Home namma chikmagalur chikamagalur 25 ಲಕ್ಷ ರೂಪಾಯಿ ಮೌಲ್ಯದ ಮರಗಳ ಕಡಿದು ನಾಶ
chikamagalurCrime NewsHomeLatest Newsnamma chikmagalur

25 ಲಕ್ಷ ರೂಪಾಯಿ ಮೌಲ್ಯದ ಮರಗಳ ಕಡಿದು ನಾಶ

Share
Share

ತರೀಕೆರೆ: ಜಮೀನಿನೊಳಗೆ ಅಕ್ರಮವಾಗಿ ಅತಿಕ್ರಮ ಪ್ರವೇಶ ಮಾಡಿ ಬರೋಬ್ಬರಿ 25 ಲಕ್ಷ ರೂಪಾಯಿ ಮೌಲ್ಯದ ಮರಗಳನ್ನು ಕಡಿದು ನಾಶಪಡಿಸುವಾಗ ಪ್ರಶ್ನಿಸಲು ಹೋದವರಿಗೆ ಮಚ್ಚು ಹಾಗೂ ಲಾಂಗ್ ತೋರಿಸಿ ಜೀವಬೆದರಿಕೆ ಹಾಕಲಾಗಿದೆ ಎಂಬ ಗಂಭೀರ ಆರೋಪವೊಂದು ತರೀಕೆರೆ ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿ ಕೇಳಿ ಬಂದಿದೆ. ಗ್ರಾಮದ ಸರ್ವೆ ನಂ. 1 ರ ಜಮೀನಿನಲ್ಲಿ ಈ ಕೃತ್ಯ ನಡೆದಿದೆ.

ಕಿರಣ್ ಡಿ.ಜೆ, ದೇವಿಬಾಯಿ ಹಾಗೂ ರುದ್ರನಾಯ್ ಎಂಬುವರು ಅಕ್ರಮವಾಗಿ ಜಮೀನಿಗೆ ಮಾರಕಾಸ್ತ್ರಗಳೊಂದಿಗೆ ನುಗ್ಗಿದ್ದಾರೆ ಎಂದು ದೂರಲಾಗಿದ್ದು. ತೋಟದಲ್ಲಿದ್ದ ಬೆಲೆಬಾಳುವ ಮರಗಳನ್ನು ಸಾರಾಸಗಟಾಗಿ ಕಡಿದು ಧ್ವಂಸ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನು ಕಂಡು ಜಮೀನಿನ ಮಾಲೀಕರು ಪ್ರಶ್ನಿಸಲು ಹೋದಾಗ, ಆರೋಪಿಗಳು ಮಚ್ಚು ಮತ್ತು ಲಾಂಗ್‌ಗಳನ್ನು ಹಿಡಿದು ಓಡಾಡುತ್ತಾ, ಜಮೀನಿನ ಮಾಲೀಕ ಹಾಗೂ ಅವರ ಕುಟುಂಬಕ್ಕೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಗಲಾಟೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಹಿಂದೆ ತರೀಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ ಆರೋಪಿಗಳ ಕಿರುಕುಳ ಹಾಗೂ ಬೆದರಿಕೆ ಮುಂದುವರಿದಿತ್ತು.

ಈ ಹಿನ್ನೆಲೆಯಲ್ಲಿ ಸಂತ್ರಸ್ತರು ನ್ಯಾಯಾಲಯದ ಬಾಗಿಲು ತಟ್ಟಿದ್ದರು. ಘಟನೆಯ ಸಂಪೂರ್ಣ ವಿವರ ಆಲಿಸಿದ ತರೀಕೆರೆ ಘನ ನ್ಯಾಯಾಲಯವು ಆರೋಪಿಗಳ ವಿರುದ್ಧ ತಕ್ಷಣವೇ ಪ್ರಕರಣ ದಾಖಲಿಸಿಕೊಳ್ಳುವಂತೆ ಆದೇಶಿಸಿದೆ. ನ್ಯಾಯಾಲಯದ ನಿರ್ದೇಶನದಂತೆ ತರೀಕೆರೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Trees worth Rs 25 lakh cut down and destroyed

Share

Leave a comment

Leave a Reply

Your email address will not be published. Required fields are marked *

Don't Miss

ರಾಜ್ಯ ಮಟ್ಟದ ಕಬಡ್ಡಿಯಲ್ಲಿ ಚಿಕ್ಕಮಗಳೂರು ಮಹಿಳಾ ತಂಡಕ್ಕೆ ಚಾಂಪಿಯನ್ ಪಟ್ಟ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಸಾರಿಗೆ ಸಚಿವರಾದ ಶ್ರೀ ಬೈರತಿ ಸುರೇಶ್ ಅವರ ನೇತೃತ್ವದಲ್ಲಿ ಜುಲೈ 27ರಿಂದ 29ರವರೆಗೆ ಬೆಂಗಳೂರಿನ ದೇವಸಂದ್ರದಲ್ಲಿ ನಡೆದ ರಾಜ್ಯ ಮಟ್ಟದ ಪುರುಷ ಹಾಗೂ ಮಹಿಳೆಯರ ಕಬಡ್ಡಿ ಪಂದ್ಯಾವಳಿಯಲ್ಲಿ...

ಅಂಚೆ ಮತ ಮರು ಎಣಿಕೆ ಯಥಾಸ್ಥಿತಿ ಮುಂದುವರಿಸಲು ಸೂಚನೆ

ಶೃಂಗೇರಿ: ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಯಥಾಸ್ಥಿತಿ ಮುಂದುವರಿಸಲು ಸೂಚನೆ ನೀಡಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಆಗಸ್ಟ್‌ 19ಕ್ಕೆ ಮುಂದೂಡಿಕೆ ಮಾಡಿದೆ. 2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ...

Related Articles

ಕಾಂಗ್ರೆಸ್ ಸರ್ಕಾರದ ಸಂಪುಟ ವಿಸ್ತರಣೆ ಭ್ರಷ್ಠಚಾರಕ್ಕೆ ಬಹುಮಾನ

ಚಿಕ್ಕಮಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ವಿಸ್ತರಣೆ ಚಿಕ್ಕಮಗಳೂರು ಜಿಲ್ಲೆಗೆ...

ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು-ಸಹಾಯಕಿಯರ ಹುದ್ದೆಗಳಿಗೆ ಅರ್ಜಿ

ಚಿಕ್ಕಮಗಳೂರು: ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು...

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75...