Home namma chikmagalur chikamagalur ಮಕ್ಕಳ ಲೈಂಗಿಕ ಶೋಷಣೆ ಪ್ರಕರಣ ದಾಖಲು
chikamagalurHomeLatest Newsnamma chikmagalur

ಮಕ್ಕಳ ಲೈಂಗಿಕ ಶೋಷಣೆ ಪ್ರಕರಣ ದಾಖಲು

Share
Share

ಚಿಕ್ಕಮಗಳೂರು:  ಮಕ್ಕಳ ಲೈಂಗಿಕ ಶೋಷಣೆ ಮತ್ತು ನಿಂದನೆಗೆ ಸಂಬಂಧಿಸಿದ (CSEAM) ವಿಡಿಯೋವನ್ನು ಸಾಮಾಜಿಕ ಜಾಲತಾಣ ಸ್ನಾಪ್‌ಚಾಟ್ ಮೂಲಕ ಹಂಚಿಕೊಂಡ ಆರೋಪದಡಿ ಚಿಕ್ಕಮಗಳೂರು ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, National Center for Missing and Exploited Children (NCMEC) ನಿಂದ ಬಂದ Cyber Tipline Report ಆಧರಿಸಿ ಪ್ರಕರಣದ ತನಿಖೆ ಕೈಗೊಳ್ಳಲಾಗಿದೆ. NCRP ಪೋರ್ಟಲ್‌ನಲ್ಲಿ ಲಭ್ಯವಿದ್ದ ವರದಿ ಹಾಗೂ ವಿಡಿಯೋ ಪರಿಶೀಲಿಸಿದಾಗ ಮಕ್ಕಳ ಲೈಂಗಿಕ ಶೋಷಣೆಗೆ ಸಂಬಂಧಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಡೌನ್‌ಲೋಡ್ ಅಥವಾ ಹಂಚಿಕೊಂಡಿರುವುದು ಕಂಡುಬಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ತಾಂತ್ರಿಕ ಮಾಹಿತಿಯ ಆಧಾರದ ಮೇಲೆ ಚಿಕ್ಕಮಗಳೂರಿನ ಟಿಪ್ಪುನಗರ ನಿವಾಸಿಯೊಬ್ಬರ ವಿರುದ್ಧ ಶಂಕೆ ವ್ಯಕ್ತವಾಗಿದ್ದು, ಆರೋಪಿತನು ಸ್ನಾಪ್‌ಚಾಟ್ ಮೂಲಕ CSEAM ವಿಡಿಯೋವನ್ನು ಹಂಚಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪೊಲೀಸರು ವಶಪಡಿಸಿಕೊಂಡಿರುವ ಸುಮಾರು ಒಂದು ನಿಮಿಷದ ವಿಡಿಯೋದಲ್ಲಿ ಅಪ್ರಾಪ್ತ ಮಗುವಿನೊಂದಿಗೆ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ದೃಶ್ಯಗಳಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ದೂರಿನಲ್ಲಿ ಹೇಳಲಾಗಿದೆ.

ಈ ಸಂಬಂಧ ಚಿಕ್ಕಮಗಳೂರು ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ. 41/2026ರಡಿ ಮಾಹಿತಿ ತಂತ್ರಜ್ಞಾನ ಕಾಯ್ದೆ (IT Act) ಕಲಂ 67B ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

Child sexual abuse case registered

Share

Leave a comment

Leave a Reply

Your email address will not be published. Required fields are marked *

Don't Miss

ಮರು ಮತ ಎಣಿಕೆಯಲ್ಲಿ ಗಾಯತ್ರಿ ಶಾಂತೇಗೌಡಗೆ 9 ಮತಗಳ ಗೆಲವು

ಚಿಕ್ಕಮಗಳೂರು:  ಚಿಕ್ಕಮಗಳೂರು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದ ಮಹತ್ವದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಇಂದು ಐತಿಹಾಸಿಕ ತೀರ್ಪು ನೀಡಿದೆ. ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಅವರಿದ್ದ ಏಕಸದಸ್ಯ...

ಎನ್‌ಆರ್‌ಪುರ, ಶೃಂಗೇರಿ – ಕೊಪ್ಪ ತಾಲ್ಲೂಕಿನ ಶಾಲೆಗಳಿಗೆ ಇಂದು ರಜೆ

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ, ಪ್ರವಾಹ ಹಾಗೂ ಭೂಕುಸಿತದ ಆತಂಕದ ಹಿನ್ನೆಲೆಯಲ್ಲಿ ಜಿಲ್ಲೆಯ ನರಸಿಂಹರಾಜಪುರ, ಶೃಂಗೇರಿ ಮತ್ತು ಕೊಪ್ಪ ತಾಲ್ಲೂಕುಗಳ ಎಲ್ಲ ಅಂಗನವಾಡಿ ಕೇಂದ್ರಗಳು,...

Related Articles

ಪೆಟ್ರೋಲ್ ಬಂಕ್ ಅಳತೆಯಲ್ಲಿ ಮೋಸ ಮಾಡುತ್ತಿರುವ ಆರೋಪ

ಚಿಕ್ಕಮಗಳೂರು: ಪೆಟ್ರೋಲ್ ಬಂಕ್‌ನಲ್ಲಿ ಗ್ರಾಹಕರಿಗೆ ಅಳತೆಯಲ್ಲಿ ಮೋಸ ಮಾಡುತ್ತಿರುವ ಆರೋಪ ಚಿಕ್ಕಮಗಳೂರು ಕೆಎಸ್‌ಆರ್‌ಟಿಸಿ (KSRTC) ಬಸ್...

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಸಂಭಾವ್ಯ ಪಟ್ಟಿ ಪ್ರಕಟ

ಚಿಕ್ಕಮಗಳೂರು: ಜಿಲ್ಲಾಡಳಿತ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯವು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯ...

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ...