತಿದ್ದು ಸಂಘಟನೆಗಳು ನಡೆಸುವ ಹೋರಾಟಕ್ಕೆ ಆ ವ್ಯಾಪ್ತಿಯ ಜನತೆ ಬೆಂಬಲಿಸಬೇಕೆಂದು ಕೋರಿದರು.
ಜನ ವಿರೋಧಿ ನಿರ್ಧಾರವಾಗಿದ್ದು ಈ ಬಗ್ಗೆ ಸಂಸದರು, ವಿಧಾನಪರಿಷತ್ ಸದಸ್ಯರು, ಶಾಸಕರು ಪಕ್ಷ ಬೇದ ಮರೆತು ಸದನಗಳಲ್ಲಿ ಧ್ವನಿ ಎತ್ತುವ ಮೂಲಕ ಜನಸಾಮಾನ್ಯರಿಗೆ ಸ್ಪಂದಿಸಬೇಕೆಂದು ಕರೆ ನೀಡಿದರು.
ಕೆಪಿಸಿಸಿ ಮಾಧ್ಯಮ ಸಮಿತಿ ರವೀಶ್ ಖ್ಯಾತನ ಬೀಡು ಮಾತನಾಡಿ ಕಸ್ತೂರಿ ರಂಗನ್ ವರದಿಯ ಯಥಾವತ್ತು ಅಂಗೀಕಾರ ಆ ಭಾಗದ ಜನರ ನಿದ್ದೆಗೆಡಿಸುವ ಹುನ್ನಾರದ ಭಾಗವಾಗಿದ್ದು, ಪರಿಸರ ಸೂಕ್ಷ್ಮಪ್ರದೇಶ ವ್ಯಾಪ್ತಿಗೆ ಚಿಕ್ಕಮಗಳೂರು ನಗರ ಮತ್ತು ಸುತ್ತಮುತ್ತಲ ಗ್ರಾಮಗಳು ಬರಲಿದ್ದು,ಈ ಬಗ್ಗೆ ನಗರಸಭೆ ಮತ್ತು ಜಿಲ್ಲಾಧಿಕಾರಿಗಳು ಗ್ರಾಮ ಪಂಚಾಯಿತಿಗಳು ಕರುಡು ನೀತಿ ವಿರೋಧಿಸಿ ನಿರ್ಣಯವನು ಕೈಗೊಂಡು ಕೇಂದ್ರ ಸರ್ಕಾರ ಮತ್ತು ನ್ಯಾಯಾಲಯಕ್ಕೆ ಕಳಿಸಿಕೊಡಬೇಕು ಎಂದು ಆಗ್ರಹಿಸಿದರು.
ನ್ಯಾಯಾಲಯದ ಮೂಲಕ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಗೊಂಡಿರುವ ಗಾಯತ್ರಿಶಾಂತಿಗೌಡರ ಚುನಾವಣಾ ಪ್ರಕ್ರಿಯೆ ನಡೆಸಿದ ಅಂದಿನ ಜಿಲ್ಲಾಧಿಕಾರಿ ರಮೇಶ್ರವರು ಕರ್ತವ್ಯ ಚ್ಯುತಿ ಎಸೆಗಿದ್ದು, ಅವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಂಡು ಕೂಡಲೇ ಅವರನ್ನು ಹುದ್ದೆಯಿಂದ ಒತ್ತಾಯಿಸಿದರು.
ವಿಧಾನ ಪರಿಷತ್ ಚುನಾವಣೆಯ ವಿಚಾರಣೆ ನಡೆಸಿದ ನ್ಯಾಯಾಲಯ ಕಳೆದ ಒಂದೂವರೆ ವರ್ಷಗಳ ಹಿಂದೆಯೇ ಪ್ರಕ್ರಿಯೆ ನಡೆಸುವಂತೆ ಸೂಚಿಸಿದ್ದರು ಸ್ಥಳೀಯ ಅಧಿಕಾರಿಗಳು ಮತ್ತು ರಾಜಕೀಯ ಪಕ್ಷಗಳ ಕೈವಾಡದಿಂದ ಅವರ ಪರವಾಗಿ ತೀರ್ಪು ಬರಲು ವಿಳಂಬವಾಗಿದೆ. ಈ ವಿಳಂಬ ನೀತಿಯನ್ನು ಗಮನಿಸಿದರೆ ಈ ಚುನಾವಣೆಯಲ್ಲಿಯೂ ವೋಟ್ ಚೋರಿ ನಡೆದಿರುವ ಶಂಕೆ ಇದೆ ಎಂದು ಹೇಳಿದರು.
ಈ ಗೋಷ್ಠಿಯಲ್ಲಿ ಮುಖಂಡರಾದ ರಮೇಶ್ ಸಚಿನ್ ಸಿಂಗ್ ಶಾಂತಕುಮಾರ್ ಉಪ್ಪಳ್ಳಿ ಭರತ್ ಇದ್ದರು.
Citizens should object to the declaration of an environmentally sensitive area
Leave a comment